ಹುಬ್ಬಳ್ಳಿ: ಕಳಸಾ ಬಂಡೂರಿ ಹೋರಾಟ ಕಿಚ್ಚು ಮತ್ತೆ ಹೆಚ್ಚಾಗಿದೆ. ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನೂರಾರು ರೈತರು ಬೆಂಗಳೂರು ಚಲೋ ಅಭಿಯಾನ ಆರಂಭಿಸಿದ್ದಾರೆ.
ಕಳಸಾ ಬಂಡೂರಿ ಅನುಷ್ಠಾನಕ್ಕಾಗಿ ಗೆಜೆಟೆಡ್ ನೋಟಿಫಿಕೇಶನ್ ಹೊರಡಿಸುವಂತೆ ಆಗ್ರಹಿಸಿ ಕಳೆದ ಒಂದು ತಿಂಗಳು ಪತ್ರ ಚಳುವಳಿ ಆರಂಭಿಸಿದ್ದ ರೈತರು ಹೋರಾಟಗಾರರು ಇದೀಗ ರಾಜಭವನ ಚಲೋ ಹೋರಾಟ ಆರಂಭಿಸಿದ್ದಾರೆ.
ನಾಳೆ ಬೆಳಿಗ್ಗೆ ರಾಜಭವನಕ್ಕೆ ತೆರಳಿ ನೂರಾರು ರೈತರು ಹೋರಾಟಗಾರರು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರೈತ ಹೋರಾಟಗಾರ ವೀರೇಶ ಸೊಬರದಮಠ ನೇತೃತ್ವದಲ್ಲಿ ಬೆಂಗಳೂರು ಚಲೋ ಆರಂಭಗೊಂಡಿದೆ.
ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ರೈಲಿನ ಮೂಲಕ ಬೆಂಗಳೂರು ಚಲೋ ಆರಂಭಿಸಿದ ರೈತರು ಗುರುವಾರ ರಾಜ್ಯಪಾಲರ ಕಚೇರಿಗೆ ಹೋಗಿ ಮನವಿ ಸಲ್ಲಿಸುವ ಮೂಲಕ ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಲಿದ್ದಾರೆ.