Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Anjanadri Betta | ಧಾರ್ಮಿಕ ಭಾವನೆಗಳಿಗೆ ಧಕ್ಕೆ – SDPI ದೂರಿನ ಬೆನ್ನಲ್ಲೇ ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್ ಕಂಬ ತೆರವಿಗೆ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Anjanadri Betta | ಧಾರ್ಮಿಕ ಭಾವನೆಗಳಿಗೆ ಧಕ್ಕೆ – SDPI ದೂರಿನ ಬೆನ್ನಲ್ಲೇ ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್ ಕಂಬ ತೆರವಿಗೆ ಆದೇಶ

Districts

Anjanadri Betta | ಧಾರ್ಮಿಕ ಭಾವನೆಗಳಿಗೆ ಧಕ್ಕೆ – SDPI ದೂರಿನ ಬೆನ್ನಲ್ಲೇ ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್ ಕಂಬ ತೆರವಿಗೆ ಆದೇಶ

Public TV
Last updated: August 29, 2024 10:01 am
Public TV
Share
2 Min Read
Communal harmony will be disturbed SDPI opposes electricity poles with bow and arrows in Anjanadri area Gangavathi Koppala
SHARE

– ಅಂಜನಾದ್ರಿ ಭಾಗದ ಅಭಿವೃದ್ಧಿಗೆ ಹಾಕಲಾಗಿದ್ದ ವಿದ್ಯುತ್‌ ಕಂಬಗಳು
– KRIDL ಎಂಜಿನಿಯರ್‌ ವಿರುದ್ಧ ಕೇಸ್ ದಾಖಲಿಸಲು ತಹಶೀಲ್ದಾರ್‌ ಸೂಚನೆ
– ಗಂಗಾವತಿ ನಗರಸಭೆಗೆ ದೂರು ನೀಡಿದ್ದ ಎಸ್‌ಡಿಪಿಐ

ಕೊಪ್ಪಳ: ಗಂಗಾವತಿ ನಗರದ ಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗೆ ಅಭಿವೃದ್ಧಿಪಡಿಸಿದ ರಸ್ತೆ ಮಧ್ಯೆ ಹಾಕಿರುವ ವಿದ್ಯುತ್ ಕಂಬಗಳ ತೆರವಿಗೆ ತಹಶೀಲ್ದಾರ್‌ ಆದೇಶಿಸಿದ್ದಾರೆ. ಅಷ್ಟೇ ಅಲ್ಲದೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಸಂಸ್ಥೆ (KRIDL) ವಿರುದ್ಧವೇ ಪ್ರಕರಣ ದಾಖಲಿಸಲು ಸೂಚಿಸಿದ್ದಾರೆ.

ಆಗಸ್ಟ್‌ 28 ರಂದು ಜಿಲ್ಲಾಧಿಕಾರಿಗಳ ಮೌಖಿಕ ಆದೇಶದಂತೆ ತಹಶೀಲ್ದಾರ್‌ ಅವರು ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷರಿಗೆ ನೀಡಿರುವ ಆದೇಶದ ಪ್ರತಿ ಪಬ್ಲಿಕ್‌ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಗುಜರಾತ್‌ನ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ – ಮಳೆಗೆ 15 ಸಾವು, 23 ಸಾವಿರ ಮಂದಿ ಸ್ಥಳಾಂತರ

hurting religious sentiments remove electricity pole with bow and arrows gangavathi tahsildar order SDPI KRIDL Anjanadri Betta

ಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗಿನ ರಸ್ತೆ ನಗರ ಸಭೆ ವ್ಯಾಪ್ತಿಗೆ ಬರುತ್ತಿದೆ. ಇಲ್ಲಿ ಕೆಐಆರ್‌ಡಿಎಲ್‌ ಸಂಸ್ಥೆ ಸ್ಥಾಪಿಸಿದ ವಿದ್ಯುತ್‌ ಕಂಬಗಳು (Electric Pole) ಧಾರ್ಮಿಕ ಸೌಹಾರ್ದತೆ ಹಾಗೂ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ನಿರ್ಮಾಣವಾಗಿದೆ. ಇದು ನಗರದಲ್ಲಿ ಸಾರ್ವಜನಿಕರ ಶಾಂತಿಗೆ ಭಂಗ ಉಂಟುಮಾಡುವ ಸಾಧ್ಯತೆಗಳು ಇರುವುದರಿಂದ ಅವುಗಳನ್ನು ಕೂಡಲೇ ತೆರವುಗೊಳಿಸಬೇಕು. ಈ ಕಾಮಗಾರಿ ಕೈಗೊಂಡಿರುವ ಕೆಆರ್‌ಐಡಿಎಲ್‌ ಎಂಜಿನಿಯರ್‌ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಂಡು ವರದಿ ನೀಡುವಂತೆ ತಹಶೀಲ್ದಾರ್‌ ನಾಗರಾಜ್‌ ಅವರು ಸೂಚಿಸಿದ್ದಾರೆ.

ಹನುಮನ ಜನ್ಮಸ್ಥಳವಾಗಿರುವ ಅಂಜನಾದ್ರಿ ಭಾಗವನ್ನು ಅಯೋಧ್ಯೆ, ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಬೇಕು ಎಂಬ ಒತ್ತಾಯ ಹಲವು ಬಾರಿ ಕೇಳಿ ಬಂದಿತ್ತು. ಜನಾರ್ದನ ರೆಡ್ಡಿ ಅವರು ಚುನಾವಣಾ ಪ್ರಚಾರದಲ್ಲೂ ಭರವಸೆ ನೀಡಿದ್ದರು. ಅದರಂತೆ ಈಗ ವಿದ್ಯುತ್ ಕಂಬಗಳಲ್ಲಿ ಬಿಲ್ಲು, ಬಾಣಗಳು ಇರುವ ಚಿತ್ರಗಳನ್ನು ಅಳವಡಿಸಲಾಗಿತ್ತು.

ವಿದ್ಯುತ್ ಕಂಬಗಳಲ್ಲಿ ಅಳವಡಿಸಿರುವ ಚಿತ್ರಗಳು ಐತಿಹಾಸಿಕ ಅಂಜನಾದ್ರಿ ಪರ್ವತದ ಮಾರ್ಗಸೂಚಿಗೆ ಅನುಕೂಲವಾಗಿವೆ. ಅಂಜನಾದ್ರಿಗೆ ಬರುವ ಭಕ್ತರಲ್ಲಿ ಧಾರ್ಮಿಕ ಭಕ್ತಿ ಉಂಟಾಗುವುದರಿಂದ ಇವುಗಳನ್ನು ಅಳವಡಿಸಲಾಗಿದೆ. ಇದರಿಂದ ಯಾರ ಭಾವನೆಗೂ ಧಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಅಷ್ಟೇ ಅಲ್ಲದೇ ನಗರಸಭೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲೂ ಶಾಸಕ ಜನಾರ್ದನ ರೆಡ್ಡಿ ಅವರು ವಿಷಯ ಪ್ರಸ್ತಾಪಿಸಿ ಈ ವಿಷಯದಲ್ಲಿ ಅನಾವಶ್ಯಕ ಗೊಂದಲ ಸೃಷ್ಟಿಸದೇ ಎಲ್ಲರೂ ಸಹಕಾರ ನೀಡುವಂತೆ ಸದಸ್ಯರಲ್ಲಿ ಮನವಿ ಮಾಡಿದ್ದರು. ಇದನ್ನೂ ಓದಿ: ಬಳ್ಳಾರಿ ಜೈಲಿಗೆ ದರ್ಶನ್‌ ಶಿಫ್ಟ್‌ – ದಾಸನಿಗಾಗಿ ರೂಟ್‌ ಮ್ಯಾಪ್‌ ಚೇಂಜ್‌?

Communal harmony will be disturbed SDPI opposes electricity poles with bow and arrows in Anjanadri area Gangavathi Koppala

ಏನಿದು ವಿವಾದ?
ಅಯೋಧ್ಯೆ, ತಿರುಪತಿಯ ಮಾದರಿಯಲ್ಲಿ ಗಂಗಾವತಿ ಅಂಜನಾದ್ರಿ (Anjanadri Betta) ಅಭಿವೃದ್ಧಿಯಾಗಬೇಕೆಂಬ ನಿಟ್ಟಿನಲ್ಲಿ ಮಹಾರಾಣಾ ಪ್ರತಾಪ್ ಸರ್ಕಲ್‌ನಿಂದ ಜುಲೈ ನಗರದವರೆಗೂ ತಿರುಪತಿ, ಅಯೋಧ್ಯೆಯಲ್ಲಿರುವಂತೆ (Ayodhya) ವಿದ್ಯುತ್ ಕಂಬಗಳನ್ನು ಹಾಕಿದ್ದಕ್ಕೆ ಎಸ್‌ಡಿಪಿಐ (SDPI) ಆಕ್ಷೇಪ ವ್ಯಕ್ತಪಡಿಸಿತ್ತು.

ಇದು ಕೇವಲ ಒಂದು ಧರ್ಮದ (Religion) ಸಂಕೇತವಾಗಿದೆ. ಇದರಿಂದ ಗಂಗಾವತಿ ನಗರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಆಗುತ್ತದೆ ಎಂದು ಆರೋಪಿಸಿ ಇದನ್ನು ತೆರವುಗೊಳಿಸುವಂತೆ ಗಂಗಾವತಿ ನಗರಸಭೆ ಕಮಿಷನರ್‌ಗೆ SDPI ಮನವಿ ಮಾಡಿತ್ತು.

ಗಂಗಾವತಿಯಿಂದ 12 ಕಿಲೋ ಮೀಟರ್ ದೂರದಲ್ಲಿ ಹನುಮ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದವರೆಗೂ ಇದೆ ಮಾದರಿಯಲ್ಲಿ ಬೀದಿ ದೀಪಗಳು ಅಳವಡಿಕೆ ಮಾಡಲಾಗುತ್ತಿತ್ತು. ಇಲ್ಲಿಗೆ ಲಕ್ಷಾಂತರ ಹನುಮ ಭಕ್ತರು ಹಾಗೂ ಪ್ರವಾಸಿಗರು ಬರುತ್ತಾರೆ. ಇಂತಹ ಪ್ರವಾಸಿ ಸ್ಥಳದಲ್ಲಿ, ಬೀದಿ ದೀಪಗಳು ಸುಂದರವಾಗಿ ಕಾಣಲಿ ಎಂಬ ಉದ್ದೇಶಕ್ಕೆ ಹಾಕಲಾಗಿದೆ. ಇದರಲ್ಲಿ ಕೋಮು ಸೌಹಾರ್ದತೆ ಕದಡುವ ಅಂಶ ಏನಿದೆ ಎಂದು ಹಿಂದೂ ಮುಖಂಡರು ಪ್ರಶ್ನಿಸಿದ್ದರು.

 

TAGGED:Anjanadri BettakarnatakakoppalaKRIDLSDPIಅಂಜನಾದ್ರಿ ಬೆಟ್ಟಎಸ್‍ಡಿಪಿಐಕರ್ನಾಟಕಕೆಆರ್‍ಐಡಿಎಲ್ಕೊಪ್ಪಳ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
7 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
7 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
7 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
7 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
7 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?