ಮುಂಬೈ: ಆಸ್ಪತ್ರೆಗೆ ಗಂಡನ ಜೊತೆಗೆ ತಿಂಗಳ ಚಿಕಿತ್ಸೆಗೆ ಬಂದಿದ್ದ ಗರ್ಭಿಣಿ (Pregnant) ರಸ್ತೆ ಅಪಘಾತದಲ್ಲಿ (Road Accident) ದಾರುಣ ಸಾವಿಗೀಡಾದರು. ಕರಳುಬಳ್ಳಿ ಹೊತ್ತಿದ್ದ ಹೆಂಡತಿಯ ಸಾವನ್ನು ಕಣ್ಣೆದುರೆ ಕಂಡ ಪತಿ ಈ ದುಃಖದಿಂದ ತಾನೂ ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಪುಣೆಯ ಜುನ್ನಾರ್ ತಾಲೂಕಿನಲ್ಲಿ ನಡೆದಿದೆ.
ದೊಂಡಕರ್ವಾಡಿಯ ರಮೇಶ್ ನವನಾಥ್ ಕಂಸ್ಕರ್ (29) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಳೆದ ಎಂಟು ತಿಂಗಳ ಹಿಂದೆ ವಿದ್ಯಾ ಕಂಸ್ಕರ್ ನನ್ನು ವಿವಾಹವಾಗಿದ್ದರು (Marriage). ಆಕೆ ಗರ್ಭಿಣಿಯಾಗಿದ್ದು (Pregnant), ಕಳೆದ ವಾರ ಇಲ್ಲಿನ ನಾರಾಯಣ ಗಾಂವ್ ಆಸ್ಪತ್ರೆಗೆ (Hospital) ತಿಂಗಳ ಚಿಕಿತ್ಸೆಗೆ ಬಂದಿದ್ದರು. ಚಿಕಿತ್ಸೆ ಮುಗಿಸಿ ಗಂಡನ ಜೊತೆ ಮನೆಗೆ ಮರಳುತ್ತಿದ್ದ ವೇಳೆ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ವಿದ್ಯಾ ಬೈಕ್ನಿಂದ ಕೆಳಗೆ ಇಳಿದರು. ಆಗ ಕಬ್ಬು ತುಂಬಿಕೊಂಡು ಬಂದ ಟ್ರ್ಯಾಕ್ಟರ್ ವಿದ್ಯಾ ಕಂಸ್ಕರ್ಗೆ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್ ಚಕ್ರಗಳು ತಲೆಯ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್ವುಡ್ಗೆ ಜ್ಯೂ.ಎನ್ಟಿಆರ್ ಎಂಟ್ರಿ: ಇಲ್ಲಿದೆ ಮಾಹಿತಿ
ಈ ಘಟನೆ ಕಣ್ಣಾರೆ ಕಂಡ ರಮೇಶ್ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ. ಒಂದು ದಿನ ಅವರನ್ನು ಜುನ್ನಾರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಡೆಗೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಮೆಜೆಸ್ಟಿಕ್ ಶಾಂತಲಾ ಸರ್ಕಲ್ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ರಸ್ತೆ 1 ತಿಂಗಳು ಬಂದ್
ನಗರದ ಕಿರಿದಾದ ಮತ್ತು ಕೆಟ್ಟ ರಸ್ತೆಗಳಿಂದಾಗಿ ಈ ಸಾವು ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.