ನಮಾಜ್‍ಗೆ ತಡೆ- ಪೊಲೀಸರ ಮೇಲೆ ಕಲ್ಲು ತೂರಾಟ

Public TV
1 Min Read
Hubli Police 2

ಹುಬ್ಬಳ್ಳಿ: ನಮಾಜ್ ವಿಷಯಕ್ಕೆ ಸಂಬಂಧಿಸಿದಂತೆ ಮುಸ್ಲಿಮರು ಮತ್ತು ಪೊಲೀಸ್ ಸಿಬ್ಬಂದಿಯ ಮಧ್ಯೆ ಗಲಾಟೆ ನಡೆದಿರುವ ಘಟನೆ ಹುಬ್ಬಳ್ಳಿ ಮಂಟೂರ್ ರೋಡ್ ಹತ್ತಿರದ ಅರಳಿಕಟ್ಟಿ ಕಾಲೋನಿ ಬಳಿ ನಡೆದಿದೆ.

ಲಾಕ್‍ಡೌನ್ ಮಧ್ಯೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ನಮಾಜ್ ಮಾಡುವುದನ್ನು ನಿಲ್ಲಿಸಲಾಗಿದೆ. ಕೆಲ ಮೌಲ್ವಿಗಳೇ ನಮಾಜ್ ಮಾಡಲು ಮಸೀದಿಗೆ ಬರಬೇಡಿ ಎಂದು ಮನವಿ ಕೂಡ ಮಾಡಿದ್ದಾರೆ. ಆದರೆ ಈ ಮಧ್ಯೆಯೂ ಕೂಡ ನಮಾಜ್ ಮಾಡುವ ವಿಚಾರಕ್ಕೆ ಮುಸ್ಲಿಮರು ಮತ್ತು ಪೊಲೀಸರ ನಡುವೆ ಜಗಳವಾಗಿ, ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ.

Hubli Police

ನಮಾಜ್ ವಿಷಯಕ್ಕೆ ಸಂಬಂಧಿಸಿದಂತೆ ಮೊದಲು ಪೊಲೀಸರ ಹಾಗೂ ಮುಸ್ಲಿಮರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಸ್ಥಳೀಯ ಕೆಲ ಯುವಕರು ಕಲ್ಲು ತೂರಾಟ ಮಾಡಿದ್ದಾರೆ. ಈ ಘಟನೆಯಲ್ಲಿ ಮೂರು ಜನ ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಹಳನ್ನು ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಈ ಸಂಬಂಧ ಟೌನ್ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *