ಹುಬ್ಬಳ್ಳಿ: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಾಯಿ ನಿಧನ ಹೊಂದಿದ್ದಾರೆ. 86 ವರ್ಷದ ಬಸವಣೆವ್ವ ಶಿವಪ್ಪ ಶೆಟ್ಟರ್ ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹುಬ್ಬಳ್ಳಿಯಲ್ಲಿರುವ ಸಚಿವ ಜಗದೀಶ್ ಶೆಟ್ಟರ್ ಸಹೋದರ ಎಂಎಲ್ಸಿ ಪ್ರದೀಪ್ ಶೆಟ್ಟರ್ ಮನೆಯಲ್ಲಿ ಅವರಿಗೆ ಹೃದಯಾಘಾತವಾಗಿದೆ. ನಾಳೆ ಮುಂಜಾನೆ 11 ಗಂಟೆಗೆ ಹುಬ್ಬಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಶೆಟ್ಟರ್ ಕುಟುಂಬದ ಮೂಲಗಳು ತಿಳಿಸಿವೆ.
ಬಸವಣೆವ್ವ ಶಿವಪ್ಪ ಶೆಟ್ಟರ್ಗೆ ಮಾಜಿ ಸಿಎಂ ಹಾಲಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಎಂಎಲ್ಸಿ ಪ್ರದೀಪ್ ಶೆಟ್ಟರ್ ಇಬ್ಬರು ಪುತ್ರರಿದ್ದು, ಅಪಾರ ಕುಟುಂಬಸ್ಥನ್ನು ಅಗಲಿರುವ ಬಸವಣೆವ್ವ ಶೆಟ್ಟರ್ ನಿಧನಕ್ಕೆ ಗಣ್ಯರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.