Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪ್ರೀತಿಯಿಂದ ಸುಧಾಕರ್ ಸವಾಲನ್ನು ಸ್ವೀಕರಿಸುತ್ತೇನೆ: ಡಿಕೆಶಿ

Public TV
Last updated: September 7, 2024 7:55 pm
Public TV
Share
3 Min Read
dk shivakumar 1 1
SHARE

ಬೆಂಗಳೂರು: ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ಎರಡು ವರ್ಷಗಳಲ್ಲಿ ಹರಿಸಿದರೆ ಡಿಕೆ ಶಿವಕುಮಾರ್ (D K Shivakumar) ಅವರನ್ನು ಭಗೀರಥ ಎಂದು ಕರೆಯುತ್ತೇನೆ ಎನ್ನುವ ಸಂಸದ ಸುಧಾಕರ್ (Dr K Sudhakar) ಅವರ ಹೇಳಿಕೆಯ ಬಗ್ಗೆ ಕೇಳಿದಾಗ, ಕೆ.ಸುಧಾಕರ್ ಅವರು ಸವಾಲು ಹಾಕಿದ್ದಾರೆ. ಈ ಸವಾಲನ್ನು ನಾನು ಪ್ರೀತಿ, ಗೌರವಗಳಿಂದ ಸ್ವೀಕರಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಇದು ನನ್ನ ಜವಾಬ್ದಾರಿ ಹಾಗೂ ಸಲಹೆ ಎಂದು ಭಾವಿಸುತ್ತೇನೆ. ಎತ್ತಿನಹೊಳೆ ಭೂಮಿ ಪೂಜೆಯಲ್ಲಿ ಅವರೂ ಇದ್ದರು. ಚಿಕ್ಕಬಳ್ಳಾಪುರ ಮತ್ತು ಕೋಲಾರ ಭಾಗಕ್ಕೆ ನೀರು ದೊರೆಯಲಿ ಎಂಬುದು ಅವರ ಆಸೆ. ಅವರ ಆಸೆ ಈಡೇರಿಸುವ ಕೆಲಸ ಮಾಡೋಣ ಎಂದರು. ಇದನ್ನೂ ಓದಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೇಲೆ ಹರಿದ ಕಾರು – 10 ಮೀಟರ್ ಎಳೆದೊಯ್ದು ಚಾಲಕ ಎಸ್ಕೇಪ್!

DK Shivakumar Ettinahole Project 3

ಕೋಲಾರ ಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ವೀರಪ್ಪ ಮೊಯಿಲಿ, ಕೆ.ಎಚ್.ಮುನಿಯಪ್ಪ, ಸುಬ್ಬಾರೆಡ್ಡಿ, ಶಿವಶಂಕರ್ ರೆಡ್ಡಿ, ರಮೇಶ್ ಕುಮಾರ್, ಕೃಷ್ಣಭೈರೇಗೌಡ ಹಾಗೂ ಸುಧಾಕರ್ ಸೇರಿದಂತೆ ಅನೇಕರು ಕುಡಿಯುವ ನೀರು ಹಾಗೂ ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದ್ದಾರೆ. ಕೋಲಾರ ಭಾಗದ ಜನರ ನೀರಿನ ಸಂಕಷ್ಟ ನನಗೆ ಅರಿವಿದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ನಾನು ಸಿಎಂ‌ ಆಗ್ತೀನಿ, ಸೀನಿಯಾರಿಟಿ ಬೇಕಿಲ್ಲ: ಎಂ.ಬಿ ಪಾಟೀಲ್‌

ಖಾಸಗಿ ಕಾರ್ಯಕ್ರಮದ ನಿಮಿತ್ತ ನಾನು ಊರಿನಲ್ಲಿ ಇರುವುದಿಲ್ಲ. ಅನಂತರ ಎತ್ತಿನಹೊಳೆ ಯೋಜನೆಯಲ್ಲಿ ತುಮಕೂರು, ದೊಡ್ಡಬಳ್ಳಾಪುರ ಭಾಗದ ಸಮಸ್ಯೆಗಳ ವಿವರಣೆ ಹಾಗೂ ಅರಣ್ಯ ಭೂಮಿ ಸ್ವಾಧೀನ ತೊಂದರೆಗಳನ್ನು ಮುಖ್ಯಮಂತ್ರಿಗಳ ಬಳಿ ಒಂದು ವಾರಗಳ ನಂತರ ಮಾತನಾಡಿ ಬಗೆಹರಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಮಡಿಕೇರಿಯಲ್ಲಿ ಶ್ರೀಮಂತ ಗಣಪ ಮತ್ತಷ್ಟು ಸಿರಿವಂತ!

ಇನ್ನು ಒಂದು ತಿಂಗಳಲ್ಲಿ ಕೋವಿಡ್ ವರದಿಯನ್ನು ನೀಡುವಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿರುವ ಕಾರಣಕ್ಕೆ ಸುಧಾಕರ್ ಅವರು ನಿಮ್ಮನ್ನು ಪದೇಪದೇ ಹೊಗಳುತ್ತಿದ್ದಾರೆಯೇ ಎಂದು ಕೇಳಿದಾಗ, ನನಗೆ ಕೋವಿಡ್ ವರದಿಯ ಬಗ್ಗೆ ಏನು ಗೊತ್ತಿಲ್ಲ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಾನು ಭಾಗವಹಿಸಿರಲಿಲ್ಲ. ಸಕಲೇಶಪುರದ ಎತ್ತಿನಹೊಳೆಯಲ್ಲಿದ್ದೆ ಎಂದರು. ಇದನ್ನೂ ಓದಿ: 500 ಮೀಟರ್ ಓಡಿ ರೈಲ್ವೆ ದುರಂತ ತಪ್ಪಿಸಿದ ನಿರ್ವಾಹಕ

ಸುಧಾಕರ್ ಈಗ ಎಂಪಿ ಅಲ್ಲವೇ?
ಮಾತಿನ ಮಧ್ಯೆ ಡಿಸಿಎಂ ಅವರು, ಸುಧಾಕರ್ ಈಗ ಎಂಪಿ ಅಲ್ಲವೇ? ಎಂದು ಮಾಧ್ಯಮದವರ ಬಳಿ ಪ್ರಶ್ನಿಸಿದರು. ನಮ್ಮಲ್ಲಿ ಇಬ್ಬರು ಸುಧಾಕರ್ ಇದ್ದಾರೆ. ಇವರೂ ಸೇರಿ ಮೂರು ಜನ ಆಗುತ್ತಾರೆ. ನಮ್ಮವರು ಇಬ್ಬರೂ ಮಂತ್ರಿಗಳು. ಇವರು ಸಂಸದರು ಎಂದಾಗ, ಮಾಧ್ಯಮದವರು ‘ಮಾಜಿ ಸಚಿವರು ಆಗಿದ್ದರು’ ಎಂದು ಹೇಳಿದಾಗ ಮಾಜಿ ಸಚಿವ ಸುಧಾಕರ್ ಎಂದರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ರೈಲು – ತಪ್ಪಿದ ಭಾರೀ ಅನಾಹುತ

ಗೌರಿ ಹಬ್ಬದ ದಿನ ಗಂಗೆಯನ್ನು ಪೂಜೆ ಮಾಡಿ ಸಂಭ್ರಮ ಪಟ್ಟಿದ್ದೇವೆ. ಇದನ್ನು ಒಂದು ಒಂದಷ್ಟು ಜನ ನೋಡಿ ಸಂಭ್ರಮಪಟ್ಟಿದ್ದಾರೆ ಟೀಕೆ ಮಾಡಿದ್ದಾರೆ. ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ. ಬರಗಾಲದ ಛಾಯೆ ದೂರವಾಗಿ, ಉತ್ತಮ ಮಳೆಬಿದ್ದು ಜಲಾಶಯಗಳು ತುಂಬಿವೆ. ಬಯಲು ಸೀಮೆಯಲ್ಲಿ ಒಂದಿಷ್ಟು ಕಡೆ ಮಳೆ ಕಡಿಮೆಯಾಗಿದೆ. ಮಂಡ್ಯ ಬೆಂಗಳೂರು ಗ್ರಾಮಾಂತರ ತುಮಕೂರು ಈ ಭಾಗದಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಬಿಜೆಪಿ ಆಡಳಿತಾವಧಿಯಲ್ಲಿ ಎತ್ತಿನಹೊಳೆ ಯೋಜನೆ ಪ್ರಗತಿ ಕಂಡಿರಲಿಲ್ಲ. ಇದಕ್ಕೆ ನಾನಾ ಕಾರಣಗಳು ಇರಬಹುದು ಎಂದು ಹೇಳಿದರು. ಇದನ್ನೂ ಓದಿ: ರಷ್ಯಾ ವಿರುದ್ಧ ಉಕ್ರೇನ್‌ ಪ್ರತೀಕಾರದ ದಾಳಿ – ಬೆಂಕಿ ಉಂಡೆ ಉಗುಳುವ ʻಡ್ರ್ಯಾಗನ್‌ ಡ್ರೋನ್‌ʼ ಅಸ್ತ್ರ ಪ್ರಯೋಗ

TAGGED:bengaluruDK Shivakumardr. k sudhakarಕೆ.ಸುಧಾಕರ್ಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

You Might Also Like

Akash Deep
Cricket

536 ರನ್‌ಗಳ ಭರ್ಜರಿ ಮುನ್ನಡೆ – ಭಾರತದ ಬಿಗಿ ಹಿಡಿತದಲ್ಲಿ ಆಂಗ್ಲರ ಒದ್ದಾಟ

Public TV
By Public TV
5 hours ago
Neeraj Chopra 1
Bengaluru City

ಬೆಂಗಳೂರು | `ಎನ್‌ಸಿ ಕ್ಲಾಸಿಕ್‌’ನಲ್ಲಿ ನೀರಜ್‌ ಚೋಪ್ರಾಗೆ ಪ್ರಥಮ ಸ್ಥಾನ

Public TV
By Public TV
5 hours ago
Shivamogga
Bengaluru City

ಶಿವಮೊಗ್ಗ | ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ – ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ ಆರೋಪ

Public TV
By Public TV
5 hours ago
Ramesh Jarkiholi
Belgaum

ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ – ರಮೇಶ್‌ ಜಾರಕಿಹೊಳಿ ಪುತ್ರನ ವಿರುದ್ಧ ಎಫ್‌ಐಆರ್‌

Public TV
By Public TV
6 hours ago
Anekal Marriage
Bengaluru Rural

ಬೆಂಗಳೂರು | ಅಪ್ರಾಪ್ತೆಯನ್ನು ಕರೆದೊಯ್ದು ಮದುವೆಗೆ ಯತ್ನ – ಆರೋಪಿ ಅರೆಸ್ಟ್

Public TV
By Public TV
6 hours ago
Eshwar Khandre 2
Districts

ರಾಜ್ಯದಾದ್ಯಂತ 3 ಕೋಟಿ ಸಸಿ ನೆಡಲಾಗುವುದು: ಈಶ್ವರ್‌ ಖಂಡ್ರೆ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?