-ಇ-ಹುಂಡಿ ಮೂಲಕ 6.6 ಲಕ್ಷ ಸಂಗ್ರಹ
ಚಾಮರಾಜನಗರ: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಮಾಡಲಾಗಿದ್ದು, 15 ವಿದೇಶಿ ಕರೆನ್ಸಿಗಳು ಸೇರಿ 2.6 ಕೋಟಿ ರೂ. ಸಂಗ್ರಹವಾಗಿದೆ. ಈ ಮೂಲಕ ಮಾದಪ್ಪ ಮತ್ತೆ ಕೋಟಿ ಒಡೆಯನಾಗಿದ್ದಾನೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು (ಜೂ.19) ಹುಂಡಿ ಹಣ ಎಣಿಕೆ ಮಾಡಲಾಯಿತು. ಈ ಬಾರಿ ಕೇವಲ 34 ದಿನಗಳಲ್ಲಿ 2.65 ಕೋಟಿ ರೂ. ಸಂಗ್ರಹವಾಗಿದೆ.ಇದನ್ನೂ ಓದಿ: ಬಸ್ನಲ್ಲಿ ಕಿಟಕಿ ಪಕ್ಕದ ಸೀಟಿಗಾಗಿ ಯುವಕನಿಗೆ ಚಾಕು ಇರಿತ – ಇಬ್ಬರು ಅಪ್ರಾಪ್ತರು ಅರೆಸ್ಟ್
ಸರ್ಕಾರಿ ರಜಾ ದಿನ, ಅಮಾವಾಸ್ಯೆ ಸೇರಿದಂತೆ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಹೀಗಾಗಿ 2,65,04,712 ರೂ. ನಗದು, 58 ಗ್ರಾಂ ಚಿನ್ನ ಹಾಗೂ 2.7 ಕೆಜಿ ಬೆಳ್ಳಿ ಸಂಗ್ರಹವಾಗಿದೆ. ಇದಲ್ಲದೇ ಇ-ಹುಂಡಿಯಿಂದ 6,66,104 ರೂ. ಹಾಗೂ 15 ವಿದೇಶಿ ಕರೆನ್ಸಿಗಳು ಬಂದಿವೆ.
ಇದಕ್ಕೂ ಮುನ್ನ ಏಪ್ರಿಲ್ ತಿಂಗಳಲ್ಲಿ ಸಾಲೂರು ಶ್ರೀಗಳ ನೇತೃತ್ವದಲ್ಲಿ ಹುಂಡಿ ಎಣಿಕೆ ಮಾಡಲಾಗಿತ್ತು. ಆ ವೇಳೆ 35 ದಿನಗಳ ಅವಧಿಯಲ್ಲಿ ಬರೋಬ್ಬರಿ 3.26 ಕೋಟಿ ಕೋಟಿ ರೂ. ಸಂಗ್ರಹವಾಗಿತ್ತು. ಅಲ್ಲದೇ 47 ಗ್ರಾಂ ಚಿನ್ನ, 2 ಕೆಜಿ 200 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿತ್ತು. ಇದರೊಂದಿಗೆ 11 ವಿದೇಶಿ ನೋಟುಗಳು, 2,000 ರೂ. ಮುಖಬೆಲೆಯ 20 ನೋಟುಗಳು ಹುಂಡಿಯಲ್ಲಿ ಸಿಕ್ಕಿದ್ದವು. ಇದನ್ನೂ ಓದಿ: ಮುನೀರ್ಗೆ ಟ್ರಂಪ್ ಡಿನ್ನರ್ – ಪಾಕ್ ನೆಲದಿಂದ ಅಮೆರಿಕ ಇರಾನ್ ಮೇಲೆ ದಾಳಿ ಮಾಡುತ್ತಾ?