ಪತ್ನಿ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಕೊಂದಿದ್ದ ಪಾಪಿ ಪತಿ ಕೊನೆಗೆ ಶವವಾಗಿ ಪತ್ತೆ

Public TV
1 Min Read
bangaluru murder 3

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಕ್ರೂರವಾಗಿ ಹತ್ಯೆಗೈದಿದ್ದವನನ್ನು ಪೊಲೀಸರು ಬಂಧಿಸುವಷ್ಟರಲ್ಲಿ ಆರೋಪಿ ಶವವಾಗಿ ಪತ್ತೆಯಾಗಿರುವ ಪ್ರಕರಣ ಬೆಂಗಳೂರಿನ ರಾಜೇಂದ್ರನಗರದಲ್ಲಿ ಬೆಳಕಿಗೆ ಬಂದಿದೆ.

ಮೃತ ದುರ್ದೈವಿಯನ್ನು ಆಯೇಶಾ ಎಂದು ಗುರುತಿಸಲಾಗಿದ್ದು, ನವೆಂಬರ್ 19ರಂದು ಪತ್ನಿಯ ಶೀಲ ಶಂಕಿಸಿ ಆರೋಪಿ ನಿಸಾರ್ ಪೆಟ್ರೋಲ್ ಸುರಿದು ಕೊಲೆ ಮಾಡಿದ್ದಾನೆ. ಪತ್ನಿಗೆ ಬೆಂಕಿ ಹಚ್ಚಿದ್ದರಿಂದ ಮನೆಯಲ್ಲಿದ್ದ ಸಿಲಿಂಡರ್ ಇದೇ ವೇಳೆ ಬ್ಲಾಸ್ಟ್ ಆಗಿದೆ. ಸಿಲಿಂಡರ್ ಬ್ಲಾಸ್ಟ್‌ನಿಂದಾಗಿ ನಿಸಾರ್ ಕೈ ಹಾಗೂ ಮೈ ಭಾಗಕ್ಕೆ ಗಾಯವಾಗಿದ್ದು, ಆಯೇಶಾ ಮೃತಪಟ್ಟಿದ್ದಾರೆ. ಇದೇ ವೇಳೆ ಆರೋಪಿ ನಿಸಾರ್ ಮನೆಯಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ನಡು ರಸ್ತೆಯಲ್ಲೇ ಶಿಶುವಿನ ತಲೆ ಕಂಡು ಭಯಭೀತರಾದ ಜನ

bangaluru murder 1

ಈ ಘಟನೆ ಬಳಿಕ ಪೊಲೀಸರು ನಿಸಾರ್‌ಗಾಗಿ ಎಲ್ಲಾ ಕಡೆ ಹುಡುಕಾಟ ನಡೆಸಿದ್ದಾರೆ. ಆದರೆ ನಿಸಾರ್ ಬಸ್ ಹತ್ತಿ ಆಂಧ್ರಪ್ರದೇಶಕ್ಕೆ ತೆರಳಿ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದನು. ಮೈ, ಕೈ ನೋವಿದ್ದರೂ ಆಸ್ಪತ್ರೆಗೆ ಹೋಗದ ನಿಸಾರ್ ಕೊನೆಗೆ ನೋವು ತೀವ್ರಗೊಂಡಾಗ ಮಗನಿಗೆ ಕರೆ ಮಾಡಿದ್ದಾರೆ. ಇದೇ ವೇಳೆ ಆರೋಪಿಯ ಲೊಕೇಶನ್ ಟ್ರೇಸ್ ಮಾಡಿದ ಪೊಲೀಸರಿಗೆ ನಿಸಾರ್ ಮದನಪಲ್ಲಿಯಲ್ಲಿರುವ ವಿಚಾರ ತಿಳಿದು ಬಂದಿದೆ. ಇದನ್ನೂ ಓದಿ: ಸಂಬಂಧಿಕರ ಮನೆಗೆ ಹೋಗಿ ವಾಪಸ್‌ ಬರ್ತಿದ್ದವ ಸೇರಿದ್ದು ಮಸಣ

bangaluru murder 2

ನಂತರ ಆರೋಪಿಯನ್ನು ಬಂಧಿಸಲು ಆಡುಗೋಡಿ ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ನಿಸಾರ್ ಶವವಾಗಿ ಪತ್ತೆಯಾಗಿದ್ದಾನೆ. ಮರಣೋತ್ತರ ಪರೀಕ್ಷೆ ವೇಳೆ ಎರಡು ದಿನಗಳ ಹಿಂದೆ ನಿಸಾರ್ ಸಾವನ್ನಪ್ಪಿದ್ದಾಗಿ ವರದಿಯಾಗಿದೆ. ಇದೀಗ ಪೊಲೀಸರು ಯಾರನ್ನು ತನಿಖೆ ಮಾಡಬೇಕೆಂದು ಗೊಂದಲದಲ್ಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *