ಶೆಟ್ಟರ್ ಹೇಳಿಕೆಯನ್ನು ಒಪ್ಪುತ್ತೇನೆ ಎಂದ ರಾಘವೇಂದ್ರ

Public TV
2 Min Read
raghavendra

ಬೆಂಗಳೂರು: ಉಪ ಮುಖ್ಯಮಂತ್ರಿ ಹುದ್ದೆ ಸಾಂವಿಧಾನಿಕ ಹುದ್ದೆಯಲ್ಲ ಎನ್ನುವುದು ನಿಜ. ಒಂದು ಗೌರವಯುತ ಹುದ್ದೆ ಎಂಬ ಜಗದೀಶ್ ಶಟ್ಟರ್ ಅವರ ಹೇಳಿಕೆಯನ್ನು ನಾನು ಒಪ್ಪುತ್ತೇನೆ ಎಂದು ಬಿ.ವೈ.ರಾಘವೇಂದ್ರ ಅವರು ಶೆಟ್ಟರ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಎಲ್ಲೂ ಉಪಮುಖ್ಯಮಂತ್ರಿ ಹುದ್ದೆ ಸಾಂವಿಧಾನಿಕ ಬದ್ಧ ಸ್ಥಾನವಲ್ಲ. ಮೂರು ಡಿಸಿಎಂ ಮಾಡಿರುವುದು ಇದೇ ಮೊದಲಲ್ಲ. ಹಿಂದೆ ಉತ್ತರ ಪ್ರದೇಶ ಹಾಗೂ ಇತರೇ ರಾಜ್ಯಗಳಲ್ಲೂ ಮೂರು ಡಿಸಿಎಂ ಮಾಡಿದ್ದಾರೆ. ಹೀಗಾಗಿ ಇದರಲ್ಲಿ ವಿಶೇಷವೇನೂ ಇಲ್ಲ. ಮುಂದಿನ ಉತ್ತರಾಧಿಕಾರಿಗಳು ಎಂಬ ದೃಷ್ಟಿಯಿಂದ ಈ ರೀತಿ ಮಾಡಿದ್ದಲ್ಲ. ಆಯಾ ಸಂದರ್ಭಕ್ಕೆ ತಕ್ಕಂತೆ ಹೈ ಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

Govind Karjol Ashwath Narayan Laxman Savadi

ಸಂಘಟನೆಯ ದೂರದೃಷ್ಟಿಯಿಂದ ಈ ರೀತಿ ತೀರ್ಮಾನ ಕೈಗೊಂಡಿದ್ದಾರೆ. ಲಕ್ಷ್ಮಣ ಸವದಿಯವರನ್ನು ಡಿಸಿಎಂ ಮಾಡಿರುವ ಕುರಿತು ಪಕ್ಷದಲ್ಲಿ ಯಾರಿಗೂ ಅಸಮಾಧಾನವಿಲ್ಲ. ಮಾಧ್ಯಮಗಳಲ್ಲಿ ಈ ಕುರಿತು ಬಂದಿರುವುದು ಬಿಟ್ಟರೆ, ಪಕ್ಷದ ನಾಯಕರಲ್ಲಿ ಯಾವುದೇ ಅಸಮಾಧಾನವಿಲ್ಲ. ಇದೀಗ ಸಿಎಂ ಜೊತೆಯಲ್ಲೇ ಸಿ.ಟಿ.ರವಿ ಅವರು ಚಿಕ್ಕಮಗಳೂರು ಪ್ರವಾಸಕ್ಕೆ ತೆರಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

ನಿಮ್ಮ ಮಕ್ಕಳನ್ನು ಹಿಡಿತದಲ್ಲಿಟ್ಟುಕೊಳ್ಳಿ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಕುಮಾರಸ್ವಾಮಿ ಅವರ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಅಂತಹ ಸಂಕಷ್ಟ ಎದುರಾದರೆ ಅವರ ಮಗನಿಂದಲೇ ಬರಬಹುದು. ಈ ಕುರಿತು ಅವರಿಗೆ ಕನಸು ಬಿದ್ದಿರಬೇಕು ಇಲ್ಲವೇ ಅವರ ಅನುಭವ ಆ ರೀತಿ ಇರಬಹುದು ಹೀಗಾಗಿ ನಮ್ಮ ಮೇಲೆ ಆರೋಪ ಮಾಡಿದ್ದಾರೆ. ನಾನು ಸಂಸದನಾಗಿ ಶಿವಮೊಗ್ಗ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಅನಾವಶ್ಯಕವಾಗಿ ಮೂಗು ತೂರಿಸುವ ಕೆಲಸವನ್ನು ಮಾಡಿಲ್ಲ, ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿಲ್ಲ. ಇತರೆ ವಿಷಯಗಳ ಕುರಿತು ತಲೆ ಕೆಡಿಸಿಕೊಂಡಿಲ್ಲ. ಮುಖ್ಯಮಂತ್ರಿಗಳು ಅಧಿಕಾರಿಗಳೊಣಂದಿಗೆ ಚರ್ಚಿಸಿ ವರ್ಗಾವಣೆ ತೀರ್ಮಾನ ಕೈಗೊಳ್ಳುತ್ತಾರೆ. ನಮ್ಮೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

HDK MND KRPETE a

ಗೂಳಿಹಟ್ಟಿ ಶೇಖರ್ ಅವರೂ ಯಾಕೆ ಈ ರೀತಿ ಮಾತನಾಡಿದ್ದಾರೋ ಗೊತ್ತಿಲ್ಲ. ಅವರಿಗೂ ಸಹ ಈ ಕುರಿತು ತಪ್ಪು ಕಲ್ಪನೆ ಮೂಡಿರಬಹುದು. ನಾನೇ ಖುದ್ದು ಕರೆ ಮಾಡಿ ಅವರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

ನಮ್ಮ ಸಂಘಟನೆಯಲ್ಲಿ ವಯಸ್ಸು ಮೀರಿ ಜವಾಬ್ದಾರಿಗೆ ಗೌರವ ಕೊಟ್ಟುಕೊಂಡು ಬಂದಿದ್ದೇವೆ. ಸಂತೋಷ್ ಅವರು ಸಂಘಟನಾ ಕಾರ್ಯದರ್ಶಿಯಾಗಿದ್ದು ಪಕ್ಷದ ಸಂಘಟನೆ ದೃಷ್ಟಿಯಿಂದ ಇಡೀ ದೇಶ ಹಾಗೂ ಪಕ್ಷ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿದೆ. ಯಡಿಯೂರಪ್ಪನವರು ವಯಸ್ಸಿನಲ್ಲಿ ಹಿರಿಯರಿರಬಹುದು. ಆದರೆ, ಸಂಘಟನೆ ದೃಷ್ಟಿಯಿಂದ ಉನ್ನತ ಸ್ಥಾನದಲ್ಲಿರುವವರ ಮಾರ್ಗದರ್ಶನದಲ್ಲಿ ಕೆಲಸ ಮಾಡುವುದು ನಮ್ಮ ಕರ್ತವ್ಯ. ಒಟ್ಟಾಗಿ ನಾವು ತೆಗೆದುಕೊಂಡು ಹೋಗುತ್ತೇವೆ ಎಂದು ಸ್ಪಷ್ಟಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *