ಮಂಡ್ಯ: ಪತಿಯೊಬ್ಬ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ.
ಕಿರುಗಾವಲು ಗ್ರಾಮದ ಸೌಮ್ಯ (25) ಕೊಲೆಯಾದ ಮಹಿಳೆ. ಪತಿ ಕುಮಾರಸ್ವಾಮಿ ಪತ್ನಿ ಅನ್ಯ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಮೃತ ಸೌಮ್ಯ ಕಳೆದ 9 ವರ್ಷಗಳ ಹಿಂದೆ ಕಲ್ಕುಣಿ ಗ್ರಾಮದ ಕುಮಾರಸ್ವಾಮಿ ಜೊತೆ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ಆದರೆ ಪತಿ ಕುಮಾರಸ್ವಾಮಿ ಪತ್ನಿ ಸೌಮ್ಯ ಬೇರೆಯೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನ ಪಡುತ್ತಿದ್ದನು. ಅನೈತಿಕ ಸಂಬಂಧದ ವಿಚಾರವಾಗಿ ಆಗಾಗ ಸೌಮ್ಯ ಮತ್ತು ಕುಮಾರಸ್ವಾಮಿ ಮಧ್ಯೆ ಜಗಳವಾಗುತ್ತಿತ್ತು.
ಅದೇ ವಿಚಾರವಾಗಿ ಮತ್ತೆ ಜಗಳವಾಗಿ ಸೌಮ್ಯ ತಮ್ಮ ತವರು ಮನೆಗೆ ಹೋಗಿದ್ದರು. ಆಗ ಭಾನುವಾರ ರಾತ್ರಿ ಕುಮಾರಸ್ವಾಮಿ ಅತ್ತೆ ಮನೆಗೆ ಹೋಗಿದ್ದು, ಮತ್ತೆ ಜಗಳ ಮಾಡಿದ್ದಾನೆ. ನಂತರ ಎಲ್ಲರು ಮಲಗಿದ ಬಳಿಕ ಯಾರಿಗೂ ಶಬ್ಧ ಕೇಳಿಸಬಾರದೆಂದು ಸೌಮ್ಯ ಬಾಯಿಗೆ ಬಟ್ಟೆ ತುರುಕಿ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಇಂದು ಬೆಳಗ್ಗೆ ಎದ್ದು ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕಿರುಗಾವಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]