ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಮರವೊಂದು ಬಿದಿದ್ದು, ಬೈಕ್ ಸವಾರ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆಯೊಂದು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ತಾಲೂಕಿನ ನಂದಿ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 7 ರ ಮಾರ್ಗದ ರಸ್ತೆಯಲ್ಲಿ ನಡೆದಿದೆ. ಸುಲ್ತಾನ್ ಪೇಟೆ ಗ್ರಾಮದ ಬೈಕ್ ಸವಾರ ನಾಗರಾಜು ಅದೃಷ್ಟವಶಾತ್ ಘಟನೆಯಲ್ಲಿ ಪಾರಾಗಿದ್ದಾರೆ.
ನಾಗರಾಜು ಅವರು ಬೈಕ್ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಇದರಿಂದ ಸವಾರ ಪಾರಾಗಿದ್ದು, ಟಿವಿಎಸ್ ಎಕ್ಸ್ ಎಲ್ ವಾಹನ ಮರದಡಿ ಸಿಲುಕಿಕೊಂಡಿದೆ.
ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.