ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲೇ ಆಗ್ತಿಲ್ಲ ಅಂತ ಒಪ್ಪಿಕೊಳ್ತೇನೆ: ಈಶ್ವರಪ್ಪ

Public TV
2 Min Read
Eshwarappa 3

-ಹಿಂದೂಗಳು ಶಾಂತಿ ಪ್ರಿಯರು ಅವರನ್ನು ಪರೀಕ್ಷಿಸಬೇಡಿ ಮಾಡಲು ಹೋಗಬೇಡಿ
-ಕೊಲೆಗೆ ಕೊಲೆ ಎಂಬುದು ನಮ್ಮ ಉದ್ದೇಶ ಅಲ್ಲ

ಶಿವಮೊಗ್ಗ: ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿಯೇ ಮಾಡಲು ಆಗುತ್ತಿಲ್ಲ ಎಂಬುವುದನ್ನು ನಾನು ಒಪ್ಪಿಕೊಳ್ಳುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

PRAVEEN KUMAR NETTAR MURDER

ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಹತ್ಯೆ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ತಪ್ಪಿಲ್ಲದ ಹಿಂದುತ್ವವಾದಿಗಳನ್ನು ಕೆಲವು ಮುಸಲ್ಮಾನ್ ಗೂಂಡಾಗಳು ಕಗ್ಗೋಲೆ ಮಾಡುವುದು, ಹಲ್ಲೆ ಮಾಡುವುದು ನಡೆಯುತ್ತಿದೆ. ಇದನ್ನು ನಾನು ಉಗ್ರವಾಗಿ ಖಂಡನೆ ಮಾಡುತ್ತೇನೆ. ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯನ್ನು ಎಲ್ಲಾ ರಾಜಕೀಯ ಪಕ್ಷಗಳು ಖಂಡನೆ ಮಾಡಬೇಕು. ಯಾರೂ ಇವರಿಗೆ ಬೆಂಬಲ ಕೊಡಬಾರದು. ಕೊಲೆಗಡುಕರನ್ನು ಬಂಧಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಸರ್ಕಾರ ಬಲಹೀನ, ದೌರ್ಬಲ್ಯ ಅಲ್ಲ. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಶಾಂತಿ ಕಾಪಾಡಲು ಹಿಂದೂಗಳು ಸಂಯಮದಿಂದ ನಡೆದುಕೊಂಡು ಹೋಗುತ್ತಿದ್ದಾರೆ. ಎಷ್ಟು ದಿನದಿಂದ ಶಾಂತಿಯಿಂದ ಇರಲು ಸಾಧ್ಯ. ಸಿಎಂ ಜೊತೆ ಮಾತನಾಡುತ್ತೇನೆ. ಕೊಲೆಗಟುಕರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಅಂತಾ ಮನವಿ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆಯನ್ನು ಸಿಎಂ ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ: ರೇಣುಕಾಚಾರ್ಯ

praveen nettar

ಹಿಂದೂಗಳು ಶಾಂತಿ ಪ್ರಿಯರು ಅದನ್ನು ಪರೀಕ್ಷೆ ಮಾಡಲು ಹೋಗಬೇಡಿ. ಕೊಲೆಗೆ ಕೊಲೆ ಎಂಬುದು ನಮ್ಮ ಉದ್ದೇಶ ಅಲ್ಲ. ಆ ರೀತಿಯಾದರೆ ರಾಜ್ಯದಲ್ಲಿ ರಕ್ತಪಾತವೇ ಆಗುತ್ತದೆ. ಅವರ ಮನಸ್ಥಿತಿ ಬದಲಾವಣೆ ಮಾಡಿಕೊಳ್ಳದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂದೂಗಳ ಕೊಲೆಯಾದಾಗ ಹಿಂದೂಗಳನ್ನೇ ಜೈಲಿಗೆ ಕಳುಹಿಸುತ್ತಿದ್ದರು. ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿ ಆಗುತ್ತಿಲ್ಲ ಅಂತ ನಾನೇ ಒಪ್ಪಿಕೊಳ್ಳುತ್ತಿದ್ದೇನೆ. ನಮ್ಮ ಕಾರ್ಯಕರ್ತರನ್ನು ಹುಡುಕಿ, ಹುಡುಕಿ ಕೊಲೆ ಮಾಡುತ್ತಿದ್ದಾರೆ. ಆದರೆ ರಾಜೀನಾಮೆ ಅದಕ್ಕೆ ಪರಿಹಾರವಲ್ಲ. ಕೊಲೆಗಡುಕರಿಗೆ ಕೊಡುತ್ತಿರುವ ಶಿಕ್ಷೆ ಸಾಕಾಗುತ್ತಿಲ್ಲ. ಕಠಿಣ ಶಿಕ್ಷೆ ಕೊಡುವ ಬಗ್ಗೆ ಕ್ರಮ ವಹಿಸಬೇಕಿದೆ. ಹಿಂದುತ್ವ ಸಿದ್ದಾಂತವನ್ನು ದುರ್ಬಲ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಹಿಂದುತ್ವವಾದಿಗಳು ಎದುರುವ ಪ್ರಶ್ನೆಯೇ ಇಲ್ಲ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ – ಕರ್ನಾಟಕ ಕಾಂಗ್ರೆಸ್ SDPI, PFI ಗೆ ಪ್ರೋತ್ಸಾಹ ನೀಡುತ್ತಿದೆ: ಜೋಶಿ

ಇದೇ ವೇಳೆ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಸರ್ಕಾರ ಎಂಬ ಕಾಂಗ್ರೆಸ್ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇಡೀ ದೇಶದಲ್ಲಿ ನ್ಯಾಷನಲ್ ಹೆರಾಲ್ಡ್‍ನಲ್ಲಿ ಆಗಿರುವ ಭ್ರಷ್ಟಾಚಾರ ಮತ್ತೊಂದಿಲ್ಲ. ಎರಡು ಸಾವಿರ ಕೋಟಿಗೂ ಅಧಿಕ ಲೂಟಿ ಆಗಿದೆ. ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ವಿವರಣೆ ಕೊಡಿ ಅಂದರೆನೇ ಗಲಾಟೆ ಮಾಡುತ್ತಿದ್ದಾರೆ. ಡಿಕೆಶಿ ಮನೆಯಲ್ಲಿ ಇಡಿ ದಾಳಿಯಾದಾಗ ಕೋಟಿಗಟ್ಟಲೆ ಹಣ ಪತ್ತೆಯಾಗಿ ತಿಹಾರ್ ಜೈಲಿಗೆ ಹೋಗಿ ಬಂದರು. ಮತ್ತೆ ಇನ್ನೇರಡು ಮೂರು ದಿನದಲ್ಲಿ ವಿಚಾರಣೆಗೆ ಹೋಗುತ್ತಿದ್ದಾರೆ. ಆದರೆ ಬಿಜೆಪಿಯನ್ನು ಭ್ರಷ್ಟಾಚಾರ ಅಂತಾ ಕರೆಯುತ್ತಿದ್ದಾರೆ. ನೀವು ಭ್ರಷ್ಟರು ನಿಮಗೆ ನಮ್ಮನ್ನು ಭ್ರಷ್ಟರು ಅಂತ ಕರೆಯಲು ನೈತಿಕತೆ ಇಲ್ಲ ಎಂದು ಕಿಡಿಕಾರಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *