ಹೈದರಾಬಾದ್ನ ನಾಂಪಲ್ಲಿ ನ್ಯಾಯಾಲಯವು ನಟ ಅಲ್ಲು ಅರ್ಜುನ್ಗೆ ಸಮನ್ಸ್ ಜಾರಿ ಮಾಡಿದ್ದು, ಸಂಧ್ಯಾ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 22ರ ಸೋಮವಾರ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಸೂಚಿಸಿದೆ.
ಚಿಕ್ಕದಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು 11 ನೇ ಆರೋಪಿ ಎಂದು ಹೆಸರಿಸಿದ್ದಾರೆ. ಆದರೆ, ಸಂಧ್ಯಾ ಥಿಯೇಟರ್ನ ಆಡಳಿತ ಮಂಡಳಿಯನ್ನು 1 ರಿಂದ 10 ನೇ ಆರೋಪಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ.
