ಸಣ್ಣ ನೀರಾವರಿ ಸಚಿವನಾಗಿರುವುದು ಸಂತಸ ತಂದಿದೆ: ಪುಟ್ಟರಾಜು

Public TV
1 Min Read
puttaraju 1

ಮಂಡ್ಯ: ಸಣ್ಣ ನೀರಾವರಿ ಸಚಿವರಾಗಿ ಅಧಿಕಾರ ಸ್ವೀಕರಿಸಿರುವುದು ನನಗೆ ತುಂಬಾ ಸಂತಸ ತಂದಿದೆ ಎಂದು ಸಿಎಸ್ ಪುಟ್ಟರಾಜು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ನನಗೆ ಬೆಂಬಲ ನೀಡಿದ ಮೇಲುಕೋಟೆ ಕ್ಷೇತ್ರದ ಜನತೆ, ಮಂಡ್ಯ ಜನತೆ, ಪಕ್ಷದ ಕಾರ್ಯಕರ್ತರಿಗೆ, ಶ್ರೀ ಎಚ್ ಡಿ ದೇವೇಗೌಡರಿಗೆ ಹಾಗೂ ಶ್ರೀ ಎಚ್ ಡಿ ಕುಮಾರಸ್ವಾಮಿಯವರಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ನಾನು ಮಂತ್ರಿ ಮಾಡಿ ಎಂದು ಬೇಡಿಕೆ ಇಟ್ಟಿರಲಿಲ್ಲ, ಅಂತಹದರಲ್ಲೂ ನಮ್ಮ ನಾಯಕರು ನನ್ನ ಮೇಲೆ ನಂಬಿಕೆ ಇಟ್ಟು ಜವಾಬ್ದಾರಿ ಕೊಟ್ಟಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ದುಡಿಯುದೊಂದೇ ನನ್ನ ಗುರಿ ಎಂದು ತಿಳಿಸಿದ್ದಾರೆ.

ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ರಾಜ್ಯವನ್ನು ಅಭಿವೃದ್ಧಿ ಕಡೆಗೆ ಸಾಗಿಸಲು ದುಡಿಯುತ್ತೇನೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ನನ್ನ ರಾಜಕೀಯ ಆದಿಯೂ ಇಲ್ಲೇ ಅಂತ್ಯವೂ ಇಲ್ಲೇ ಎಂದು ಬರೆದುಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *