ಚಾಮುಂಡೇಶ್ವರಿಯಲ್ಲಿ ನಿಲ್ಲಲ್ಲ ಎಂದು ಹೇಳಿ ಚುನಾವಣೆಗೆ ಸ್ಪರ್ಧಿಸುವ ಸುಳಿವು ಕೊಟ್ಟ ಸಿದ್ದರಾಮಯ್ಯ

Public TV
2 Min Read
siddaraaoaa

ಮೈಸೂರು: ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಚುನಾವಣೆಗೆ ನಿಲ್ಲಲ್ಲ. ಬೇರೆ ಕಡೆ ನಿಲ್ಲೋದನ್ನ ಆಮೇಲೆ ನೋಡೋಣ. ಇನ್ನೂ ಚುನಾವಣೆಗೆ ನಾಲ್ಕು ವರ್ಷ ಇದೆ ಎಂದು ಹೇಳುವ ಮೂಲಕ ಮತ್ತೆ ಚುನಾವಣೆಗೆ ನಿಲ್ಲುವ ಸುಳಿವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ.

ಭಾನುವಾರ ಇಲವಾಲದ ಸಮಾವೇಶದಲ್ಲಿ ನಾನು ಇನ್ನೂ ಚುನಾವಣೆಗೆ ನಿಲ್ಲುವುದಿಲ್ಲ ಎಂಬ ಹೇಳಿಕೆಗೆ ಸ್ಪಷ್ಟಪಡಿಸಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ಋಣವನ್ನು ಸಾಕಷ್ಟು ತೀರಿಸಿದ್ದೇನೆ. ಹೀಗಾಗಿ ನಾನು ಮತ್ತೆ ಚಾಮುಂಡೇಶ್ವರಿಯಲ್ಲಿ ನಿಲ್ಲಲ್ಲ ಎಂದು ಹೇಳಿದ್ದೆ ಅಂದ ಅವರು, ಮತ್ತೆ ಬೇರೆ ಕ್ಷೇತ್ರದಲ್ಲಿ ಚುನಾವಣೆ ನಿಲ್ಲುವ ಸೂಚನೆಯನ್ನು ನೀಡಿದರು.

mys siddaramaiah 2

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸೋತ್ರೆ, ಸರ್ಕಾರ ಉಳಿಯುತ್ತಾ ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿ ಯೂಟರ್ನ್ ಹೊಡೆದ ಸಿದ್ದರಾಮಯ್ಯ, ಮೈತ್ರಿ ಪಕ್ಷ ಸೋತ್ರೆ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸಬಹುದು ಎಂದು ಹೇಳಿದ್ದೇನೆ. ಅದನ್ನು ನೀವು ಸರಿಯಾಗಿ ಅರ್ಥೈಸಿಕೊಂಡಿಲ್ಲ. ಬಿಜೆಪಿ ಸದಾ ಮೈತ್ರಿ ಸರ್ಕಾರ ಅಸ್ಥಿರಗೊಳಿಸೋ ಪ್ರಯತ್ನ ಮಾಡುತ್ತಿದೆ. ಯಡಿಯೂರಪ್ಪ ಮೊದಲಿಂದಲೂ ಹೇಳಿಕೊಂಡು ಬರುತ್ತಿದ್ದಾನೆ. ಸರ್ಕಾರ ಬಿಳಿಸೋಕೆ ಆಗಿದ್ಯಾ ಎಂದು ಪ್ರಶ್ನಿಸಿದ್ರು. ಯಡಿಯೂರಪ್ಪ ಒಬ್ಬ ಲೀಡರೇನ್ರಿ. ಬಿಜೆಪಿ ಒಂದು ಪಾರ್ಟಿನಾ, ಒಂದು ತತ್ವ ಸಿದ್ಧಾಂತ ಇಲ್ಲ. ಅವ್ರಿಗೆ ನೈತಿಕತೆ ಇದ್ಯಾ ಎಂದು ಸಿದ್ದರಾಮಯ್ಯ ಕೆಂಡಾಮಂಡಲರಾದ್ರು. ಇದನ್ನೂ ಓದಿ: ಮೂಡ್ ಅಂದ್ರೆ ಬೇರೆ ಕಣಪ್ಪ – ಮೂಡ್ ಬರೋದು ಬೇರೆ ಬೇರೆ ಕೆಲಸಗಳಿಗೆ: ಸಿದ್ದು ಹಾಸ್ಯದ ಹೇಳಿಕೆ

