Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌.ಅಶೋಕ್‌ ವಿರುದ್ಧ ಸಚಿವ ಪರಮೇಶ್ವರ್‌ ನೂರಾರು ಕೋಟಿ ಭೂ ಹಗರಣ ಬಾಂಬ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರ್‌.ಅಶೋಕ್‌ ವಿರುದ್ಧ ಸಚಿವ ಪರಮೇಶ್ವರ್‌ ನೂರಾರು ಕೋಟಿ ಭೂ ಹಗರಣ ಬಾಂಬ್‌

Bengaluru City

ಆರ್‌.ಅಶೋಕ್‌ ವಿರುದ್ಧ ಸಚಿವ ಪರಮೇಶ್ವರ್‌ ನೂರಾರು ಕೋಟಿ ಭೂ ಹಗರಣ ಬಾಂಬ್‌

Public TV
Last updated: October 2, 2024 7:27 pm
Public TV
Share
3 Min Read
G Parameshwara 2
SHARE

– ಲೊಟ್ಟೆಗೊಳ್ಳಹಳ್ಳಿಯಲ್ಲಿ ಬಹುಕೋಟಿ ಭೂಹಗರಣ ಪ್ರಸ್ತಾಪ

ಬೆಂಗಳೂರು: ವಿಪಕ್ಷ ನಾಯಕ ಆರ್‌. ಅಶೋಕ್‌ (R Ashoka) ವಿರುದ್ಧ ಗೃಹ ಸಚಿವ ಡಾ.ಜಿ ಪರಮೇಶ್ವರ್‌ (G Parameshwar) ಅವರು, ನೂರಾರು ಕೋಟಿ ಭೂಹಗರಣದ (Land Scam) ಬಾಂಬ್‌ ಸಿಡಿಸಿದ್ದಾರೆ.

G Parameshwara 1

ಗೃಹ ಸಚಿವ ಡಾ.ಜಿ ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್, ಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರ ಸಮ್ಮುಖದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ವೇಳೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ದಾಖಲೆ ಬಿಡುಗಡೆ ಮಾಡಿದರು. ಇದನ್ನೂ ಓದಿ: ICC Test Ranking | ಅಶ್ವಿನ್‌ ಹಿಂದಿಕ್ಕಿ ನಂ.1 ಪಟ್ಟಕ್ಕೇರಿದ ಬುಮ್ರಾ – ಬ್ಯಾಟಿಂಗ್‌ನಲ್ಲಿ ಯಶಸ್ವಿ, ಕೊಹ್ಲಿ ಶೈನ್‌

ಕಳೆದ ಕೆಲ ದಿನಗಳಿಂದ ಮುಡಾ ಬಗ್ಗೆ ಚರ್ಚೆಯಾಗ್ತಿದೆ. ಮುಖ್ಯಮಂತ್ರಿಗಳ ಪತ್ನಿ ಮುಡಾಗೆ ನಿವೇಶನಗಳನ್ನ ವಾಪಸ್ ಮಾಡಿದ್ದಾರೆ. ಆದರೂ ಬಿಜೆಪಿಯ ಮುಖಂಡರು ವಾಪಸ್ ಕೊಟ್ಟಿರೋದೆ ಸರಿಯಿಲ್ಲ. ತಪ್ಪನ್ನ ಒಪ್ಪಿಕೊಂಡಂತಾಯ್ತು ಅಂತಾ ಬೇರೆ ಬೇರೆ ಅರ್ಥದಲ್ಲಿ ಮಾತಾಡ್ತಿದ್ದಾರೆ. ಆದ್ರೆ ವಿಪಕ್ಷ ನಾಯಕ ಆರ್‌. ಅಶೋಕ್‌ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಮಾಡಿರೋದೆ ತಪ್ಪು. ಸರ್ಕಾರದ ಜಾಗ ಕಬಳಿಸಿ ಒಪ್ಪಿಕೊಂಡಾಯ್ತು ಅಂತಾ ಅವರದೇ ಭಾಷೆಯಲ್ಲಿ ಮಾತಾಡಿದ್ದಾರೆ. ಅವರ ಅವಧಿಯಲ್ಲಾದ ಹಗರಣದ ಬಗ್ಗೆ ರಾಜ್ಯದ ಜನ್ರ ಮುಂದಿಡೋಕೆ ಬಂದಿದ್ದೀವಿ ಎಂದು ಹೇಳಿದರು. ಇದನ್ನೂ ಓದಿ: 200ನೇ ವಿಜಯೋತ್ಸವ ಆಚರಣೆ – ಕಿತ್ತೂರು ಉತ್ಸವ ಜ್ಯೋತಿಗೆ ಸಿಎಂ ಚಾಲನೆ

