ನವದೆಹಲಿ: ರಾಯಚೂರು (Raichuru) ಜಿಲ್ಲೆಯಲ್ಲಿ ಏಮ್ಸ್ (AIIMS) ಸ್ಥಾಪನೆ ಮಾಡುವಂತೆ ಹೈದರಾಬಾದ್ ಕರ್ನಾಟಕದ ಸಚಿವರು, ಸಂಸದರು ಮತ್ತು ಶಾಸಕರ ನಿಯೋಗ ಮನವಿ ಮಾಡಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವೀಯ (Mansukh Mandaviya) ಭೇಟಿಯಾದ ಸಚಿವ ಶರಣ ಪ್ರಕಾಶ್ ಪಾಟೀಲ್, ಎನ್.ಎಸ್ ಬೋಸರಾಜು ನೇತೃತ್ವದ ನಿಯೋಗ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದೆ.
ಭೇಟಿ ಬಳಿಕ ಕರ್ನಾಟಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಶರಣ ಪ್ರಕಾಶ್ ಪಾಟೀಲ್, ಕೇಂದ್ರ ಆರೋಗ್ಯ ಸಚಿವರಿಗೆ ರಾಯಚೂರಿನಲ್ಲಿ ಏಮ್ಸ್ ನಿರ್ಮಾಣ ಮಾಡುವಂತೆ ಮನವಿ ಮಾಡಿದೆ. ಕರ್ನಾಟಕದಲ್ಲಿ ಈವರೆಗೂ ಏಮ್ಸ್ ಸ್ಥಾಪನೆಯಾಗಿಲ್ಲ. ರಾಜ್ಯ ಸರ್ಕಾರದ ವತಿಯಿಂದ ಎಲ್ಲ ಸೌಲಭ್ಯ ಒದಗಿಸುತ್ತೇವೆ ಎಂದು ಭರವಸೆ ನೀಡಿದ್ದೇವೆ. ಇದನ್ನೂ ಓದಿ: BJPಯಲ್ಲಿ ಅನಿವಾರ್ಯವಾಗಿ ಹೊಂದಿಕೊಂಡು ಹೋಗ್ತಿದ್ದೀನಿ – ಎಸ್.ಟಿ ಸೋಮಶೇಖರ್
ರಾಯಚೂರಿನಲ್ಲಿ ಏಮ್ಸ್ ಅಗತ್ಯತೆ ವಿವರಿಸಿದೆ. ಹಿಂದುಳಿದ ಭಾಗವಾದ ಈ ಪ್ರದೇಶದಲ್ಲಿ ತಾಯಿ ಶಿಶು ಮರಣ ಪ್ರಮಾಣ ಹೆಚ್ಚಿದೆ. ಗಣಿಗಾರಿಕೆಯೂ ಇರುವ ಹಿನ್ನಲೆ ಹೆಚ್ಚಿನ ಪ್ರಮಾಣದಲ್ಲಿ ಅತ್ಯುನ್ನತ ಆಸ್ಪತ್ರೆ ಅವಶ್ಯಕತೆ ಇದೆ ಎಂದು ಹೇಳಿದೆ. ಕೇಂದ್ರ ಸಚಿವರು ಕೂಡ ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯ ಸರ್ಕಾರ ಎಲ್ಲಿ ಹೇಳುತ್ತೋ ಅಲ್ಲಿ ಮಾಡುತ್ತೇವೆ ಎಂದಿದ್ದಾರೆ ಎಂದರು.
ಬಳಿಕ ಮಾತನಾಡಿದ ಎನ್.ಎಸ್ ಬೋಸರಾಜು, ರಾಯಚೂರಿನಲ್ಲಿ ಏಮ್ಸ್ ಮಾಡುವುದು ಸೂಕ್ತ. ಕಲ್ಯಾಣ ಕರ್ನಾಟಕದ ಎಲ್ಲ ಪ್ರತಿನಿಧಿಗಳ ಒತ್ತಾಯವಿದೆ. ಏಮ್ಸ್ ಸ್ಥಾಪನೆಗೆ ಭೂಮಿ ಕೊಡಲಿದ್ದೇವೆ. ನೀರಿನ ವ್ಯವಸ್ಥೆ ಇದೆ. ರಾಯಚೂರಿನಲ್ಲಿ ಏಮ್ಸ್ ನಿರ್ಮಾಣವಾಗಬೇಕು ಎಂದು ಒಂದೇ ಹೆಸರು ಆಯ್ಕೆಗೆ ಕಳುಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ರಾಯಚೂರು ಹೆಸರಿಗೆ ಅನುಮೋದಿಸಿದ್ದಾರೆ. ರಾಜ್ಯ ಸರ್ಕಾರ ಆಶಯದ ಅನ್ವಯ ಏಮ್ಸ್ ನಿರ್ಮಿಸಲು ಮನವಿ ಮಾಡಿದೆ ಎಂದರು. ಇದನ್ನೂ ಓದಿ: ಆಪರೇಷನ್ ಹಸ್ತ ತಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ?
ನಿಯೋಗದಲ್ಲಿ ಬೀದರ್ ಸಂಸದ, ಕೇಂದ್ರ ಸಚಿವ ಭಗವಂತ್ ಖೂಬಾ, ಕೊಪ್ಪಳ ಸಂಸದ ಕರಡಿ ಸಂಗಣ್ಣ, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ್, ಶಾಸಕರಾದ ಬಾದರ್ಲಿ ಹಂಪನಾಗೌಡ, ಬಸನಗೌಡ ತುರವಿಹಾಳ್, ಬಸಣಗೌಡ ದದ್ದಲ್, ಡಾ. ಶಿವರಾಜ್ ಪಾಟೀಲ್, ಶರಣಗೌಡ ಭಯ್ಯಪೂರ, ಕರಿಯಮ್ಮ ದೇವದುರ್ಗ, ಕಲ್ಯಾಣ ಕರ್ನಾಟಕ ಹೋರಾಟಗಾರರಾದ ಡಾ. ಬಸವರಾಜ್ ಕಳಸ, ಲಕ್ಷ್ಮಣ್ ದಸ್ತಿ, ಅಶೋಕ್ ಕುಮಾರ್ ಇದ್ದರು.
Web Stories