ಜೋರಾಗಿದೆ ಉಪಕದನ ಕಲಿಗಳ ಟೆಂಪಲ್ ರನ್

Public TV
1 Min Read
MYS BY ELECTION TEMPLERUN

ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೆ ಇನ್ನೂ ಒಂದು ದಿನ ಬಾಕಿ ಇದ್ದು, ಕ್ಷೇತ್ರಗಳಲ್ಲಿ ತರಾವರಿ ಲೆಕ್ಕಾಚಾರ ಶುರುವಾಗಿವೆ. ಯಾರು ಸೋಲುತ್ತಾರೆ, ಯಾರು ಗೆಲ್ಲುತ್ತಾರೆ ಎಂಬ ಚರ್ಚೆಗಳು ಜೋರಿದ್ದು, ಈ ನಡುವೆ ಹುಣಸೂರು ಉಪ ಚುನಾವಣೆ ಅಖಾಡದಲ್ಲಿದ್ದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಟೆಂಪಲ್ ರನ್ ನಡೆಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಮಹಾರಾಷ್ಟ್ರದ ಶಿರಡಿಗೆ ತೆರಳಿ ಸಾಯಿಬಾಬಾರಿಗೆ ಪೂಜೆ ಸಲ್ಲಿಸಿದ್ದಾರೆ. ತಮ್ಮ ಗೆಲುವಿಗಾಗಿ ಸಾಯಿಬಾಬಾನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಿರಡಿಯ ಸಾಯಿಬಾಬಾನ ದರ್ಶನ ಪಡೆದ ಬಳಿಕ ಮಂತ್ರಾಲಯಕ್ಕೆ ತೆರಳಲಿರುವ ವಿಶ್ವನಾಥ್, ಮಂತ್ರಾಲಯದ ಶ್ರೀ ರಾಘವೇಂದ್ರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ಪೂಜೆ ಮುಗಿಸಿ ನಾಳೆ ಸಂಜೆ ವೇಳೆಗೆ ಮೈಸೂರಿಗೆ ಆಗಮಿಸಲಿದ್ದಾರೆ.

MYS HUNASURU CANDIDATE TEMPLERUN AV 2 copy

ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ.ಮಂಜುನಾಥ್ ಧರ್ಮಸ್ಥಳಕ್ಕೆ ತೆರಳಿ ಶ್ರೀ ಮಂಜುನಾಥ್ ಸ್ವಾಮಿಗೆ ಪೂಜೆ ಸಲ್ಲಿಸಿದ್ದಾರೆ. ತಮ್ಮ ಗೆಲುವಿಗಾಗಿ ಶ್ರೀ ಮಂಜುನಾಥೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನೂ ಜೆಡಿಎಸ್ ಅಭ್ಯರ್ಥಿ ದೇವರಹಳ್ಳಿ ಸೋಮಶೇಖರ್ ಕೂಡ ಹುಣಸೂರು ಕ್ಷೇತ್ರ ವ್ಯಾಪ್ತಿಯಲ್ಲಿನ ದೇವಸ್ಥಾನಗಳಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಯಾವ ದೇವರು ಯಾರಿಗೆ ಗೆಲುವಿನ ವರ ಕೊಡುತ್ತಾರೆ ಎಂಬುದು ಸೋಮವಾರ ಸ್ಪಷ್ಟವಾಗಲಿದೆ.

MYS HUNASURU CANDIDATE TEMPLERUN

Share This Article
Leave a Comment

Leave a Reply

Your email address will not be published. Required fields are marked *