ಹೋಗಲ್ಲ, ಹೋಗಲ್ಲ, ನಾನು ಹೋಗಲ್ಲ- ರಮೇಶ್ ಜಾರಕಿಹೊಳಿ

Public TV
1 Min Read
RAMESH JARAKIHOLI 1

ಬೆಳಗಾವಿ: ಜಲಸಂಪನ್ಮೂಲ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಆಯೋಜಿಸಿರುವ ಔತಣ ಕೂಟಕ್ಕೆ ನಾನು ಹೋಗಲ್ಲ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಮೂರು ಸಲ ಪುನರುಚ್ಚರಿಸಿದ್ದಾರೆ.

ಬೆಳಗಾವಿ ಅಧಿವೇಶಕ್ಕೆ ಬರುವ ಎಲ್ಲ ಶಾಸಕರಿಗೂ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸಹೋದರರು ಪ್ರತಿವರ್ಷ ಔತಣ ಕೂಟ ಆಯೋಜಿಸುತ್ತಿದ್ದರು. ಆದರೆ ಈ ಬಾರಿ ಜಾರಕಿಹೊಳಿ ಸಹೋದರರು ನಿರಾಸಕ್ತಿ ತೋರಿದ್ದರಿಂದ ಸಚಿವ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

DK shivakumar and ramesh jarakiholi

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಮೇಶ್ ಚಾರಕಿಹೊಳಿ ಅವರು, ನಾನು ಯಾವುದೇ ಕಾರಣಕ್ಕೂ ಔತಣ ಕೂಟದಲ್ಲಿ ಭಾಗವಹಿಸುವುದಿಲ್ಲ ಅಂತ ಹೇಳಿ ಮತ್ತೊಮ್ಮೆ ಮುನಿಸು ಹೊರಹಾಕಿದ್ದಾರೆ. ನನಗೆ ಗಂಟಲು ನೋವಿತ್ತು ಹೀಗಾಗಿ ಇಂದು ನಡೆದ ಸಿಎಲ್‍ಪಿ ಸಭೆಗೆ ಬರಲಿಲ್ಲ ಎಂದರು.

ಈ ಮೂಲಕ ರಮೇಶ್ ಜಾರಕಿಹೊಳಿ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ವೈಮನಸ್ಸು ಮುಂದುವರಿದಿದೆ. ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರದಿಂದ ಆರಂಭವಾದ ಒಡಕು ಈಗಲೂ ಎದ್ದು ಕಾಣುತ್ತಿದೆ ಎನ್ನಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *