Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೀಲ ಶಂಕಿಸಿ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿ ದಟ್ಟ ಕಾಡಲ್ಲಿ ಹೂತಾಕಿದ ಪತಿ – ತಿಂಗಳ ಹಿಂದೆಯೇ ಪ್ಲಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಶೀಲ ಶಂಕಿಸಿ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿ ದಟ್ಟ ಕಾಡಲ್ಲಿ ಹೂತಾಕಿದ ಪತಿ – ತಿಂಗಳ ಹಿಂದೆಯೇ ಪ್ಲಾನ್

Crime

ಶೀಲ ಶಂಕಿಸಿ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿ ದಟ್ಟ ಕಾಡಲ್ಲಿ ಹೂತಾಕಿದ ಪತಿ – ತಿಂಗಳ ಹಿಂದೆಯೇ ಪ್ಲಾನ್

Public TV
Last updated: November 21, 2022 6:56 pm
Public TV
Share
3 Min Read
Davanagere murder
SHARE

ದಾವಣಗೆರೆ: ಮದುವೆಯಾಗಿ 6 ತಿಂಗಳಾಗಿದ್ದು ಗರ್ಭಿಣಿ ಪತ್ನಿಯ (Pregnant Wife) ಶೀಲ ಶಂಕಿಸಿದ ಪತಿ ಆಕೆಯ ಕೊಲೆ (Murder) ಮಾಡಿ ದಟ್ಟ ಕಾಡಿನ ಮಧ್ಯೆ ಹೂತಿಟ್ಟು ವಿಕೃತಿ ಮೆರೆದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ ತಾಲೂಕಿನ ಗಂಗಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಮಹಿಳೆ ರಶ್ಮಿ (20) ಎಂದು ಗುರುತಿಸಲಾಗಿದೆ. ಮದುವೆ ಅಂದರೇನು, ಸಂಸಾರ ಅಂದರೇನು ಎಂಬುದನ್ನು ತಿಳಿದುಕೊಳ್ಳಲು ಹೆಚ್ಚು ಸಮಯ ಸಿಗದೇ ಮಹಿಳೆ ಪತಿಯ ಪೈಶಾಚಿಕ ಕೃತ್ಯಕ್ಕೆ ಬಲಿಯಾಗಿದ್ದಾಳೆ. ದಾವಣಗೆರೆ ತಾಲೂಕಿನ ಐಗೂರು ಗ್ರಾಮದ ಲೋಕೇಶಪ್ಪ, ರತ್ನಮ್ಮ ದಂಪತಿಯ ಕೊನೆಯ ಪುತ್ರಿ ರೇಷ್ಮಾಳನ್ನು ಚನ್ನಗಿರಿ ತಾಲೂಕಿನ ಗಂಗಗೊಂಡನಹಳ್ಳಿಯ ಮೋಹನ್ ಕುಮಾರ್ ಅಲಿಯಾಸ್ ಮನು ಜೊತೆ ಏಪ್ರಿಲ್ 13 ರಂದು ಅದ್ದೂರಿಯಾಗಿ ವಿವಾಹ ಮಾಡಿ ಕೊಡಲಾಗಿತ್ತು.

Davanagere murder 1

ಮದುವೆಯಾದ 1 ತಿಂಗಳ ಬಳಿಕ ಪತ್ನಿ ಗರ್ಭಿಣಿಯಾದ ವಿಚಾರ ಗೊತ್ತಾಗಿದ್ದು, ಮೋಹನ್ ಅವಳ ಮೇಲೆ ಅನುಮಾನ ಪಟ್ಟಿದ್ದಾನೆ. ರಶ್ಮಿ ಯಾರ ಜೊತೆ ಮಾತನಾಡಿದರೂ ಅನುಮಾನ ಪಡುತ್ತಿದ್ದ ಮೋಹನ್ ತನ್ನ ಪತ್ನಿಯ ಶೀಲ ಶಂಕಿಸಿ ಪದೇ ಪದೇ ಜಗಳವಾಡುತ್ತಿದ್ದ. ಈ ಬಗ್ಗೆ ರಶ್ಮಿ ಸಾಕಷ್ಟು ಬಾರಿಗೆ ಪಾಲಕರ ಗಮನಕ್ಕೂ ತಂದಿದ್ದು, ರಾಜೀ ಸಂಧಾನ ನಡೆಸಿ ಸರಿಪಡಿಸುತ್ತಿದ್ದರು. ಆದರೆ ಅನುಮಾನ ಹೆಚ್ಚಾಗಿ ತಿಂಗಳ ಮೊದಲೇ ಪ್ಲಾನ್ ಮಾಡಿ ಮೋಹನ್ ತನ್ನ ಪತ್ನಿಯನ್ನು ಕೊಲೆ ಮಾಡಿ ಹೂತು ಹಾಕಿದ್ದಾನೆ.

ತಿಂಗಳ ಹಿಂದೆಯೇ ಹತ್ಯೆಗೆ ಪ್ಲಾನ್:
ರಶ್ಮಿಯನ್ನು ಕೊಲೆ ಮಾಡೋದಕ್ಕೆ ಫಿಕ್ಸ್ ಆಗಿದ್ದ ಮೋಹನ್ ತಿಂಗಳ ಮೊದಲೇ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ಸಮೀಪದ ಶಿರಗಲಿಪುರ ಕಣಿವೆ ಬಳಿ ಗುಂಡಿ ತೋಡಿ ಗುರುತು ಮಾಡಿ ಹೋಗಿದ್ದ. ಅಕ್ಟೋಬರ್ 8 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ರಶ್ಮಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಮಧ್ಯರಾತ್ರಿ ಕಾರಿನಲ್ಲಿ ಮೃತ ದೇಹ ಕೊಂಡೊಯ್ದು ತಾನು ತೆಗೆದಿದ್ದ ಗುಂಡಿಯಲ್ಲಿ ಹೂತಿಟ್ಟು ಬಂದಿದ್ದ. ಅಂದೇ ರಾತ್ರಿ 2 ಗಂಟೆ ಸುಮಾರಿಗೆ ಆಕೆಯ ಮನೆಯವರಿಗೆ ಕರೆ ಮಾಡಿ ರಶ್ಮಿ ಕಾಣಿಸುತ್ತಿಲ್ಲ. ಎಲ್ಲಿ ಹೋಗಿದ್ದಾಳೋ ಗೊತ್ತಿಲ್ಲ ಎಂದು ನಾಟಕವಾಡಿದ್ದಾನೆ.

Davanagere murder 2

ತವರು ಮನೆಯವರು ಬಂದಾಗ ನಿಮ್ಮ ಮಗಳು ಯಾರ ಜೊತೆಯಲ್ಲೋ ಓಡಿ ಹೋಗಿದ್ದಾಳೆ ಎಂದು ಮೋಹನ್ ಮತ್ತೆ ನಾಟಕ ಶುರು ಮಾಡಿದ್ದ. ಅಲ್ಲದೆ ಗ್ರಾಮ ದೇವರ ಮೂರ್ತಿ ತಲೆ ಮೇಲೆ ಪ್ರಮಾಣ ಮಾಡಿ ನಾನು ಕೊಲೆ ಮಾಡಿಲ್ಲ, ಅವಳು ಎಲ್ಲಿ ಹೋಗಿದ್ದಾಳೋ ಗೊತ್ತಿಲ್ಲ ಎಂದು ಹೇಳಿದ್ದಾನೆ. ಕೊನೆಗೆ ರಶ್ಮಿ ಸಂಬಂಧಿಕರ ಒತ್ತಾಯದ ಮೇರೆಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ಕೊಟ್ಟಿದ್ದಾನೆ. ಆದರೆ ರಶ್ಮಿ ಪಾಲಕರಿಗೆ ಮೋಹನ್ ಮೇಲೆ ಅನುಮಾನವಿದ್ದ ಕಾರಣ ಅವನ ಮೇಲೆ ದೂರು ದಾಖಲು ಮಾಡಿದ್ದಾರೆ. ಇದನ್ನೂ ಓದಿ: ಕುಕ್ಕರ್ ಬಾಂಬ್ ಆತಂಕದ ನಡುವೆ ಮಂಗ್ಳೂರಿನ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ

ಪೊಲೀಸರು ತನಿಖೆ ನಡೆಸಿದ ವೇಳೆ ಮೋಹನ್ ಕೃತ್ಯ ಬಯಲಾಗಿದೆ. ಮೋಹನ್ ಪತ್ನಿಯ ಶವವನ್ನು ಎಲ್ಲಿ ಹೂತಿಟ್ಟಿದ್ದ ಎಂಬುದನ್ನು ಖಚಿತ ಪಡಿಸಿಕೊಂಡ ಪೊಲೀಸರು ಇಂದು ಮೃತ ದೇಹ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸ್ಥಳಕ್ಕೆ ಅಜ್ಜಂಪುರ ತಾಹಶೀಲ್ದಾರ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡ ಆಗಮಿಸಿದ್ದಾರೆ.

CRIME

ಮಗಳನ್ನು ಇಷ್ಟು ಬೇಗ ಮದುವೆ ಮಾಡಿಕೊಟ್ಟು ಸ್ಮಾಶಾನಕ್ಕೆ ಕಳುಹಿಸಿದೆವು ಎಂದು ರಶ್ಮಿ ಕುಟುಂಬಸ್ಥರು ಆಕ್ರಂದಿಸಿದ್ದಾರೆ. ಹೊಟ್ಟೆ ಬಟ್ಟೆ ಕಟ್ಟಿ ಸಾಕಿ ಸಲಹಿದ್ದ ಮುದ್ದಾದ ಮಗಳು ಕಟುಕನ ಕೈಯಲ್ಲಿ ಬಲಿಯಾಗಿದ್ದು, ಮೋಹನ್‌ಗೆ ಕಠಿಣ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸ್ವಂತ ಮಗಳನ್ನ ಗುಂಡಿಕ್ಕಿ ಕೊಂದು, ಸೂಟ್‌ಕೇಸ್‌ನಲ್ಲಿ ಬಿಸಾಡಿದ ತಂದೆ

Live Tv
[brid partner=56869869 player=32851 video=960834 autoplay=true]

TAGGED:coupledavanagereMurderPregnantwomanಕೊಲೆದಂಪತಿದಾವಣಗೆರೆಮಹಿಳೆ
Share This Article
Facebook Whatsapp Whatsapp Telegram

Cinema news

bigg boss hindi
ಬಿಗ್‌ ಬಾಸ್ ಈ ವಾರ ಫಿನಾಲೆ; ಕ್ಯೂರಿಯಾಸಿಟಿ ಹೆಚ್ಚಿಸಿದ ಗೆಲ್ಲೋರ ಪಟ್ಟಿ
Cinema Latest Top Stories TV Shows
Rachita Ram
ಸೀರೆಯಲ್ಲಿ ಬೊಂಬೆಯಂತೆ ಮಿಂಚಿದ ರಚ್ಚು!
Cinema Latest Sandalwood South cinema Top Stories
Sholay The Final Cut
ಶೋಲೆಗೆ 50ರ ಸಂಭ್ರಮ – ಪ್ರೇಕ್ಷಕರ ಮುಂದೆ 4Kಯಲ್ಲಿ ಬರಲಿದೆ ರಿಯಲ್‌ ಕ್ಲೈಮ್ಯಾಕ್ಸ್‌!
Bollywood Cinema Latest Top Stories
shah rukh khan kajol statue
ಲಂಡನ್‌ನಲ್ಲಿ ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಶಾರುಖ್-ಕಾಜಲ್
Bollywood Cinema Latest Top Stories

You Might Also Like

CRIME
Crime

ಅಪಘಾತವಾಗಿ ಬಿದ್ದವರ ಮೇಲೆ ಹರಿದ ಟ್ರ್ಯಾಕ್ಟರ್ – ಇಬ್ಬರು ಯುವಕರು ದುರ್ಮರಣ

Public TV
By Public TV
23 minutes ago
Lok Sabha session
Latest

ಕೆಲಸದ ನಂತ್ರ ಕರೆ, ಇಮೇಲ್‌ ಬಂದ್‌ – Right to Disconnect Bill ಮಂಡನೆ

Public TV
By Public TV
36 minutes ago
KL Rahul Toss
Cricket

ಸತತ 20 ಪಂದ್ಯಗಳಲ್ಲಿ ಸೋತು ಕೊನೆಗೂ ಟಾಸ್‌ ಗೆದ್ದ ಭಾರತ

Public TV
By Public TV
1 hour ago
H.D Kumaraswamy Nirmala Nandanath swamiji
Karnataka

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಹೆಚ್‌ಡಿಕೆ

Public TV
By Public TV
2 hours ago
Road Accident
Crime

ತಮಿಳುನಾಡಿನಲ್ಲಿ ಭೀಕರ ಅಪಘಾತ – ಐವರು ಅಯ್ಯಪ್ಪ ಭಕ್ತರ ದುರ್ಮರಣ

Public TV
By Public TV
2 hours ago
Donald Trump awarded first FIFA Peace Prize at 2026 World Cup draw
Latest

ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಪ್ರಶಸ್ತಿ – ಕಾರ್ಯಕ್ರಮದಲ್ಲಿ ಮೋದಿ ವಿಡಿಯೋ ಪ್ರಸಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?