ಕೆರೆಯಲ್ಲಿ ಈಜಲು ತೆರೆಳಿದ್ದ ನಾಲ್ವರು ಸ್ನೇಹಿತರು ನೀರು ಪಾಲು

Public TV
1 Min Read
collage hbl savu

ಹುಬ್ಬಳ್ಳಿ: ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಸ್ನೇಹಿತರು ನೀರು ಪಾಲಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳದ ಕೆರೆಯಲ್ಲಿ 7 ಸ್ನೇಹಿತರು ಈಜಲು ತೆರಳಿದ ವೇಳೆ ನಾಲ್ವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಹುಬ್ಬಳ್ಳಿಯ ನಿವಾಸಿಗಳಾದ ಜುನೈದ್ (18), ಸುಭಾನಿ (18), ಐಯಾನ್ (18) ಮತ್ತು ಸುಭಾನಿ (18) ಎಂದು ಗುರುತಿಸಲಾಗಿದೆ.

Police Jeep

ಈದ್ ಮಿಲಾದ್ ಹಬ್ಬದ ನಂತರ ಇಂದು ಏಳು ಜನ ಸ್ನೇಹಿತರು ಸೇರಿಕೊಂಡು ದೇವರಗುಡಿಹಾಳ ಕೆರೆಗೆ ಹೋದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಸ್ಥಳೀಯರ ಸಹಾಯಯೊಂದಿಗೆ ಮೃತರ ಶವಗಳನ್ನು ಪತ್ತೆ ಮಾಡಿದ್ದಾರೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *