ಶಾಸಕರ ಬೆಂಗಾವಲು ವಾಹನ ಡಿಕ್ಕಿ – 3 ವರ್ಷದ ಕಂದಮ್ಮ ಸ್ಥಳದಲ್ಲೇ ಸಾವು

Public TV
1 Min Read
MLA CAR 1

ಹೈದರಾಬಾದ್: ಮುಲುಗು ಕ್ಷೇತ್ರದ ಎಂಎಲ್‍ಎ ದನ್ಸಾರಿ ಅನುಸುಯಾ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ 3 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

ವಾರಂಗಲ್ ಜಿಲ್ಲೆಯ ಜೆಡಿವಾಲು ಪ್ರದೇಶದಲ್ಲಿ ಈ ಘಟನೆ ನಡೆದಿದ್ದು. ತಂದೆ ಅರುಣ್ ಮತ್ತು ತಾಯಿ ವಿಜಯ ಜೊತೆ ಬೈಕಿನಲ್ಲಿ ಅಂಗನವಾಡಿಗೆ ಹೋಗುತ್ತಿದ್ದ ಶ್ರಾವಂತಿ (3) ಮೃತಪಟ್ಟ ಕಂದಮ್ಮ. ಅಪಘಾತದಲ್ಲಿ ಬೈಕ್ ಸಂಪೂರ್ಣ ನಜ್ಜುಗಿದ್ದು ಮಗುವಿನ ಪೋಷಕರು ಗಾಯಗೊಂಡಿದ್ದಾರೆ.

MLA CAR ACCIDENT

ಮುಲುಗು ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗತಿಕೊಯಗುಡೆನ್ ಊರಿಗೆ ಸೇರಿದ ಈ ದಂಪತಿ ತಮ್ಮ ಮಗಳು ಶ್ರಾವಂತಿಯನ್ನು ಅಂಗನವಾಡಿಗೆ ಬಿಟ್ಟು ಬರಲು ಬೈಕಿನಲ್ಲಿ ಬರುತ್ತಿದ್ದರು. ಇದೇ ವೇಳೆಗೆ ಅ ದಾರಿಯಲ್ಲಿ ಎಂಎಲ್‍ಎ ದನ್ಸಾರಿ ಅನುಸುಯಾ ಅವರು ಹೋಗುತ್ತಿದ್ದರು. ಎದುರಿಗೆ ಬಂದ ಬೈಕಿಗೆ ಎಂಎಲ್‍ಎ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಶ್ರಾವಂತಿ ತಲೆಗೆ ಬಲವಾದ ಪೆಟ್ಟಾದ ಕಾರಣ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಈ ಘಟನೆಯ ಬಗ್ಗೆ ಸಂತಾಪ ಸೂಚಿಸಿರುವ ದನ್ಸಾರಿ ಅನುಸುಯಾ ಅವರು, ಕುಟುಂಬಕ್ಕೆ ಅರ್ಥಿಕವಾಗಿ ಇಲ್ಲಾ ರೀತಿಯಲ್ಲೂ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ನನಗೆ ಈ ಅಪಘಾತದಲ್ಲಿ 3 ವರ್ಷದ ಮಗು ಸಾವನ್ನಪ್ಪಿರುವುದು ತುಂಬ ನೋವಾಗಿದೆ. ಈ ಮಗುವಿನ ಕುಟುಂಬ ಕಳೆದ ಚುನಾವಣೆಯಲ್ಲಿ ನನ್ನ ಗೆಲುವಿಗೆ ಶ್ರಮಿಸಿತ್ತು. ನಮ್ಮ ಕಡೆಯಿಂದ ತಪ್ಪಾಗಿದೆ ನಾನು ಈ ದುಃಖದ ಸಮಯದಲ್ಲಿ ಈ ಕುಟುಂಬದ ಜೊತೆಗೆ ಇರುತ್ತೇನೆ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *