ಹುಬ್ಬಳ್ಳಿ: ಬೇರೆಯವರ ಮಾತಿಗೆ ನೀವು ಯಾರು ಕಿವಿಗೊಡಬೇಡಿ. ಕುಡಿಯಲು ನಾವು ಮಹದಾಯಿ ನೀರನ್ನು ತಂದೇ ತರುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಹಲವು ಪ್ರಯತ್ನಗಳ ಫಲವಾಗಿ ಅಮಿತ್ ಶಾ ನೇತೃತ್ವದಲ್ಲಿ ಬುಧವಾರ ರಾಜ್ಯ ಬಿಜೆಪಿ ನಾಯಕರು ಮತ್ತು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಮಾತುಕತೆ ನಡೆಸಿದ್ದೇವೆ. ಕುಡಿಯುವ ನೀರನ್ನು ತರುವ ಜವಾಬ್ದಾರಿಯನ್ನು ನಾನು, ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಷಿ ತೆಗೆದುಕೊಳ್ಳುತ್ತೇವೆ. ಇಂದಿನಿಂದ ನೀರಿನ ಚಿಂತೆಯನ್ನು ಬಿಟ್ಟು ಬಿಡಿ ಎಂದು ಹೇಳಿದರು.
ಪರಿಕ್ಕರ್ ಬರೆದ ಪತ್ರವನ್ನು ಇಟ್ಟುಕೊಂಡು ಯಾರೋ ಆಗದವರು ಹೀಗೆ ಮಾಡಿದ್ದಾರೆ. ನೀರನ್ನು ನಾನು ತಂದೆ ತರುವೆ. ಬೇರೆಯವರ ಮಾತಿಗೆ ಕಿವಿ ಗೊಡಬೇಡಿ. ನಾನು ಇಂದು ಹೇಳಿದ ಮಾತಿನಂತೆ ನೀರು ತಂದೆ ತರುವೆ. ಉತ್ತರ ಕರ್ನಾಟಕದ ಎಲ್ಲ ಕೆರೆಗಳ ನೀರು ತುಂಬಿಸುವ ಜವಾಬ್ದಾರಿ ನಮ್ಮದು ಎಂದು ಬಿಎಸ್ವೈ ಭರವಸೆ ನೀಡಿದರು. ಇದನ್ನೂ ಓದಿ: ಮಾತುಕತೆಗಷ್ಟೇ ಒಪ್ಪಿಗೆ, ನಮ್ಮ ಹಕ್ಕುಗಳಿಗೆ ತೊಂದರೆ ಆಗಬಾರದು ಪರಿಕ್ಕರ್ ಬರೆದ ಪತ್ರದಲ್ಲಿ ಏನಿದೆ?
ನಾವು ಅಮಿತ್ ಶಾ ಸಮ್ಮುಖದಲ್ಲಿ ಒಂದು ಗಂಟೆ ಚರ್ಚೆ ಮಾಡಿದ್ದು ನ್ಯಾಯ ಒದಗಿಸಲು ನಾವು ಬದ್ಧರಾಗಿದ್ದೇವೆ. ನಮ್ಮೆಲ್ಲರ ಜವಾಬ್ದಾರಿಯನ್ನು ಪೂರ್ಣ ಮಾಡುತ್ತೇವೆ ಎನ್ನುವ ಭರವಸೆ ನೀಡುತ್ತೇವೆ. ನ್ಯಾಯಾಧಿಕರದಲ್ಲಿ ಸಮರ್ಪಕವಾದ ಮಾಹಿತಿ ಸಲ್ಲಿಸಿ ಅರ್ಜಿ ಹಾಕಿ ಮಹದಾಯಿ ನೀರನ್ನು ತರುತ್ತೇವೆ ಎಂದು ಯಡಿಯೂರಪ್ಪ ಆಶ್ವಾಸನೆ ನೀಡಿದರು.
https://www.youtube.com/watch?v=TZ9qqTLPXD0
https://www.youtube.com/watch?v=IgAGJ9tffNg
https://www.youtube.com/watch?v=k8H4IP59_Sk
https://www.youtube.com/watch?v=c5Mb4OAwpa8