ಮರಿಮೊಮ್ಮಗಳಿಗೆ ವಿಶಿಷ್ಟ ಹೆಸರಿಟ್ಟು, ನಾಮಕರಣ ಮಾಡಿದ ಬಿಎಸ್‍ವೈ

Public TV
1 Min Read
Yeddyurappa 1

ಹುಬ್ಬಳ್ಳಿ: ಸಿಎಂ ಬಿಎಸ್ ಯಡಿಯೂರಪ್ಪ ಇಂದು ತಮ್ಮ ಮರಿಮೊಮ್ಮಗಳ ನಾಮಕರಣ ಸಮಾರಂಭದಲ್ಲಿ ಭಾಗಿಯಾಗಿ ವಿಶಿಷ್ಟವಾದ ಹೆಸರಿಟ್ಟಿದ್ದಾರೆ.

ಹುಬ್ಬಳ್ಳಿಯ ಖಾಸಗಿ ಹೊಟೇಲ್‍ನಲ್ಲಿ ನಡೆದ ಸಮಾರಂಭದಲ್ಲಿ ಯಡಿಯೂರಪ್ಪ ಪುತ್ರಿ ಪದ್ಮಾವತಿ ಹಾಗೂ ಅಳಿಯ ವಿರುಪಾಕ್ಷಪ್ಪ ಯಮಕನಮರಡಿ ಅವರ ಪುತ್ರ ಶಶಿಧರ ಯಮನಕನಮರಡಿ ಅವರ ಪುತ್ರಿಗೆ ‘ನೈರಾ’ ಎಂದು ನಾಮಕರಣ ಮಾಡಿದ್ದಾರೆ.

Yeddyurappa2

ಖಾಸಗಿ ಹೊಟೇಲ್‍ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮರಿಮೊಮ್ಮಗಳಿಗೆ ನಾಮಕರಣ ಮಾಡಿದ ಸಿಎಂ ಬಿಎಸ್‍ವೈ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಪ್ರದೀಪ್ ಶೆಟ್ಟರ್ ಮತ್ತಿತರರು ಉಪಸ್ಥಿತಿರಿದ್ದರು.

ನಾಮಕರಣ ಸಮಾರಂಭದಲ್ಲಿ ಭಾಗಿಯಾಗುವ ಮೂಲಕ ಸಿಎಂ ಬಿಎಸ್‍ವೈ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಕುಟುಂಬ ಸದಸ್ಯರ ಜೊತೆ ಕಾಲ ಕಳೆದು ಎಲ್ಲರ ಜೊತೆ ಖುಷಿ ಖುಷಿಯಾಗಿ ಸಮಯ ಕಳೆದಿದ್ದು ವಿಶೇಷವಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *