ಮದ್ಯದ ಅಮಲಿನಲ್ಲಿ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

Public TV
1 Min Read
RAICHUR MURDER

ರಾಯಚೂರು: ಕೌಟುಂಬಿಕ ಕಲಹದಿಂದಾಗಿ ಪತಿ (Husband) ಯೇ ಪತ್ನಿ (wife)ಯನ್ನು ಕೊಚ್ಚಿ ಕೊಲೆಗೈದಿರುವ ಘಟನೆ ರಾಯಚೂರು ತಾಲೂಕಿನ ಏಗನೂರು ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ ಶಿಕ್ಷಕಿಯಾಗಿದ್ದ 27 ವರ್ಷದ ನಾಗರತ್ನ ಕೊಲೆಯಾದ ಮಹಿಳೆ.

Police Jeep

ಆರೋಪಿ ಪತಿ ಶಶಿಕುಮಾರ ಕೊಲೆ ಮಾಡಿ ಬಳಿಕ ಪೊಲೀಸರಿಗೆ ಸೆರೆಯಾಗಿದ್ದಾನೆ. ಸದ್ಯ ತಾಯಿಯನ್ನ ಕಳೆದುಕೊಂಡು ಇಬ್ಬರು ಮಕ್ಕಳು ತಬ್ಬಲಿಗಳಾಗಿದ್ದಾರೆ. ನಿತ್ಯ ಕುಡಿದು ಗಲಾಟೆ ಮಾಡುತ್ತಿದ್ದ ಪತಿಯ ಕಾಟಕ್ಕೆ ನಾಗರತ್ನ ಬೇಸತ್ತಿದ್ದಳು. ಗಂಡನ ಕಾಟದಿಂದ ಬೇಸತ್ತು ಕಳೆದ ಎರಡು ದಿನಗಳಿಂದ ಅತ್ತೆಯ ಜೊತೆ ಬೇರೆ ಮನೆಯಲ್ಲಿದ್ದಳು.

kerala police

ಗಂಡನ ಕಿರುಕುಳದ ಕುರಿತು ಪೊಲೀಸರಿಗೆ ಮೌಖಿಕ ದೂರು ಕೂಡ ನೀಡಿದ್ದಳು, ಗಂಡನನ್ನ ಠಾಣೆಗೆ ಕರೆಯಿಸಿ ಬುದ್ಧಿ ಹೇಳುವುದಾಗಿ ಪೊಲೀಸರು ಧೈರ್ಯ ನೀಡಿದ್ದರು. ಆದರೆ ಪಾಪಿ ಪತಿ ಶಶಿಕುಮಾರ್ ಮದ್ಯದ ಅಮಲಿನಲ್ಲಿ ಮತ್ತೆ ಜಗಳ ತೆಗೆದು ಕೊಡಲಿಯಿಂದ ಕುತ್ತಿಗೆ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.

POLICE JEEP

ಘಟನೆ ಹಿನ್ನೆಲೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯ ವಿಚಾರಣೆ ಮುಂದುವರಿದಿದೆ. ಇದನ್ನೂ ಓದಿ: ಜೈಲಿನಲ್ಲಿ ಬೆಂಕಿ ಅವಘಡ- ಮಹ್ಸಾ ಅಮಿನಿ ಬೆಂಬಲಿಗರು ಸಾವು, 61 ಮಂದಿಗೆ ಗಾಯ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *