ಚಿಕ್ಕೋಡಿ: ಮುಖ್ಯಮಂತ್ರಿ ಆಯ್ಕೆ ಚುನಾವಣೆ ಮುಗಿದ ಮೇಲೆ ನೋಡೋಣ, ಸದ್ಯಕ್ಕೆ ನಾನು ಸಿಎಂ ರೇಸ್ನಲ್ಲಿ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಹಾರೂಗೇರಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸೈಕಲ್ ಜಾಥಾ ಸಮಾರೋಪ ಸಮಾವೇಶದಲ್ಲಿ ಸಿದ್ದರಾಮಯ್ಯ ಸಿಎಂ ಆಗುವ ಇಂಗಿತ ವಿಚಾರವಾಗಿ ಮಾತನಾಡಿದ ಅವರು, ಚುನಾವಣೆ ಆದ ಮೇಲೆ ಮುಖ್ಯಮಂತ್ರಿಗಳ ಆಯ್ಕೆ ಹಾಗೂ ನಾನು ಸಿಎಂ ರೇಸ್ನಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿ ಸಾವಿಗೆ ತೀವ್ರಗೊಂಡ ಪ್ರತಿಭಟನೆ – ಸ್ಕೂಲ್ ಬಸ್, ಪೊಲೀಸ್ ವಾಹನಗಳಿಗೆ ಬೆಂಕಿ
ಸಿದ್ದರಾಮಯ್ಯ ಹಾಗೂ ಡಿಕೆಶಿ ಭಿನ್ನಮತ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರವಾಗಿ ಮಾತಾನಾಡಿದ ಅವರು, ಸಾಕಷ್ಟು ಬಾರಿ ಹೇಳಿದ್ದೇವೆ. ನಮ್ಮಲ್ಲಿ ಭಿನ್ನಮತವಿಲ್ಲ ನಾವೆಲ್ಲ ಒಗ್ಗಟ್ಟಾಗಿದ್ದೇವೆ. ಎಷ್ಟು ಬಾರಿ ಹೇಳಬೇಕು ಪದೇ, ಪದೇ ಎಲ್ಲರೂ ಹೇಳಿದ್ದೇವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬ್ಲಡ್ ಟೆಸ್ಟ್ ಮಾಡಿಸಿಕೊಳ್ಳಲು ಮಕ್ಕಳಂತೆ ಅತ್ತ ಪೊಲೀಸಪ್ಪ – ನೆಟ್ಟಿಗರಿಗೆ ಫುಲ್ ಮನರಂಜನೆ
ಸಿದ್ದರಾಮೋತ್ಸವಕ್ಕೆ ಬಿಜೆಪಿ ಪರ್ಯಾಯ ಸಮಾವೇಶ ವಿಚಾರ ಬಿಜೆಪಿ ಅವರು ಸಮಾವೇಶ ಮಾಡಲಿ ಅವರಿಗೆ ಬೇಡ ಅಂದವರು ಯಾರು? ಅವರ ಕಾರ್ಯಕ್ರಮ ನಮ್ಮ ಕಾರ್ಯಕ್ರಮ ಬೇರೆ ಕಾಂಗ್ರೆಸನವರು ನಾವು ಒಗ್ಗಟ್ಟಾಗಿ ಗಟ್ಟಿಯಾಗಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರ ಚುನಾವಣೆ ಮುಗಿದ ಮೇಲೆ ನೋಡೋಣ ಎಂದು ಹೇಳಿದ್ದಾರೆ.