Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2008 ವಾರಂಗಲ್ ಎನ್‌ಕೌಂಟರ್‌ನಂತೆ ದಿಶಾ ‘ಹತ್ಯಾಚಾರಿ’ಗಳ ಹುಟ್ಟಡಗಿಸಿದ ವಿ.ಸಿ ಸಜ್ಜನರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 2008 ವಾರಂಗಲ್ ಎನ್‌ಕೌಂಟರ್‌ನಂತೆ ದಿಶಾ ‘ಹತ್ಯಾಚಾರಿ’ಗಳ ಹುಟ್ಟಡಗಿಸಿದ ವಿ.ಸಿ ಸಜ್ಜನರ್

Latest

2008 ವಾರಂಗಲ್ ಎನ್‌ಕೌಂಟರ್‌ನಂತೆ ದಿಶಾ ‘ಹತ್ಯಾಚಾರಿ’ಗಳ ಹುಟ್ಟಡಗಿಸಿದ ವಿ.ಸಿ ಸಜ್ಜನರ್

Public TV
Last updated: December 6, 2019 3:28 pm
Public TV
Share
3 Min Read
Cyberabad Commissioner Sajjannar
SHARE

ಹೈದರಾಬಾದ್: ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ಅವರ ನೇತೃತ್ವದಲ್ಲಿ ನಡೆದ ದಿಶಾ ಪ್ರಕರಣ ಅತ್ಯಚಾರಿಗಳ ಎನ್‌ಕೌಂಟರ್‌ನನ್ನು 2008ರಲ್ಲಿ ವಾರಂಗಲ್ ಆ್ಯಸಿಡ್ ಪ್ರಕರಣದ ಎನ್‌ಕೌಂಟರ್‌ಗೆ ಹೋಲಿಸಲಾಗುತ್ತಿದೆ. ಇದೇ ಮಾದರಿಯಲ್ಲೇ ಈ ಹಿಂದೆ ಸಜ್ಜನರ್ ಅವರ ತಂಡ ಆ್ಯಸಿಡ್ ದಾಳಿ ಆರೋಪಿಗಳನ್ನು ಕೂಡ ಎನ್‍ಕೌಂಟರ್ ಮಾಡಿತ್ತು.

ಇಂದು ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಸೈದರಾಬಾದ್ ಪೊಲೀಸರು ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರ ನೇತೃತ್ವದಲ್ಲಿ ಪೊಲೀಸರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಲಾಗಿದೆ. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

vishwanath sajjanar e1575603816986

ಈ ಹಿಂದೆ 2008ರ ಡಿಸೆಂಬರ್ 13ರಂದು ಎಂಜಿನಿಯರಿಂಗ್ ವಿದ್ಯಾರ್ಥಿನಿಯರಿಬ್ಬರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಪ್ರಕರಣ ಇಡೀ ಆಂಧ್ರಪ್ರದೇಶವನ್ನು ಬೆಚ್ಚಿಬೀಳಿಸಿತ್ತು. ಆ ಪ್ರಕರಣದ ಮೂವರು ಆರೋಪಿಗಳನ್ನು ಕೂಡ ವಿಶ್ವನಾಥ್ ಸಜ್ಜನರ್ ಅವರು ಎನ್‍ಕೌಂಟರ್ ಮಾಡಿದ್ದರು. ಇದನ್ನೂ ಓದಿ: ಎನ್‍ಕೌಂಟರ್ ‘ಯೋಜಿತ ಕೊಲೆ’, ಅಂಗಾಂಗಳ ಮೇಲೆ ಶೂಟ್ ಮಾಡಿದ್ದು ಯಾಕೆ – 4 ಪ್ರಶ್ನೆ ಮುಂದಿಟ್ಟ ಮಾನವಹಕ್ಕುಗಳ ಸಂಸ್ಥೆ

ವಾರಂಗಲ್‍ನ ಕಾಕತೀಯ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಸ್ವಪ್ನಿಕ ಮತ್ತು ಪ್ರಣೀತಾ ಲವ್ ಪ್ರೊಪೊಸಲ್‍ಗೆ ಒಪ್ಪಿಕೊಳ್ಳದೆ ನಿರಾಕರಿಸಿದ್ದಕ್ಕೆ ಶ್ರೀನಿವಾಸ್(25), ಹರಿಕೃಷ್ಣಾ(24) ಮತ್ತು ಸಂಜತ್(22) ಆ್ಯಸಿಡ್ ದಾಳಿ ನಡೆಸಿದ್ದರು. ಇಬ್ಬರು ವಿದ್ಯಾರ್ಥಿನಿಯರು ತರಗತಿ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದಾಗ ಅವರ ಮೇಲೆ ಆರೋಪಿಗಳು ಆ್ಯಸಿಡ್ ಎರಚಿದ್ದರು.

vishwanath sajjanar

ಈ ಪ್ರಕರಣ ನಡೆದಿದ್ದಾಗ ವಿಶ್ವನಾಥ್ ಸಜ್ಜನರ್ ಅವರು ವಾರಂಗಲ್ ಎಸ್‍ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆಗ ವಿಶ್ವನಾಥ್ ನೇತೃತ್ವದ ತಂಡ ಘಟನೆಯಾದ 48 ಘಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿತ್ತು. ದಿಶಾ ಪ್ರಕರಣ ಆರೋಪಿಗಳನ್ನು ಘಟನಾ ಸ್ಥಳ ಮಹಜರು ಮಾಡಲು ಕರೆದುಕೊಂಡು ಹೋದಂತೆ ಬಂಧನವಾದ ಮರುದಿನ ಸಾಕ್ಷಿಗಳನ್ನು ಸಂಗ್ರಹಿಸಲು ಆ್ಯಸಿಡ್ ದಾಳಿ ಆರೋಪಿಗಳನ್ನು ಘಟನಾ ಸ್ಥಳಕ್ಕೆ ಪೊಲೀಸರು ಕರೆದೊಯ್ದಿದ್ದರು. ಇದನ್ನೂ ಓದಿ: ಎನ್‍ಕೌಂಟರ್ ಮಾಡುವ ಮೊದಲು ನೋಡಲು ಅವಕಾಶ ನೀಡಬೇಕಿತ್ತು: ಆರೋಪಿ ತಂದೆ

ಈ ವೇಳೆ ಓರ್ವ ಆರೋಪಿ ಪೊಲೀಸರ ಮೇಲೆ ಕಚ್ಚಾ ಬಾಂಬ್‍ನಿಂದ ದಾಳಿ ಮಾಡಲು ಮುಂದಾಗಿದ್ದನು. ಆಗ ಆತ್ಮರಕ್ಷಣೆಗಾಗಿ ಸಜ್ಜನರ್ ಅವರು ತಮ್ಮ ಜೊತೆಗಿದ್ದ ಪೊಲೀಸರಿಗೆ ಎನ್‍ಕೌಂಟರ್ ಮಾಡಲು ಆದೇಶಿಸಿದ್ದರು. ಈ ವೇಳೆ ಮೂವರು ಆರೋಪಿಗಳು ಖಾಕಿ ಗುಂಡೇಟಿಗೆ ಬಲಿಯಾಗಿದ್ದರು.

warangal acid attack accused

ವಾರಂಗಲ್ ಎನ್‍ಕೌಂಟರ್ ಬಳಿಕ ಸಜ್ಜನರ್ ಅವರು `ಎನ್‍ಕೌಂಟರ್ ಸ್ಪೆಷಲಿಸ್ಟ್’ ಆಗಿಬಿಟ್ಟರು. ಆ್ಯಸಿಡ್ ದಾಳಿ ನಡೆದ 48 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿ, ಒಂದೆ ದಿನದಲ್ಲಿ ದುಷ್ಟರಿಗೆ ಸಜ್ಜನರ್ ತಕ್ಕ ಪಾಠ ಕಲಿಸಿದ್ದರು. ಅದರಂತೆ ದಿಶಾ ಪ್ರಕರಣ ಸಂಬಂಧ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಿ, ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆ ಸಜ್ಜನರ್ ಅವರ ತಂಡ ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದೆ. ಹೀಗೆ ಈ ಎರಡು ಪ್ರಕರಣದ ಎನ್‍ಕೌಂಟರ್ ಒಂದೇ ಮಾದರಿಯಲ್ಲಿ ನಡೆದಿದೆ.

priyanka reddy case accused

ಈ ಹಿಂದೆ ವಾರಂಗಲ್ ಆ್ಯಸಿಡ್ ಪ್ರಕರಣ ಆರೋಪಿಗಳನ್ನು ಸಜ್ಜನರ್ ಎನ್‍ಕೌಂಟರ್ ಮಾಡಿದ್ದಾಗ ಸಂತ್ರಸ್ತ ವಿದ್ಯಾರ್ಥಿನಿಯರ ಪೋಷಕರು, ಸ್ನೇಹಿತರು ಹಾಗೂ ಸಾರ್ವಜನಿಕರು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ವಿದ್ಯಾರ್ಥಿಗಳು ಇಡೀ ಕಾಲೇಜಿಗೆ ಸಿಹಿ ಹಂಚಿ ಸಂಭ್ರಮಿಸಿದ್ದರು. ಆ ಖುಷಿಯ ವಾತಾವರಣ ಇಂದು ಕೂಡ ಎಲ್ಲೆಡೆ ಮನೆ ಮಾಡಿದೆ. ದಿಶಾ ಪ್ರಕರಣದ ಅತ್ಯಚಾರಿಗಳನ್ನು ಸಜ್ಜನರ್ ಅವರ ತಂಡ ಎನ್‍ಕೌಂಟರ್ ಮಾಡಿರುವುದಕ್ಕೆ ದೇಶದ ಜನರು ಪೊಲೀಸರಿಗೆ ಭೇಷ್ ಎನ್ನುತ್ತಿದ್ದಾರೆ.

TAGGED:2008 Warangal acid attack2008 ವಾರಂಗಲ್ ಆ್ಯಸಿಡ್ ದಾಳಿaccusedDisha caseHyderabadPublic TVvishwanath sajjanarಆರೋಪಿಗಳುದಿಶಾ ಪ್ರಕರಣಪಬ್ಲಿಕ್ ಟಿವಿವಿಶ್ವನಾಥ್ ಸಜ್ಜನರ್ಹೈದರಾಬಾದ್
Share This Article
Facebook Whatsapp Whatsapp Telegram

Cinema news

RAM CHARAN
ರಂಗಸ್ಥಳಂ ಬಳಿಕ ಒಂದಾಗ್ತಿರೋ ಸೂಪರ್ ಹಿಟ್ ಕಾಂಬಿನೇಷನ್..!
Latest South cinema Top Stories
rashmika mandanna 6
ರಶ್ಮಿಕಾ ಮೇಲೆ ಮತ್ತೆ ಕನ್ನಡ ಫ್ಯಾನ್ಸ್ ಗರಂ
Cinema Latest Sandalwood
Yash
ಹೊಸ ವರ್ಷಕ್ಕೆ ಯಶ್‌ ವಿಶ್‌ – ಈ ಬಾರಿ ಫ್ಯಾನ್ಸ್‌ ಜೊತೆ ಬರ್ತ್‌ಡೇ ಆಚರಿಸಿಕೊಳ್ತಾರಾ?
Cinema Latest Sandalwood Top Stories
Sanvi Sudeep 1
ʻನನ್ನ ದೇಹ ಚರ್ಚೆಯ ವಿಷಯವಲ್ಲʼ – ಮಗಳು ಸಾನ್ವಿ ಹೇಳಿಕೆ ಸಮರ್ಥಿಸಿಕೊಂಡ ಸುದೀಪ್
Bengaluru City Cinema Latest Sandalwood Top Stories

You Might Also Like

Banner Fight in front of Janardhana Reddys house congress activist killed in gunfire Ballari
Bellary

ರೆಡ್ಡಿ ಮನೆ ಮುಂದೆ ಬ್ಯಾನರ್‌ ಗಲಾಟೆ – ಗುಂಡೇಟಿಗೆ ಕೈ ಕಾರ್ಯಕರ್ತ ಬಲಿ, ನಿಷೇಧಾಜ್ಞೆ ಜಾರಿ

Public TV
By Public TV
8 hours ago
01
Big Bulletin

ಬಿಗ್‌ ಬುಲೆಟಿನ್‌ 01 January 2026 ಭಾಗ-1

Public TV
By Public TV
9 hours ago
02
Big Bulletin

ಬಿಗ್‌ ಬುಲೆಟಿನ್‌ 01 January 2026 ಭಾಗ-2

Public TV
By Public TV
9 hours ago
03
Big Bulletin

ಬಿಗ್‌ ಬುಲೆಟಿನ್‌ 01 January 2026 ಭಾಗ-3

Public TV
By Public TV
9 hours ago
JanardhanaReddy
Bellary

ನನ್ನ ಹತ್ಯೆಗೆ ನಾರಾ ಭರತ್ ರೆಡ್ಡಿ ಯತ್ನ: ಬುಲೆಟ್‌ ಪ್ರದರ್ಶಿಸಿದ ರೆಡ್ಡಿ

Public TV
By Public TV
9 hours ago
Haveri Milk
Chikkaballapur

ಚಿಕ್ಕಬಳ್ಳಾಪುರ | ಹಾಲು ಉತ್ಪಾದಕ ರೈತರಿಗೆ ನ್ಯೂ ಇಯರ್ ಗಿಫ್ಟ್ – ಲೀಟರ್‌ಗೆ 1 ರೂ. ಹೆಚ್ಚಳ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?