ನಾನು, ಜಿ.ಟಿ.ದೇವೇಗೌಡ ಕ್ಷೇತ್ರ ಪ್ರವಾಸ ಮಾಡಿದ ಮೇಲೆ ವಾತಾವರಣ ಬದಲಾಗಿದೆ. ಜನ ಮೈತ್ರಿ ಅಭ್ಯರ್ಥಿ ಕಡೆ ಒಲವು ತೋರುತಿದ್ದಾರೆ. ನಮ್ಮ ಮೈತ್ರಿ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಅವರು, ದೇವೇಗೌಡರ ರಾಜಕೀಯ ಸನ್ಯಾಸತ್ವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ರು. ಮೋದಿ, ದೇವೇಗೌಡರ ಬಗ್ಗೆ ಹೇಳಿದ್ರೆ ನನ್ನನ್ನ ಯಾಕೆ ಕೇಳ್ತೀರಾ. ಹೋಗಿ ದೇವೇಗೌಡರನ್ನೇ ಕೇಳಿ ಎಂದು ಸಿಡಿಮಿಡಿಗೊಂಡರು.

modi hd devegowda

ಇದೇ ವೇಳೆ ಪರ್ಸೆಂಟೇಜ್ ಸರ್ಕಾರ ಎಂಬ ಮೋದಿ ಹೇಳಿಕೆಗೆ ಗರಂ ಆದ ಮಾಜಿ ಸಿಎಂ, ಒಬ್ಬ ಪ್ರಧಾನಿಯಾಗಿ ಇಂತಹ ಹೇಳಿಕೆಗಳನ್ನ ಕೊಡಬಾರದು. ಇದೊಂದು ಬೇಸ್‍ಲೆಸ್ ಆರೋಪವಾಗಿದೆ. ಮೋದಿ ಸರ್ಕಾರ ಶೇ.100 ರಷ್ಟು ಭ್ರಷ್ಟ ಸರ್ಕಾರ ಎಂದು ಆರೋಪ ಮಾಡುತ್ತೇನೆ. ಅದನ್ನು ನೀವು ಹಾಕ್ತೀರಾ ಎಂದು ಪ್ರಶ್ನಿಸಿದ್ರು.

ಒಬ್ಬ ಪ್ರಧಾನಿ ಈ ಮಟ್ಟಕ್ಕೆ ಇಳಿದು ಮಾತನಾಡಬಾರು. ಅವರ ಬಳಿ ಇಂಟೆಲಿಜೆನ್ಸ್ ಸೇರಿದಂತೆ ಹಲವು ಇಲಾಖೆಗಳಿವೆ. ಇಂತಹ ಆರೋಪ ಮಾಡುವ ಮುನ್ನ ಯೋಚನೆ ಮಾಡಬೇಕು. ಕಳೆದ ಐದು ವರ್ಷದಲ್ಲಿ ಎಮೋಷನಲ್ ವಿಚಾರ ಬಿಟ್ಟು ಬೇರೆ ಏನೂ ಮಾತಾಡಿಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಯನಾಡ್ ನಲ್ಲಿ ನಿಲ್ಲೋದಕ್ಕೆ, ಅಲ್ಲಿ ಮೈನಾರಿಟಿ ಇರುವುದರಿಂದ ಅಲ್ಲಿ ನಿಲ್ಲುತ್ತಿದ್ದಾರೆ ಎಂದು ಕಮೆಂಟ್ ಮಾಡ್ತಾರೆ. ಇದು ಕಮ್ಯೂನಲ್ ವಯಲೆನ್ಸ್ ಆಗಲ್ವ ಎಂದು ಕಿಡಿಕಾರಿದ್ರು.

ಐಟಿ ಕಚೇರಿ ಮುಂದೆ ಪ್ರತಿಭಟನೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನನಗೂ ಐಟಿಯಿಂದ ನೋಟಿಸ್ ಬಂದಿದೆ. ಈಗಾಗಲೇ ಉತ್ತರ ಕೊಟ್ಟಿದ್ದೇನೆ. ನಾನು ಚುನಾವಣೆಯಲ್ಲಿ ಬ್ಯುಸಿ ಇದ್ದೇನೆ. ನಾನು ಉತ್ತರ ಕೊಡಲು 15 ದಿನ ಬೇಕು ಎಂದು ಪ್ರತಿಕ್ರಿಯಿಸಿದ್ದೇನೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *