Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಕ್ಕೇರಿಯಲ್ಲಿ ಗೋರಕ್ಷಕರ ಮೇಲೆ ಹಲ್ಲೆ ಪ್ರಕರಣ – ಶ್ರೀರಾಮಸೇನೆ ಕಾರ್ಯಕರ್ತರ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಹುಕ್ಕೇರಿಯಲ್ಲಿ ಗೋರಕ್ಷಕರ ಮೇಲೆ ಹಲ್ಲೆ ಪ್ರಕರಣ – ಶ್ರೀರಾಮಸೇನೆ ಕಾರ್ಯಕರ್ತರ ವಿರುದ್ಧ FIR

Belgaum

ಹುಕ್ಕೇರಿಯಲ್ಲಿ ಗೋರಕ್ಷಕರ ಮೇಲೆ ಹಲ್ಲೆ ಪ್ರಕರಣ – ಶ್ರೀರಾಮಸೇನೆ ಕಾರ್ಯಕರ್ತರ ವಿರುದ್ಧ FIR

Public TV
Last updated: June 30, 2025 6:59 pm
Public TV
Share
3 Min Read
Chikkodi 02
SHARE

ಬೆಳಗಾವಿ: ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಇಂಗಳಿ ಗ್ರಾಮದಲ್ಲಿ ಶ್ರೀ ರಾಮಸೇನೆ ಕಾರ್ಯಕರ್ತರನ್ನ ಗಿಡಕ್ಕೆ ಕಟ್ಟಿ ಥಳಿಸಿದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಹಲ್ಲೆಗೊಳಗಾದ ಗೋ ರಕ್ಷಕರು ಹಾಗೂ ಹಲ್ಲೆ ಮಾಡಿದವರ ಇಬ್ಬರ ಮೇಲೂ ಪ್ರಕರಣ ದಾಖಲಿಸಿಕೊಂಡು ಪೊಲೀಸರು (Belagavi Police) ತನಿಖೆ ಆರಂಭಿಸಿದ್ದಾರೆ.

ಇಂಗಳಿ ಗ್ರಾಮದಲ್ಲಿ ಅಕ್ರಮ ಗೋ ಸಾಗಾಟ ತಡೆಯಲು ಹೋದ ಶ್ರೀರಾಮಸೇನೆ ಕಾರ್ಯಕರ್ತರ (Sri Rama Sena Workers) ಮೇಲಿನ ಹಲ್ಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಡೆತ ತಿಂದ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಎಫ್‌ಐಅರ್ ದಾಖಲಾಗಿದೆ. ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಶಿವಪುತ್ರ ಸನದಿ ಎಂಬುವರು ದೂರು ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಮಹಿಳೆಯರ ಮೇಲೆ ಹಲ್ಲೆ ಮಾಡಿದ ಆರೋಪ ದಾಖಲಾಗಿದೆ. ಇದನ್ನೂ ಓದಿ: ಗೋ ರಕ್ಷಣೆ ಮಾಡಲು ಮುಂದಾಗಿದ್ದಕ್ಕೆ ಮರಕ್ಕೆ ಕಟ್ಟಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ

Sri Rama Sena activists tied to a tree and attacked for trying to protect cows hukkeri

ಇನ್ನು ಮರಕ್ಕೆ ಕಟ್ಟಿ ಹಾಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೊ ಪ್ರಕರಣವನ್ನ ಯಮಕನಮರಡಿ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಶಿವಪುತ್ರ ಸನದಿ, ಬಾಬುಸಾಬ್ ಮುಲ್ತಾನಿ ಮತ್ತು ಇಂಗಳಿ ಗ್ರಾಮದ ಕೆಲವರ ಮೇಲೆ ದೂರು ದಾಖಲಾಗಿದೆ. ಎರಡೂ ಕಡೆ ದೂರುಗಳನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.

ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿದ ಶ್ರೀರಾಮಸೇನೆ ಪ್ರತಿಭಟನೆಗೆ ಕರೆ ನೀಡಿದೆ. ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಜುಲೈ 3ರಂದು ಇಂಗಳಿ ಚಲೋ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇದನ್ನೂ ಓದಿ: ಶ್ರೀರಾಮಸೇನೆ ಕಾರ್ಯಕರ್ತರು ನೈತಿಕ ಪೊಲೀಸ್‌ಗಿರಿ ಮಾಡಲು ಹೋಗಿದ್ದು ತಪ್ಪು – ಪರಮೇಶ್ವರ್

Chikkodi

ನಾಲ್ವರ ಬಂಧನ
ಗೋರಕ್ಷಕರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧ ಬೆಳಗಾವಿ (Belagavi) ಎಸ್‌ಪಿ ಭೀಮಾಶಂಕರ್ ಗುಳೇದ್ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಶ್ರೀರಾಮಸೇನೆ ಕಾರ್ಯಕರ್ತರೇ ಮೊದಲು ಮನೆಗೆ ನುಗ್ಗಿದ್ದು ಬಳಿಕ ಅವರ ಮೇಲಿನ ಹಲ್ಲೆ ನಡೆದಿದ್ದು ದುರಾದೃಷ್ಟಕರ. ಹಲ್ಲೆ ಕುರಿತು ನಾವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ. ಜೂನ್ 28ರಂದು ಗೋ ಶಾಲೆಯಲ್ಲಿ ದನದ ಮಾಲೀಕ ಗೋವು ಬಿಡಿಸಿಕೊಳ್ಳಲು ಹೋಗ್ತಾನೆ. ಆತನನ್ನ ಹಿಂಬಾಲಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು ವಾಹನದ ಮಾಲೀಕ ಬಾಬು ಸಾಬ್ ಮನೆಗೆ ನುಗ್ಗುತ್ತಾರೆ. ಮನೆಯಲ್ಲಿ ಹೆಣ್ಣು ಮಕ್ಕಳಿರ್ತಾರೆ. ಈ ವೇಳೆ ಮಹಿಳೆಯರು ಕಿರುಚಿಕೊಂಡಾಗ ಪಕ್ಕದ ಜನರು ಬರ್ತಾರೆ. ಬಂದು ಎಲ್ಲರನ್ನೂ ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಘಟನೆ ಸಂಬಂಧ ಪೊಲೀಸರ ಬಳಿ ಆ ದಿನವೇ ಇಬ್ಬರು ಯಾವುದೇ ತಂಟೆ ತಕರಾರು ಇಲ್ಲ ಅಂತಾ ಬರೆದುಕೊಟ್ಟಿದ್ದಾರೆ ಅಂತ ಹೇಳಿದ್ದಾರೆ. ಇದನ್ನೂ ಓದಿ: ಹಾಸನ ಯುವಜನತೆಯಲ್ಲಿ ಹೃದಯಾಘಾತ – ತನಿಖೆಗೆ ವಿಶೇಷ ಸಮಿತಿ ರಚಿಸಿದ ಸರ್ಕಾರ

ಇನ್ನೂ ಈ ಘೋರ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿ ನಾಲ್ವರನ್ನು ಬಂಧಿಸಿದ್ದೇವೆ. ನಾಲ್ವರಲ್ಲಿ ಓರ್ವ ಹಿಂದೂ, ಮೂವರು ಮುಸ್ಲಿಮರ ಬಂಧನವಾಗಿದೆ. ಮುಸ್ಲಿಮರು ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿಲ್ಲ. ಎಲ್ಲರೂ ಸೇರಿಕೊಂಡು ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಶ್ರೀರಾಮ ಸೇನೆ ಕಾರ್ಯಕರ್ತ ಮಹಾವೀರ್ ಸೊಲ್ಲಾಪುರೆ ಸೇರಿ ಇನ್ನುಳಿದವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಶಿವಪುತ್ರ ಸನದಿ ಡ್ರೈವರ್‌ನಿಂದ ದೂರು ದಾಖಲಾಗಿದೆ. ಮಹಾವೀರ್‌ಗೆ ಕಲಬುರಗಿಗೆ ಗಡಿ ಪಾರು ಮಾಡಲಾಗಿತ್ತು. ಗಡಿ ಪಾರಾದ ರೌಡಿ ಶೀಟರ್ ಮಹಾವೀರ್ ಇಲ್ಲಿಗ್ಯಾಕೆ ಬಂದಿದ್ದ. ಒಬ್ಬ ರೌಡಿ ಶೀಟರ್‌ಗೆ ಸಂಘಟನೆಯವರು ಯಾಕೆ ಸಪೋರ್ಟ್ ಮಾಡ್ತಿದ್ದಾರೆ. ಇಂತವರ ಪರ ಪ್ರತಿಭಟನೆ ಮಾಡಲು ನಾವು ಅವಕಾಶ ಕೊಡಲ್ಲ ಎಂದು ಎಸ್‌ಪಿ ಶ್ರೀ ರಾಮಸೇನೆ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

TAGGED:chikkodihindu workershukkerimuslimsSri Rama Senaಚಿಕ್ಕೋಡಿಬೆಳಗಾವಿಶ್ರೀರಾಮಸೇನೆಹಲ್ಲೆ ಪ್ರಕರಣಹುಕ್ಕೇರಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
4 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
5 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
5 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
5 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
6 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?