ಲೊಟ್ಟೆಗೊಲ್ಲಹಳ್ಳಿಯಲ್ಲಿ ನೂರಾರು ಕೋಟಿ ಜಮೀನಿನ ಹಗರಣವಾಗಿದೆ. ದಾಖಲಾತಿ ಸಮೇತ ಮಂಡಿಸೊ ಕೆಲಸ ಮಾಡ್ತಿದ್ದೇವೆ. ಲೊಟ್ಟೆಗಲ್ಲಹಳ್ಳಿ ಸರ್ವೆ ನಂ 11 , ಎಫ್-1 ರಲ್ಲಿ ಬಿಡಿಎ 24-02-77 ಪ್ರಾಥಮಿಕ ಅಧಿಸೂಚನೆ ಹೊರಡಿಸುತ್ತೆ. 31-08-78 ರಲ್ಲಿ ಮತ್ತೊಂದು ಫೈನಲ್ ನೋಟಿಫಿಕೇಷನ್ ಆಗುತ್ತೆ. 26-02-2003 ರಲ್ಲಿ ಹಾಗೂ 2007 ರಲ್ಲಿ ಈ ಜಮೀನನ್ನ ಮೂಲ ಮಾಲೀಕತ್ವ ಯಾರದಿತ್ತು? ಬಿಡಿಎ ಅಧಿಸೂಚನೆ ಹೊರಡಿಸುವ ಮೊದಲು ರಾಮಸ್ವಾಮಿ ಅನ್ನೋರ ಮಾಲೀಕತ್ವದಲ್ಲಿರುತ್ತೆ. 1978 ರಿಂದ 2003ರ ವರಗೆ ಬಿಡಿಎ ಸ್ವಾಧೀನದಲ್ಲಿ ಜಮೀನು ಇತ್ತು. ಆರ್.ಅಶೋಕ್, 2007ರಲ್ಲಿ ಶುದ್ಧಕ್ರಯಕ್ಕೆ ಖರೀದಿ ಮಾಡಿದರು. ರಾಮಸ್ವಾಮಿಯಿಂದ 32 ಕುಂಟೆ ಖರೀದಿ ಮಾಡಿದರು. ಆದ್ರೆ ರಾಮಸ್ವಾಮಿ ಮಾಲೀಕನೆ ಅಲ್ಲ, ಆ ಭೂಮಿ ಬಿಡಿಎ ಸ್ವಾಧೀನದಲ್ಲಿರುತ್ತೆ ಎಂದು ಆರೋಪ ಮಾಡಿದ್ದಾರೆ.

2009ರ ಅಕ್ಟೋಬರ್‌ 1ಕ್ಕೆ ಡಿನೋಟಿಫೈ ಮಾಡಿಕೊಡಿ ಅಂತಾ ರಾಮಸ್ವಾಮಿಯಿಂದ ಸರ್ಕಾರಕ್ಕೆ ಅರ್ಜಿ ಸಲ್ಲಿಸುತ್ತಾರೆ. ಅಶೋಕ್ ಹಾಗೂ ರಾಮಸ್ವಾಮಿ ಮಾಲೀಕರೇ ಅಲ್ಲ. ಆದ್ರೂ ಅರ್ಜಿ ಸಲ್ಲಿಸ್ತಾರೆ, ಅಂದಿನ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಕೂಡಲೇ ಮಂಡಿಸಿ ಅಂತ ಷರಾ ಬರೀತಾರೆ. ಎರಡೇ ತಿಂಗಳಲ್ಲೇ ಅಂದಿನ ಮುಖ್ಯಮಂತ್ರಿಗಳು ಡಿನೋಟಿಫಿಕೇಷನ್ ಮಾಡಿಕೊಡ್ತಾರೆ. ಆ ನಂತ್ರ ನಿವೃತ್ತ ವಿಂಗ್ ಕಮಾಂಡರ್ ಜಿವಿ ಅತ್ರಿ ಲೋಕಾಯುಕ್ತಕ್ಕೆ ಅರ್ಜಿ ಹಾಕುತ್ತಾರೆ. ವಿಚಾರ ಕೋರ್ಟ್‌ಗೆ ಹೋಗುತ್ತೆ. ಆಗ ಅಶೋಕ್ ವಾಪಸ್ ಕೊಡುವ ತೀರ್ಮಾನ ತಗೊತಾರೆ. 26-08 -2011 ರಂದು ರಿಜಿಸ್ಟರ್ ಗಿಫ್ಟ್ ಮೂಲಕ ಬಿಡಿಎಗೆ ಭೂಮಿ ಹಿಂತಿರುಗಿಸುತ್ತಾರೆ. ಓನರ್‌ಶಿಪ್‌ ಇಲ್ಲದೇ ಅಶೋಕ್ ಗಿಫ್ಟ್ ಬಿಡಿಎಗೆ ನೀಡಿದ್ದಾರೆ ಎಂದು ಹಳೆಯ ಪ್ರಕರಣವೊಂದನ್ನ ಬಯಲು ಮಾಡಿದರು.

ಆ ನಂತರ ಅತ್ರಿಯವರು ಹೈಕೋರ್ಟ್ ಅರ್ಜಿ ಹಾಕ್ತಾರೆ, ಕ್ರಿಮಿನಲ್ ಕೇಸ್ ಹಾಕಬೇಕು ಅನ್ನೋದು ಬೇಕಾಗಿಲ್ಲ, ಅಂತಾ ಹೈಕೋರ್ಟ್‌ನಿಂದ ತೀರ್ಪು ಬರುತ್ತೆ. ವಾಪಸ್ ಕೊಟ್ಟಿಬಿಟ್ಟರಲ್ಲ ಕೇಸ್ ಬೇಕಾಗಿಲ್ಲ ಅಂತಾ ಜಡ್ಜ್ ಮೆಂಟ್ ಬರುತ್ತೆ. ಈಗ ಸಿಎಂ ಪತ್ನಿ ಸೈಟು ವಾಪಸ್‌ ಮಾಡಿದಾಗ ಮಾತನಾಡುವವರು ಹಿಂದೆ ಮಾಡಿದ್ದೇನು? ಇದು ಎಷ್ಟರಮಟ್ಟಿಗೆ ನ್ಯಾಯ? ಕಬಳಿಸಿರೋದು, ಕಳ್ಳತನ ಮಾಡಿರೋದು ಅಂತಾ ಹೇಳಿದ್ರಿ, ನಾವು ನಿಮಗೆ ಅವರದ್ದೇ ಭಾಷೆಯಲ್ಲಿ ಹೇಳ್ಬೇಕಾಗುತ್ತೆ ಎಂದು ಸಚಿವ ಪರಮೇಶ್ವರ್ ಬಾಂಬ್‌ ಸಿಡಿಸಿದರು. ಇದನ್ನೂ ಓದಿ: ‘ಪ್ರೇಮಲು’ ಬ್ಯೂಟಿಗೆ ಜಾಕ್‌ಪಾಟ್- ‘ದಳಪತಿ 69’ ಸಿನಿಮಾದಲ್ಲಿ ಮಮಿತಾ ಬೈಜು

TAGGED:bengalurubjpcongressG ParameshwarLand scamr ashokಆರ್. ಅಶೋಕ್‍ಕಾಂಗ್ರೆಸ್ಜಿ.ಪರಮೇಶ್ವರ್ಬಿಜೆಪಿಬೆಂಗಳೂರುಭೂ ಹಗರಣ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
31 minutes ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
39 minutes ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
47 minutes ago
Priyank Kharge 1
Bengaluru City

ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋದ್ರೆ ಬೇಡ ಎನ್ನಲು ಆಗಲ್ಲ: ಪ್ರಿಯಾಂಕ್ ಖರ್ಗೆ

Public TV
By Public TV
1 hour ago
KSRTC
Bagalkot

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ

Public TV
By Public TV
1 hour ago
hassan women
Chikkamagaluru

ಪ್ರಿಯಕರನ ಜೊತೆ ಸಂಸಾರ ಮಾಡಲು ಮಾಸ್ಟರ್ ಪ್ಲ್ಯಾನ್‌ – ಪ್ರಿಯಾಂಕಳ ರಹಸ್ಯ ಭೇದಿಸಿದ ಪೊಲೀಸರು!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?