ಬೆಂಗಳೂರು: ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ ಪೊಲೀಸರಿಗೆ ಹೆದರಿ ಅತ್ಮಹತ್ಯೆಗೆ ಶರಣಾಗಿರೋ ಘಟನರ ಬೆಂಗಳೂರಿನ ಕೋಗಿಲು ಗ್ರಾಮದ ಶ್ರೀನಿವಾಸ್ ನಗರದಲ್ಲಿ ನಡೆದಿದೆ.
ಯಲಹಂಕದಲ್ಲಿ ಪತ್ನಿಯೊಂದಿಗೆ ಜಗಳವಾಡಿದ್ದ ನಾಗರಾಜ್ ಮಚ್ಚಿನಿಂದ ಹಲ್ಲೆ ನಡೆಸಿದ್ದ. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಪತ್ನಿ ದೇವಿಕಾರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ಬಗ್ಗೆ ಯಲಹಂಕ ಪೊಲೀಸ್ ಠಾಣೆಯಲ್ಲಿ ನಾಗರಾಜ್ ವಿರುದ್ದ 307ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಆದ್ರೆ ಪತ್ನಿ ಸಾವನ್ನಪ್ಪಿದ್ದಾಳೆಂದು ಭಾವಿಸಿದ ಪತಿ ನಾಗರಾಜ್, ಪೊಲೀಸರ ಭಯದಿಂದ ಕೋಗಿಲು ಗ್ರಾಮದ ಶ್ರೀನಿವಾಸ್ ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.