ಗದಗ: ಸಚಿವ ಸ್ಥಾನ ಒತ್ತಾಯ ಪೂರ್ವಕವಾಗಿ ಪಡೆದುಕೊಳ್ಳುವುದಲ್ಲ. ಮಂತ್ರಿಗಿರಿಗಿಂತ ಎತ್ತರ ಸ್ಥಾನದಲ್ಲಿ ಜನ ನನ್ನನ್ನು ನೋಡುತ್ತಾರೆ ಅಂತ ಕಾಂಗ್ರೆಸ್ ಮಖಂಡ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
ರಾಜೀನಾಮೆ, ಪ್ರತಿಭಟನೆ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುವುದು ಸೂಕ್ತವಲ್ಲ. ಪಕ್ಷ ಹಾಗೂ ಪ್ರಜಾಪ್ರಭುತ್ವದ ಹಿತ ದೃಷ್ಠಿಯಿಂದ ಸಚಿವ ಸ್ಥಾನಕ್ಕೆ ಪ್ರತಿಭಟನೆ ಒಳ್ಳೆಯದಲ್ಲ. ನನ್ನ ಮೇಲಿನ ಅಭಿಮಾನದಿಂದ ರಾಜೀನಾಮೆ ಮೂಲಕ ಪ್ರತಿಭಟನೆ ವ್ಯಕ್ತವಾಗಿದೆ. ಹೀಗಾಗಿ ರಾಜೀನಾಮೆಯನ್ನು ಹಿಂಪಡೆದುಕೊಳ್ಳಿ ಅಂತಾ ಬೆಂಬಲಿಗರಿಗೆ ಕೈ ಮುಗಿದು ಹೆಚ್.ಕೆ.ಪಾಟೀಲ್ ಮನವಿ ಮಾಡಿಕೊಂಡರು.
ಸಚಿವ ಸ್ಥಾನ ಸಿಗದಿದ್ರು ಸೇವಾ ಅವಕಾಶ ಸಿಕ್ಕ ಸಮಾಧಾನ ನನ್ನದು. ನನಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ವರಿಷ್ಠರೆ ಉತ್ತರಿಸಬೇಕು. ಇನ್ನು ಬಾಕಿ ಉಳಿದ 6 ಸ್ಥಾನದಲ್ಲಿ ಸಚಿವ ಸ್ಥಾನ ಸಿಗಬಹುದೆಂಬ ನಿರೀಕ್ಷೆಯಲ್ಲಿ ನಾನಿಲ್ಲ. ನಾನೂ ಸಚಿವ ಸ್ಥಾನದ ನಿರೀಕ್ಷೆಯಲ್ಲೂ ಇಲ್ಲ ಅಂತಾ ಸ್ಪಷ್ಟಪಡಿಸಿದ್ರು.