– ಸಾವು ಬದುಕಿನಲ್ಲಿ ಗೃಹಿಣಿ
ಕೊಪ್ಪಳ: ವರದಕ್ಷಿಣೆಗಾಗಿ ಗಂಡ ಹಾಗೂ ಸಂಬಂಧಿಕರು ಮಹಿಳೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಮುರುಡಿ ಗ್ರಾಮದಲ್ಲಿ ನಡೆದಿದೆ.
ಮಂಜುಳಾ ಅವರಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಲಾಗಿದೆ. ಕಳೆದ ನಾಲ್ಕು ವರ್ಷದ ಹಿಂದೆ ಮಂಜುಳ ಅವರು ಚನ್ನಪ್ಪ ಜೊತೆ ಮದುವೆಯಾಗಿದ್ದರು. ಸದ್ಯ ಈಗ ಮಂಜುಳಾ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದೀಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಪತಿ ಚನ್ನಪ್ಪ, ಬಸಮ್ಮ, ನಾಗಮ್ಮ ಹಾಗೂ ಚಂದಾಲಿಂಗಪ್ಪ ಎಂಬವರ ಮೇಲೆ ಮಂಜುಳಾ ಪೋಷಕರು ಕೊಲೆ ಆರೋಪ ಮಾಡುತ್ತಿದ್ದಾರೆ. ಸಂಬಂಧಿ ಚಂದಾಲಿಂಗಪ್ಪ ಕೊಪ್ಪಳ ನಗರ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿದ್ದಾನೆಂದು ತಿಳಿದುಬಂದಿದೆ.
ಈ ಬಗ್ಗೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv