ಮೈಸೂರು: ಪತ್ನಿಯನ್ನು ಪತಿಯೇ ನೀರಿನಲ್ಲಿ ಮುಳುಗಿಸಿ ಕೊಂದ ಘಟನೆ ಮೈಸೂರಿನಲ್ಲಿ ನಡೆದಿದೆ.
ದೇವಿ (28) ಗಂಡನಿಂದಲೇ ಕೊಲೆಯಾದ ದುರ್ದೈವಿ. ನಂಜನಗೂಡು ಕಪಿಲಾ ನದಿಯಲ್ಲಿ 5 ತಿಂಗಳ ಗರ್ಭಿಣಿಯನ್ನು ಪತಿ ಹತ್ಯೆ ಮಾಡಿದ್ದಾನೆ. ನಂಜನಗೂಡು ತಾಲೂಕು ಮುದ್ದಳ್ಳಿ ರಾಜೇಶ್ ಕೊಲೆ ಆರೋಪಿ.
ಇಬ್ಬರು ಮಕ್ಕಳನ್ನು ಹಾಗೂ ಹೆಂಡತಿಯನ್ನು ಕೊಲ್ಲಲು ರಾಜೇಶ್ ಯತ್ನಿಸಿದ್ದ. ಆದರೆ ಇದನ್ನು ನೋಡಿದ ಸ್ಥಳೀಯರು ತಕ್ಷಣ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಯುವತಿಯ ಒಂದು ದೂರಿಗೆ 1 ಸಾವಿರ ಪೊಲೀಸರು ತನಿಖೆ ಮಾಡಿದ್ರು!
ದೇವಿಯನ್ನು ರಕ್ಷಣೆ ಮಾಡುವಷ್ಟರಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ನಂಜನಗೂಡು ಪೊಲೀಸರು ದಾಖಲಿಸಿಕೊಂಡು, ಆರೋಪಿ ರಾಜೇಶನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಲವ್ವರ್ ಮಾತಾಡಲು ನಿರಾಕರಿಸಿದಳೆಂದು ಆಸ್ಪತ್ರೆ ವೈದ್ಯ, ರೋಗಿಗಳಿಗೆ ಚಾಕುವಿನಿಂದ ಇರಿದ!