ವಿಜಯಪುರ: ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ತೋಟದವೊಂದರ ಗುಡಿಸಲಿನಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಸಂಗಣ್ಣ ಬಿಸ್ತಾಳ ಅವರಿಗೆ ಸೇರಿದ ತೋಟದ ಗುಡಿಸಲು ಬೆಂಕಿಗಾಹುತಿಯಾಗಿದೆ. ಗುಡಿಸಲಿನಲ್ಲಿದ್ದ 15 ಗ್ರಾಂ ಚಿನ್ನಾಭರಣ, 50 ಸಾವಿರ ರೂ. ನಗದು, 3 ಚೀಲ ಜೋಳ, 2 ಚೀಲ ಮೆಕ್ಕೇ ಜೋಳ, 2 ಚೀಲ ಕಡಲೆ, 3 ಚೀಲ ಗೋಧಿ ಹಾಗೂ ಬಟ್ಟೆ ಇತ್ಯಾದಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ಈ ಘಟನೆ ಕುರಿತು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv