Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಿಯಕರನಿಗಾಗಿ ಪತಿಯನ್ನೇ ತುಂಡರಿಸಿ ರಸ್ತೆಯುದ್ದಕ್ಕೂ ಎಸೆದ ಪತ್ನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರಿಯಕರನಿಗಾಗಿ ಪತಿಯನ್ನೇ ತುಂಡರಿಸಿ ರಸ್ತೆಯುದ್ದಕ್ಕೂ ಎಸೆದ ಪತ್ನಿ

Crime

ಪ್ರಿಯಕರನಿಗಾಗಿ ಪತಿಯನ್ನೇ ತುಂಡರಿಸಿ ರಸ್ತೆಯುದ್ದಕ್ಕೂ ಎಸೆದ ಪತ್ನಿ

Public TV
Last updated: October 8, 2019 3:56 pm
Public TV
Share
2 Min Read
love
SHARE

– 8 ವರ್ಷದ ಬಳಿಕ ಬಯಲಾಯ್ತು ಪತ್ನಿಯ ಕರ್ಮಕಾಂಡ

ನವದೆಹಲಿ: ಪ್ರಿಯಕರನಿಗಾಗಿ ಪತ್ನಿಯೇ ಪತಿಯನ್ನು ಕೊಂದು, ಬಳಿಕ ಪೊಲೀಸರಿಂದ ತಪ್ಪಿಸಿಕೊಳ್ಳಲು ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆಯುದ್ದಕ್ಕೂ ಎಸೆದಿದ್ದ ಭಯಾನಕ ಪ್ರಕರಣವನ್ನು ದೆಹಲಿ ಪೊಲೀಸರು ಬೇಧಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ 2011ರಲ್ಲಿ ನಡೆದಿದ್ದ ಬರ್ಬರ ಕೊಲೆ ಪ್ರಕರಣ ಎಲ್ಲರನ್ನು ಬೆಚ್ಚಿಬೀಸಿತ್ತು. ಆದರೆ ಈ ಬರ್ಬರ ಕೊಲೆ ಪ್ರಕರಣ ಬೇಧಿಸಲು ಪೊಲೀಸರು ಸತತ 8 ವರ್ಷ ಬೇಕಾಯ್ತು. ಕೊನೆಗೂ ಸತತ ಪ್ರಯತ್ನದಿಂದ ಕೊಲೆ ಪ್ರಕರಣದ ಹಿಂದಿನ ರಹಸ್ಯ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 2011ರಲ್ಲಿ ದೆಹಲಿ ನಿವಾಸಿ ರವಿ ಕೊಲೆ ನಡೆದಿತ್ತು. ಆತನ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಆರೋಪಿಗಳು ರಸ್ತೆಯುದ್ದಕ್ಕೂ ಎಸೆದಿದ್ದರು. ಈ ಪ್ರಕರಣ ನಡೆದಾಗ ತನಿಖೆ ಕೈಗೊಂಡ ಪೊಲೀಸರು ಇದನ್ನು ಬೇಧಿಸಲು ಆಗಿರಲಿಲ್ಲ. ಹೀಗಾಗಿ ಪ್ರಕರಣವನ್ನು ದೆಹಲಿ ಕ್ರೈಂ ಬ್ರಾಂಚ್ ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. ಈ ಬಗ್ಗೆ ತನಿಖೆ ನಡೆಸುತ್ತಿದ್ದ ಕ್ರೈಂ ಬ್ರಾಂಚ್ ಪೊಲೀಸರು 8 ವರ್ಷದ ಬಳಿಕ ಪ್ರಕರಣಕ್ಕೆ ಅಂತ್ಯ ಹಾಡಿದ್ದಾರೆ. ಇದನ್ನೂ ಓದಿ:ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪ್ರೇಯಸಿಯ ಪತಿಯನ್ನೇ ಕೊಂದ

delhi murder 1

ಮೃತವ್ಯಕ್ತಿ ರವಿಯನ್ನು ಆತನ ಪತ್ನಿ ಶಕುಂತಲಾ, ಪ್ರಿಯಕರ ಕಮಲ್ ಹಾಗೂ ಕಾರು ಚಾಲಕ ಸೇರಿಕೊಂಡು ಕೊಲೆ ಮಾಡಿದ್ದರು ಎಂಬುದು ಬೆಳಕಿಗೆ ಬಂದಿದೆ. 2011ರಲ್ಲಿ ಶಕುಂತಲಾ ಹಾಗೂ ರವಿ ವಿವಾಹವಾಗಿತ್ತು. ಆದರೆ ಶಕುಂತಲಾ ಕಮಲ್‍ನನ್ನು ಪ್ರೀತಿಸುತ್ತಿದ್ದಳು. ಆದ್ದರಿಂದ ಮದುವೆಯ ನಂತರೂ ಅವರಿಬ್ಬರು ಸೇರುತ್ತಿದ್ದರು. ಆದರೆ ಮುಂದೆ ಪತಿ ತಮ್ಮ ಪ್ರೀತಿಗೆ ಅಡ್ಡಿಯಾಗಬಹುದು ಎಂಬ ಆಲೋಚನೆ ಮಾಡಿ ರವಿಗೆ ಅಂತ್ಯ ಕಾಣಿಸಲು ಇಬ್ಬರೂ ಭಯಾನಕ ಪ್ಲಾನ್ ಮಾಡಿದ್ದರು.

delhi murder

ಪತಿಯನ್ನು ಕೊಲೆ ಮಾಡಲು ಶಕುಂತಲಾ 70 ಸಾವಿರ ರೂಪಾಯಿ ಖರ್ಚು ಮಾಡಿ ವಾಹನವೊಂದನ್ನೂ ರೆಡಿ ಮಾಡಿಟ್ಟಿಕೊಂಡಿದ್ದಳು. ಜೊತೆಗೆ ಅದರ ಚಾಲಕನನ್ನು ಕೂಡ ತನ್ನ ಪ್ಲಾನ್‍ನಲ್ಲಿ ಶಾಮೀಲು ಮಾಡಿಕೊಂಡಿದ್ದಳು. ತಂಗಿಯ ಮನೆಗೆ ಹೋಗಬೇಕು ಎಂದು ಶಕುಂತಲಾ ಪತಿಯನ್ನ ಪುಸಲಾಯಿಸಿ ಕರೆಸಿಕೊಂಡಿದ್ದಳು. ಹೀಗೆ ಕಾರಿನಲ್ಲಿ ಹೀಗುವಾಗ ಸುಳ್ಳು ನೆಪವೊಡ್ಡಿ ಕಮಲ್ ಕೂಡಾ ವಾಹನ ಹತ್ತಿಕೊಂಡ. ಬಳಿಕ ಇಬ್ಬರೂ ಸೇರಿ ಕಾರಿನಲ್ಲೇ ಪತಿಯನ್ನ ಕೊಲೆ ಮಾಡಿದರು. ಈ ಕೃತಕ್ಕೆ ಕಾರು ಚಾಲಕ ಕೂಡ ಸಾಥ್ ಕೊಟ್ಟಿದ್ದನು. ಕೊಲೆ ಮಾಡಿದ ಬಳಿಕ ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರ ಗುಂಡಿಯಲ್ಲಿ ರವಿಯ ಮೃತದೇಹ ಹಾಕಿ ಶಕುಂತಲಾ ಹಾಗೂ ಕಮಲ್ ಬೆಂಕಿ ಇಟ್ಟು ಸುಟ್ಟರು. ನಂತರ ಪೊಲೀಸರಿಗೆ ಈ ಬಗ್ಗೆ ತಿಳಿದರೆ ತನಿಖೆ ನಡೆಸುತ್ತಾರೆ ಎಂದು ಯೋಚಿಸಿ, ಅವರ ದಾರಿ ತಪ್ಪಿಸಲು ರವಿ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ಕಾರಿನಲ್ಲಿ ತೆಗೆದುಕೊಂಡು ಹೋಗಿ ಅಲ್ವಾರ್ ಹಾಗೂ ರೇವಾರಿ ಪ್ರದೇಶದ ನಡುವೆ ದಾರಿಯುದ್ದಕ್ಕೂ ಒಂದೊಂದು ತುಂಡುಗಳನ್ನು ಎಸೆದಿದ್ದರು. ಬಳಿಕ ಅಮಾಯಕರಂತೆ ನಾಟಕವಾಡಿದ್ದರು.

delhi police 1

ಕೃತ್ಯವೆಸೆಗಿದ ನಂತರ ಆರೋಪಿಗಳು ಆರಾಮಾಗಿಯೇ ಇದ್ದರು. ಆದ್ರೆ, ಶಕುಂತಲಾ ಹಾಗೂ ಕಮಲ್ ಮೇಲೆಯೇ ಪೊಲೀಸರು ಅನುಮಾನ ಪಟ್ಟು, 2017ರಲ್ಲಿ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ನಡೆಸಿದಾಗ ಅವರಿಬ್ಬರ ಅಕ್ರಮ ಸಂಬಂಧ ಬೆಳಕಿಗೆ ಬಂದಿತ್ತು. ಆ ಬಳಿಕ ಎಚ್ಚೆತ್ತುಕೊಂಡ ಆರೋಪಿಗಳು ಪರಾರಿಯಾಗಿದ್ದರು.

ಆದರೆ ಸೋಮವಾರ ಕಾರು ಚಾಲಕ ಹಾಗೂ ಕಮಲ್‍ನನ್ನು ಪೊಲೀಸರು ಬಂಧಿಸಿದಾಗ ಕೊಲೆಯ ರಹಸ್ಯ ಬೆಳಕಿಗೆ ಬಂದಿದ್ದು, ಅದನ್ನು ಕೇಳಿ ಪೊಲೀಸರೇ ದಂಗಾಗಿದ್ದಾರೆ. ಸದ್ಯ ಪೊಲೀಸರು ಇಬ್ಬರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದು, ಆರೋಪಿ ಶಕುಂತಲಾ ತಲೆಮರಿಸಿಕೊಂಡಿದ್ದಾಳೆ. ಆಕೆಯನ್ನೂ ಕೂಡ ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

TAGGED:car driverhusbandloverNew DelhipolicePublic TVWifeಕಾರು ಚಾಲಕನವದೆಹಲಿಪತಿಪತ್ನಿಪಬ್ಲಿಕ್ ಟಿವಿಪೊಲೀಸರುಪ್ರಿಯಕರ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
48 minutes ago
Siddaramaiah 3
Bengaluru City

ಸಚಿವ ಸಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿದ್ದರಾಮಯ್ಯ

Public TV
By Public TV
55 minutes ago
Supreme Court 1
Court

ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ತೆರೆ ಎಳೆದ ಸುಪ್ರೀಂಕೋರ್ಟ್

Public TV
By Public TV
1 hour ago
devendra fadnavis
Karnataka

ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ: ದೇವೇಂದ್ರ ಫಡ್ನವೀಸ್

Public TV
By Public TV
1 hour ago
Election Commission
Latest

ಪ.ಬಂಗಾಳ ಚುನಾವಣೆ ವೇಳೆ ದುರ್ನಡತೆ – ಐವರು ಪೊಲೀಸ್ ಅಧಿಕಾರಿಗಳನ್ನ ಅಮಾನತುಗೊಳಿಸಿ ಶಿಸ್ತು ಕ್ರಮಕ್ಕೆ ನಿರ್ದೇಶಿಸಿದ EC

Public TV
By Public TV
2 hours ago
a huge tree fell in front of a moving car in aldur chikkamagaluru
Chikkamagaluru

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ – ಪ್ರಯಾಣಿಕರು ಜಸ್ಟ್‌ ಮಿಸ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?