Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಂಡ್ತಿ ಕೊಂದು ಕೊಳವೆ ಬಾವಿಯಲ್ಲಿ ಹಾಕಿ, ದೇವರಿಗೆ ಮೂರು ಪ್ರಾಣಿ ಬಲಿ ಅರ್ಪಿಸಿದ್ದ ಕೇಡಿ ಗಂಡ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಹೆಂಡ್ತಿ ಕೊಂದು ಕೊಳವೆ ಬಾವಿಯಲ್ಲಿ ಹಾಕಿ, ದೇವರಿಗೆ ಮೂರು ಪ್ರಾಣಿ ಬಲಿ ಅರ್ಪಿಸಿದ್ದ ಕೇಡಿ ಗಂಡ!

Chikkamagaluru

ಹೆಂಡ್ತಿ ಕೊಂದು ಕೊಳವೆ ಬಾವಿಯಲ್ಲಿ ಹಾಕಿ, ದೇವರಿಗೆ ಮೂರು ಪ್ರಾಣಿ ಬಲಿ ಅರ್ಪಿಸಿದ್ದ ಕೇಡಿ ಗಂಡ!

Public TV
Last updated: October 15, 2025 8:00 am
Public TV
Share
3 Min Read
Chikkamagaluru
SHARE

– ಹೆಂಡ್ತಿ ದೆವ್ವ ಆಗಬಾರದು, ತಾನು ಪೊಲೀಸರಿಗೆ ಸಿಗಬಾರ್ದು ಅಂತ ಪ್ರಾಣಿಬಲಿ

ಚಿಕ್ಕಮಗಳೂರು: ಹೆಂಡತಿ ಕೊಂದು ಕೊಳವೆ ಬಾವಿಗೆ ಹಾಕಿ ದಫನ್ ಮಾಡಿ ದೇವರಿಗೆ ಮೂರು ಪ್ರಾಣಿ ಬಲಿ (Animal sacrifice) ನೀಡಿ, ಕಬ್ಬಿಣದ ತಗಡಿಗೆ ಹೆಂಡತಿ ಹೆಸರು ಬರೆದು ಆಕೆ ದೆವ್ವ-ಪೀಡೆ-ಪಿಶಾಚಿ ಆಗಬಾರದು, ಈ ಕೇಸ್ ಗೊತ್ತಾಗಬಾರದು, ಕೇಸ್ ಪತ್ತೆ ಹಚ್ಚುವಲ್ಲಿ ಪೊಲೀಸರು ವೈಫಲ್ಯ ಆಗಬೇಕು, ಕೋರ್ಟಿನಿಲ್ಲಿ ಕೇಸ್ ನಿಲ್ಲಬಾರದು ಎಂದು ಬರೆದು ಹೆಂಡತಿ ಫೋಟೋವನ್ನ ದೇವಾಲಯದ ಮರಕ್ಕೆ ಮೊಳೆ ಹೊಡೆದಿದ್ದ ಕೇಡಿ-ಕಿರಾತಕ ಪತಿ ಬಂಧನವಾಗಿರೋ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆ ಕಡೂರು ತಾಲೂಕಿನ ಆಲಘಟ್ಟ ಗ್ರಾಮದಲ್ಲಿ ನಡೆದಿದೆ.

Marriage

ಮೃತಳನ್ನ 28 ವರ್ಷದ ಭಾರತಿ ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ ತಿಂಗಳ ಹಿಂದೆ ಹೆಂಡತಿಯನ್ನ ಕೊಂದಿದ್ದ ಗಂಡ ವಿಜಯ್ ಯಾರಿಗೂ ತಿಳಿಯಂತೆ ತಮ್ಮ ತೋಟದ ಕೊಳವೆ ಬಾವಿಯಲ್ಲಿ ಆಕೆಯನ್ನ ಹೂತಿದ್ದನು. ಯಾರಿಗೂ ಅನುಮಾನ ಬಾರದಿರಲಿ ಎಂದು ಆತನೇ ಹೋಗಿ ನನ್ನ ಪತ್ನಿ ಮಾನಸಿಕ ಅಸ್ವಸ್ಥೆ. ಎಲ್ಲೋ ಹೋಗಿದ್ದಾಳೆ. ಹುಡುಕಿಕೊಡಿ ಎಂದು ಕಡೂರು ಪೊಲೀಸ್ ಠಾಣೆಯಲ್ಲಿ ದೂರು ಕೂಡ ನೀಡಿದ್ದ. ಆದ್ರೆ, ಒಂದೂವರೆ ತಿಂಗಳ ಹಿಂದೆ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆಯ ಬೆನ್ನು ಬಿದ್ದಿದ್ದರು. ಹುಡುಗಿಯ ಪೋಷಕರು ಕೂಡ ನಮಗೆ ನಮ್ಮ ಮಗಳನ್ನ ಹುಡುಕಿಕೊಂಡು ಎಂದು ಕೈಮುಗಿದಿದ್ದರು. ಇದೀಗ ಪೊಲೀಸರ ಸೂಕ್ಷ್ಮ ತನಿಖೆಯಿಂದ ಹಂತಕ ಆಕೆಯ ಗಂಡನೇ ಎಂಬುದು ಸಾಬೀತಾಗಿದ್ದು, ಗಂಡ ವಿಜಯ್, ಅತ್ತೆ ತಾಯಮ್ಮ, ಮಾವ ಗೋವಿಂದಪ್ಪನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

CRIME

ಏನಿದು ಹಾರರ್‌ ಸ್ಟೋರಿ?
ಮೃತ ಭಾರತಿ ತನ್ನ ಅಜ್ಜಿ ನೋಡಲು ಶಿವಮೊಗ್ಗಕ್ಕೆ ಹೋದವಳು ವಾಪಸ್ಸು ಬಾರದೇ ಕಾಣೆಯಾಗಿದ್ದಾಳೆ ಎಂದು ಸೆಪ್ಟೆಂಬರ್ 5ರಂದು ಪಾಪಿ ಗಂಡ ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದನು. ಪೋಲೀಸರು ತನಿಖೆ ಕೈಗೊಂಡಿದ್ದರು. ಈ ನಡುವೆ ಸುಮಾರು ಒಂದೂವರೆ ತಿಂಗಳ ಬಳಿಕ ಅಕ್ಟೋಬರ್ 13 ರಂದು ಭಾರತಿಯ ತಾಯಿ ಎಮ್ಮೆದೊಡ್ಡಿ ಪ್ರದೇಶದ ಪರದೇಶಿಹಾಳ್ ನಿವಾಸಿ ಲಲಿತಮ್ಮ ಅವರು ಕಡೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ನನ್ನ ಮಗಳು ಭಾರತಿಯನ್ನ 6 ವರ್ಷಗಳ ಹಿಂದೆ ಆಲಘಟ್ಟದ ವಿಜಯಕುಮಾರ್ ಎಂಬುವವರಿಗೆ ವಿವಾಹ ಮಾಡಿಕೊಟ್ಟಿದ್ದೆವು. ನಂತರ ಹಲವಾರು ಬಾರಿ ವರದಕ್ಷಿಣೆ ವಿಚಾರವಾಗಿ ಭಾರತಿಗೆ ಹೊಡೆದು ಹಿಂಸೆ ನೀಡಿದ್ದರು. ಈಗ ಕೆಲ ದಿನಗಳ ಹಿಂದೆಯೂ ವರದಕ್ಷಿಣೆ ವಿಚಾರವಾಗಿ ಆಕೆಯ ಕಾಲು ಮುರಿಯುವಂತೆ ಹೊಡೆದಿದ್ದರು. ರಾಜಿ ಪಂಚಾಯಿತಿ ಮಾಡಿ ಆಕೆಯನ್ನು ಗಂಡನ ಮನೆಗೆ ಕಳುಹಿಸಿದ್ದೆವು. ಹತ್ತು ದಿನಗಳ ಹಿಂದೆ ಮತ್ತೆ ಭಾರತಿಗೆ ಬಹಳ ಹಿಂಸೆ ನೀಡಿದ್ದಾರೆಂಬ ವಿಚಾರ ತಿಳಿದು ಅವರ ಮನೆಗೆ ಹೋದಾಗ ಅವರ ಅಜ್ಜಿಗೆ ಹುಷಾರಿಲ್ಲ. ಹಾಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ನೋಡಲು ಹೋಗಿದ್ದಾಳೆ ಎಂದು ಹೇಳಿದ್ದರು.

Crime

ಆ ನಂತರ ನಮಗೆ ತಿಳಿಯದಂತೆ ಭಾರತಿ ನಾಪತ್ತೆಯಾಗಿದ್ದಾಳೆ ಎಂದು ಕಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ವಿಚಾರ ತಿಳಿದು ಮತ್ತೆ ಆಲಘಟ್ಟಕ್ಕೆ ಹೋಗಿ ಕೇಳಿದಾಗ ನಿಮ್ಮ ಮಗಳು ಬರುವುದಿಲ್ಲ. ಆಕೆಯನ್ನು ಮರೆತು ಬಿಡಿ ಎಂದು ಹೇಳಿದ್ದರಂತೆ. ನನ್ನ ಮಗಳನ್ನು ಇವರು ಕೊಲೆ ಮಾಡಿದ್ದಾರೆ. ಶವ ಎಲ್ಲಿದೆ? ಎಂದು ಹೇಳಿಲ್ಲ ಎಂದು ಭಾರತಿಯ ಪತಿ ವಿಜಯ ಕುಮಾರ್, ಆತನ ತಂದೆ ಗೋವಿಂದಪ್ಪ ಹಾಗೂ ತಾಯಿ ತಾಯಮ್ಮ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಅಂತಿಮವಾಗಿ ದೂರು ನೀಡಿದ ವ್ಯಕ್ತಿಯೇ ತನ್ನ ಹೆಂಡತಿಯನ್ನು ಕೊಲೆ ಮಾಡಿ ಕಾಣೆಯಾಗಿರುವ ಬಗ್ಗೆ ದೂರು ನೀಡಿರುವ ಘಟನೆ ಬೆಳಕಿಗೆ ಬಂದು ಆತನನ್ನು ಬಂಧಿಸಿದ್ದಾರೆ. ಜೊತೆಗೆ ಆತನ ತಂದೆ ತಾಯಿಯನ್ನೂ ಬಂಧಿಸಲಾಗಿದೆ.

ಆರೋಪಿಗಳನ್ನ ನ್ಯಾಯಾಂಗ ತನಿಖೆಗೆ ಒಳಪಡಿಸಲಾಗಿದೆ. ಕೊಲೆ ಮಾಡಿದ ನಂತರ ಹೆಂಡತಿಯ ಮೃತ ದೇಹವನ್ನು ತನ್ನದೇ ಜಮೀನಿನಲ್ಲಿ ಹಿಂದೆ ತೆಗೆಸಿ ನೀರು ಬಾರದೇ ಹಾಗೆಯೇ ಮುಚ್ಚದೇ ಬಿಟ್ಟಿದ್ದ ಕೊಳವೆ ಬಾವಿಗೆ ಹಾಕಿದ್ದಾರೆ ಎನ್ನಲಾಗಿದೆ. ಮಂಗಳವಾರ ಕಡೂರು ಪೊಲೀಸರು ಮೃತದೇಹ ಹಾಕಿದ್ದಾರೆ ಎನ್ನಲಾದ ಕೊಳವೆ ಬಾವಿ ಮುಂತಾದೆಡೆ ಮಹಜರು ನಡೆಸಿದರು. ಮೃತದೇಹವನ್ನು ಹೊರತೆಗೆಯಲು ಅಗತ್ಯ ಕಾನೂನಾತ್ಮಕ ಕ್ರಮಗಳನ್ನು ಕೈಗೊಂಡು ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

TAGGED:ChikkamagaluruChikkamagaluru Policemarriagemarried womanಚಿಕ್ಕಮಗಳೂರುಚಿಕ್ಕಮಗಳೂರು ಪೊಲೀಸ್ಮದುವೆಮಹಿಳೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
15 minutes ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
19 minutes ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
58 minutes ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
1 hour ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
2 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?