ಹುಬ್ಬಳ್ಳಿ: ಪಡಿತರ (Ration) ಅಕ್ಕಿ ಕಳ್ಳಸಾಗಣೆ ಮಾಡಿ, ಸರ್ಕಾರಿ ಯೋಜನೆಗೆ ಮೋಸ ಮತ್ತು ಬೊಕ್ಕಸದ ನಷ್ಟಕ್ಕೆ ಕಾರಣವಾಗಿದ್ದ, ಹುಬ್ಬಳ್ಳಿ ಪ್ರತಿಷ್ಠಿತ ಉದ್ಯಮಿ ಮೇಲೆ ಧಾರವಾಡ ಜಿಲ್ಲಾ ಪೊಲೀಸ್ ಮತ್ತು ಕಂದಾಯ ಇಲಾಖೆ ದಿಟ್ಟ ಕ್ರಮ ಕೈಗೊಂಡಿದೆ.
ಬಡವರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಉದ್ಯಮಿ ಮಂಜುನಾಥ್ ವಿರೂಪಾಕ್ಷಪ್ಪ ಹರ್ಲಾಪುರ ಎಂಬವರನ್ನು ಧಾರವಾಡದಿಂದ ಬೀದರ್ಗೆ ಆರು ತಿಂಗಳ ಕಾಲ ಗಡಿಪಾರು ಮಾಡಲಾಗಿದೆ. ಹುಬ್ಬಳಿಯ ಬಿಡನಾಳ ನಿವಾಸಿಯಾಗಿರುವ ಮಂಜುನಾಥ್ ಹರ್ಲಾಪುರ, ಹಲವಾರು ವರ್ಷಗಳಿಂದ ಬಾಲಾಜಿ ಟ್ರೇಡಿಂಗ್ (balaji Trading) ಹೆಸರಿನಲ್ಲಿ ನಲ್ಲಿ ಬಡವರಿಗೆ ನೀಡುವ ಪಡಿತರ ಅಕ್ಕಿಯನ್ನು ಬೇರೆ ರಾಜ್ಯಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ. ಅಲ್ಲದೆ ಇದರ ವಿರುದ್ಧ ಧ್ವನಿ ಎತ್ತುವ ಸಾಕ್ಷಿಗಳನ್ನು ಕೂಡ ನಾಶ ಮಾಡುತ್ತಿದ್ದ.
ಇದರಿಂದಾಗಿ ಧಾರವಾಡ ಪೊಲೀಸ್ ಎಸ್ಪಿ ಲೋಕೇಶ್ ಅವರು ಆರೋಪಿಸಿ, ಮಂಜುನಾಥ್ ಗಡಿಪಾರು ಮಾಡುವಂತೆ ಎಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಈ ವಿಚಾರಣೆ ನಡೆಸಿದ ಎಸಿ ಅಶೋಕ್ ತೆಲಿ ಅವರು, ಆರು ತಿಂಗಳು ಮಂಜುನಾಥ್ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ಆರೋಪಿಗೆ ಮುಂದಿನ ವಿಧಾಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ನಾಯಕರ ಹಠಮಾರಿತನ- ಬಿಜೆಪಿ ಕಾರ್ಯಕರ್ತರ ನಡುವೆಯೇ ಡಿಶುಂ ಡಿಶುಂ!