ಹೈದರಾಬಾದ್: ದೀಪಾವಳಿ ಹಬ್ಬದ (Diwali Celebrations) ಮೊದಲ ದಿನವೇ ಪಟಾಕಿ ಸಿಡಿತದಿಂದ ಸುಮಾರು 24 ಮಂದಿ ಕಣ್ಣಿಗೆ ಗಾಯವಾಗಿರುವ ಘಟನೆ ಹೈದರಾಬಾದ್ನ (Hyderabad) ಮೆಹದಿಪಟ್ನಂನಲ್ಲಿ (Mehdipatnam) ನಡೆದಿದೆ.
ಮೆಹದಿಪಟ್ಟಣಂನಲ್ಲಿರುವ ಸರ್ಕಾರಿ ಸರೋಜಿನಿ ದೇವಿ ಕಣ್ಣಿನ ಆಸ್ಪತ್ರೆಯಲ್ಲಿ (Sarojini Devi Eye Hospital) ಮಕ್ಕಳು ಸೇರಿದಂತೆ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ದೀಪಾವಳಿ ಸಮಯದಲ್ಲಿ ನಿಷೇಧಿತ ಪಟಾಕಿಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ಮತ್ತು ಅಂಗಡಿಗಳ ಮೇಲೆ ತೆಲಂಗಾಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಟಿಎಸ್ಪಿಸಿಬಿ) ಇತ್ತೀಚೆಗಷ್ಟೇ ಕಠಿಣ ಕ್ರಮ ಕೈಗೊಂಡಿದೆ.
ನಾಗರಿಕ ಮತ್ತು ಮಾಲಿನ್ಯ ಮಂಡಳಿ ನಿಯಮಗಳನ್ನು ಅನುಸಿಸದೇ ಇರುವವರನ್ನು ಗುರುತಿಸಲು ವಿಶೇಷ ತಂಡವನ್ನು ರಚಿಸಲಾಗಿದೆ. ಭಾರತ ಮತ್ತು ಪ್ರಪಂಚದಾದ್ಯಂತ ಅಕ್ಟೋಬರ್ 24 ರವರೆಗೂ ದೀಪಾವಳಿ ಹಬ್ಬವನ್ನು ಹಿಂದೂಗಳು ಸಂಪ್ರದಾಯಿಕವಾಗಿ ಆಚರಿಸುತ್ತಾರೆ. ಇದನ್ನೂ ಓದಿ: ಕೇತುಗ್ರಸ್ಥ ಸೂರ್ಯಗ್ರಹಣ – ಘಾಟಿಸುಬ್ರಮಣ್ಯ ದೇವಾಲಯ, ಶ್ರೀ ಭೋಗನಂದೀಶ್ವರನ ಆಲಯ ಬಂದ್
ಪ್ರತಿ ದೀಪಾವಳಿ ಹಬ್ಬದಲ್ಲೂ ಆಂಧ್ರಪ್ರದೇಶದ ಜನತೆ ಸತ್ಯಭಾಮೆಯ ಮಣ್ಣಿನ ವಿಗ್ಹವನ್ನು ತಯಾರಿಸಿ, ಅದಕ್ಕೆ ಪ್ರಾರ್ಥನೆ ಸಲ್ಲಿಸಿ, ಆಶೀರ್ವಾದ ಪಡೆಯುತ್ತಾರೆ. ಬಳಿಕ ತಮ್ಮ ಪ್ರೀತಿ ಪಾತ್ರರೊಂದಿಗೆ ಸಂತೋಷದಿಂದ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಇದನ್ನೂ ಓದಿ: ಶಿವಮೊಗ್ಗ ಮತ್ತೆ ಉದ್ವಿಗ್ನ – ಹರ್ಷನ ಮನೆ ಮುಂದೆ ಲಾಂಗು, ಮಚ್ಚು ಹಿಡಿದು ಓಡಾಟ