ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಯುವಕ ಮರ್ಡರ್

Public TV
1 Min Read
yadagiri 1

ಯಾದಗಿರಿ: ಪತ್ನಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಯಾದಗಿರಿ ತಾಲೂಕಿನ ಕಡೇಚೂರ್ ಬಳಿ ನಡೆದಿದೆ.

yadagiri 2

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗ್ರಾಮದ ಯಲಸತ್ತಿ ಗ್ರಾಮದ ಸಿದ್ದಪ್ಪ (25) ಕೊಲೆಯಾದ ಯುವಕನಾಗಿದ್ದು, ಆರೋಪಿಯನ್ನು ನಾಗರಾಜ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್ ಪತ್ನಿ ಜೊತೆ ಕಳೆದ ಎರಡು ವರ್ಷಗಳಿಂದ ಸಿದ್ದಪ್ಪ ಅನೈತಿಕ ಸಂಬಂಧ ಹೊಂದಿದ್ದನು. ಇದನ್ನೂ ಓದಿ: ಸಿಇಟಿ ರ್‍ಯಾಂಕ್ ರದ್ದು- ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ

ಈ ವಿಚಾರ ತಿಳಿದು ನಾಗರಾಜ್ ಬಡಿಗೆಯಿಂದ ಹೊಡೆದು ಸಿದ್ದಪ್ಪನನ್ನ ಕೊಲೆ ಮಾಡಿದ್ದಾನೆ. ಇದೀಗ ಈ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಂದೂಡಲಾಗಿದ್ದ ಜನೋತ್ಸವ ಕಾರ್ಯಕ್ರಮ ಇದೇ 8 ರಂದು ನಡೆಯಲಿದೆ: ವೇಣುಗೋಪಾಲ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *