Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಡಿಗೋ ಸಮಸ್ಯೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆಯ ಅಸ್ಥಿ ಹಿಡಿದು ಮಗಳ ಪರದಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂಡಿಗೋ ಸಮಸ್ಯೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆಯ ಅಸ್ಥಿ ಹಿಡಿದು ಮಗಳ ಪರದಾಟ

Bengaluru City

ಇಂಡಿಗೋ ಸಮಸ್ಯೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆಯ ಅಸ್ಥಿ ಹಿಡಿದು ಮಗಳ ಪರದಾಟ

Public TV
Last updated: December 5, 2025 6:51 pm
Public TV
Share
2 Min Read
Bengaluru Airport 2
SHARE

ಚಿಕ್ಕಬಳ್ಳಾಪುರ/ಬೆಂಗಳೂರು: ಸಿಲಿಕಾನ್‌ ಸಿಟಿ ಸೇರಿದಂತೆ ದೇಶಾದ್ಯಂತ ಹಲವು ವಿಮಾನ ನಿಲ್ದಾಣಗಳಲ್ಲಿ (Bengaluru Airport) ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಸತತ 4ನೇ ದಿನವೂ ಕಾಲಿಟ್ಟಿದೆ. ನಿನ್ನೆ ಒಂದೇ ದಿನ ಬರೋಬ್ಬರಿ 550 ವಿಮಾನಗಳ ಸಂಚಾರ ರದ್ದಾಗಿದೆ. ಸಿಬ್ಬಂದಿಯ ಕೊರತೆಯಿಂದಾಗಿ ಇಂಡಿಗೋ ದೇಶೀಯ, ಅಂತಾರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಬ್ರೇಕ್ ಹಾಕಿದೆ. ಇದರಿಂದ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ಒಂದರಲ್ಲೇ ಒಟ್ಟು 205 ಇಂಡಿಗೋ (IndiGo) ವಿಮಾನಗಳ ಹಾರಾಟ ರದ್ದಾಗಿದೆ. ಕಳೆದ 3-4 ದಿನಗಳಿಂದ ಈ ಸಮಸ್ಯೆ ಆಗುತ್ತಿದ್ದು, ಸಾವಿರಾರು ಪ್ರಯಾಣಿಕರು ಪರದಾಡಿದ್ದಾರೆ.

Bengaluru Airport 1

ಎಲ್ಲಿ ನೋಡಿದ್ರೂ ಜನವೋ ಜನ
ಇನ್ನೂ ಕಳೆದ 24 ವರ್ಷಗಳಲ್ಲೇ ಅತಿಹೆಚ್ಚು ವಿಮಾನಗಳ ಹಾರಾಟದಲ್ಲಿ ಸಮಸ್ಯೆ ಆಗಿರೋದು ಸಹಜವಾಗಿಯೇ ಪ್ರಯಾಣಿಕರಲ್ಲಿ ಸಮಸ್ಯೆ ಉಂಟು ಮಾಡಿದೆ. ಇಂದೂ ಕೂಡ ದೇಶದ ಹಲವು ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದು, ಹಲವು ವಿಮಾನಗಳು ರದ್ದಾಗಿವೆ. ಇಂದು ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 102 ಇಂಡಿಗೋ ವಿಮಾನಗಳು ರದ್ದಾಗಿವೆ. ಹೈದ್ರಾಬಾದ್‌ನಲ್ಲಿ 92 ವಿಮಾನಗಳು ರದ್ದಾಗಿದ್ದು, ಮುಂಬೈ, ದೆಹಲಿಯಲ್ಲೂ ವಿಮಾನಗಳನ್ನ ಕ್ಯಾನ್ಸಲ್ ಮಾಡಲಾಗಿದೆ. ಇದರಿಂದ ಪ್ರಯಾಣಿಕರು ಇಂಡಿಗೋ ಸಂಸ್ಥೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರು ಏರ್‌ಪೋರ್ಟ್‌ನ ದೃಶ್ಯ ಹೇಗಿದೆಯೆಂದರೆ, ರೈಲ್ವೆ ಸ್ಟೇಷನ್ ನಂತಾಗಿದೆ.

ತಂದೆ ಅಸ್ಥಿ ಜೊತೆ ಏರ್‌ಪೋರ್ಟ್‌ನಲ್ಲೇ ಮಗಳು
ಇನ್ನು.. ಇಂಡಿಗೋ ವಿಮಾನಗಳಲ್ಲಿ ತಾಂತ್ರಿಕ ತೊಂದ್ರೆ ಹಾಗೂ ಪೈಲಟ್‌ಗಳ ಕೊರತೆಯಿಂದ ದೇಶದಾದ್ಯಂತ ಹಲವು ವಿಮಾನಗಳು ರದ್ದಾಗುತ್ತಿವೆ. ಇದೇ ರೀತಿ ಭುವನೇಶ್ವರಕ್ಕೆ ತೆರಳಬೇಕಿದ್ದ ವರನ ಕುಟುಂಬ ಪರದಾಡಿದೆ. 110 ಮಂದಿ ಏರ್‌ಪೋರ್ಟ್‌ನಲ್ಲೇ ಪರದಾಡಿದ್ದಾರೆ. ಹೀಗಾಗಿ ಇಂಡಿಗೋ ವಿರುದ್ಧ ವರನ ತಂದೆ ಮಹೇಂದ್ರ ಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.

ಇತ್ತ, ಹರಿದ್ವಾರಕ್ಕೆ ತಂದೆಯ ಅಸ್ಥಿ ಬಿಡಲು ತೆರಳುತ್ತಿದ್ದ ಮಗಳು ಕೂಡ ವಿಮಾನ ಸ್ಥಗಿತದಿಂದ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಇನ್ನು, ಬೆಂಗಳೂರಿನಿಂದ ಅಹಮದಾಬಾದ್‌ಗೆ ತಾಯಿಯನ್ನ ಚಿಕಿತ್ಸೆಗೆ ಕರೆದುಕೊಂಡು ಹೊರಟಿದ್ದ ಮಗನಿಗೂ ಶಾಕ್ ಎದುರಾಗಿದೆ. ಏರ್‌ಪೋರ್ಟ್‌ಗೆ ತಾಯಿಯನ್ನು ಕರೆದುಕೊಂಡು ಬಂದ ಮಗನ ಮೊಬೈಲ್‌ಗೆ ವಿಮಾನ ರದ್ದು ಮಾಹಿತಿ ಬಂದಿದೆ. ಹೀಗಾಗಿ ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ತಾಯಿ ಚಿಕಿತ್ಸೆಗೆ ಅಪಾಯಿಂಟ್ಮೆಂಟ್‌ ಪಡೆದಿದ್ದ ರಂಜಿತ್ ಪರದಾಡುವ ಪರಿಸ್ಥಿತಿ ಎದುರಾಗಿದೆ.

ಏರ್‌ಪೋರ್ಟ್‌ನಲ್ಲೇ ಭಜನೆ ಮಾಡಿ ಆಕ್ರೋಶ
ಇನ್ನು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಕ್ಯಾನ್ಸಲ್‌ನಿಂದ ಪ್ರಯಾಣಿಕರು ಪರದಾಡಿದ್ರು. ಇಂಡಿಗೋ ಸಂಸ್ಥೆ ವಿರುದ್ಧ ಹಿಡಿಶಾಪ ಹಾಕಿದ್ರು. ಏರ್‌ಪೋರ್ಟ್‌ನಲ್ಲೇ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ ಪ್ರಯಾಣಿಕರು, ಭಜನೆ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ರು. ಇಂದು ಕೂಡ 400ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ದೆಹಲಿ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ ಹಾಗೂ ಹೊರಡಬೇಕಿದ್ದ 220ಕ್ಕೂ ಹೆಚ್ಚು ವಿಮಾನಗಳು ರದ್ದಾಗಿವೆ. ಹೀಗಾಗಿ ನಿಲ್ದಾಣಗಳಲ್ಲಿ ಪ್ರಯಾಣಿಕರು ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಟಿಕೆಟ್ ಬುಕಿಂಗ್ ಕ್ಯಾನ್ಸಲ್‌ಗೆ ಸಾಲು ನಿಂತ ಪ್ರಯಾಣಿಕರು
ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ದಂಡೇ ಬಂದಿದೆ. ಸುಮಾರು ಗಂಟೆಗಳ ಕಾಲ ನಿಂತಲ್ಲೇ ನಿಂತಿರುವ ಪ್ರಯಾಣಿಕರು ಇದೀಗ ಟಿಕೆಟ್ ಬುಕಿಂಗ್ ಕ್ಯಾನ್ಸಲೇಷನ್‌ಗೆ ಮುಂದಾಗಿದ್ದಾರೆ. ಅಯೋಧ್ಯೆಯಲ್ಲಿ ನಾಳೆ ಶೌರ್ಯ ದಿನ ಹಿನ್ನೆಲೆ ಅಯೋಧ್ಯೆಗೆ ತೆರಳಬೇಕಿದ್ದ ವಿಮಾನ ಕೂಡ ರದ್ದಾಗಿದ್ದು, ನೂರಾರು ಪ್ರಯಾಣಿಕರು ಪರದಾಡಿದ್ದಾರೆ. ಈ ಮಧ್ಯೆ, ಇಂಡಿಗೋ ವಿಮಾನಗಳ ಹಾರಾಟದಲ್ಲೆ ಸಮಸ್ಯೆ ಹಾಗೂ ಇತರೆ ವಿಮಾನಗಳ ಟಿಕೆಟ್ ಬೆಲೆ ಏರಿಕೆ ಕಾರಣ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಇಂಡಿಗೋ ವೈಫಲ್ಯವು ಸರ್ಕಾರದ ಈ ಏಕಸ್ವಾಮ್ಯ ಮಾದರಿಯ ಬೆಲೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

TAGGED:bengaluru airportDelhi AirportIndi Go Flights CancelsIndiGo Domestic Flightsಇಂಡಿಗೋಇಂಡಿಗೋ ವಿಮಾನ ನಿಲ್ದಾಣಬೆಂಗಳೂರು ಏರ್‌ಪೋರ್ಟ್‌
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

PUC Exam
Bagalkot

All The Best Students – ಇಂದಿನಿಂದ ದ್ವಿತೀಯ PUC ಪರೀಕ್ಷೆ; ಅಕ್ರಮ ತಡೆಗೆ ಕಟ್ಟೆಚ್ಚರ

Public TV
By Public TV
20 minutes ago
Blood Moon
Bengaluru City

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Public TV
By Public TV
53 minutes ago
Raichur Accident
Crime

ರಾಯಚೂರಿನಲ್ಲಿ ಭೀಕರ ಅಪಘಾತ – ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Public TV
By Public TV
56 minutes ago
Chikkaballapura Lover
Chikkaballapur

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ – ಪುಟ್ಟ ಮಕ್ಕಳಿಬ್ಬರು ಅನಾಥ!

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ: 28-02-2026

Public TV
By Public TV
2 hours ago
Sharanprakash Patil 1
Kalaburagi

ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ದ್ವಿಗುಣ: ಶರಣಪ್ರಕಾಶ ಪಾಟೀಲ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?