ಕಲಬುರಗಿ: ನಾನು ಕದನ ಭೂಮಿಯಿಂದ ಓಡಿ ಹೋಗುವವನಲ್ಲ. ನನ್ನ ಹೇಳಿಕೆಗೆ ನಾನು ಬದ್ದನಾಗಿದ್ದೇನೆ. ರಾಜೀವ್ ಗಾಂಧಿ ವಸತಿ ನಿಗಮದ (Rajiv Gandhi Housing Corporation) ಹಗರಣದ ಆರೋಪದಿಂದ ಹಿಂದೆ ಸರಿಯಲ್ಲ ಎಂದು ಕಲಬುರಗಿಯಲ್ಲಿ ಶಾಸಕ ಬಿಆರ್ ಪಾಟೀಲ್ (BR Patil) ಸ್ಪಷ್ಟಪಡಿಸಿದರು.
ಈ ಕುರಿತು ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ನಾನು ಹೇಳಿರುವ ಹೇಳಿಕೆ ಸರಿಯಾಗಿದೆ ಎಂದು ರಾಜು ಕಾಗೆ ಸಹ ಹೇಳಿದ್ದಾರೆ. ನನಗೂ ಮೊದಲೇ ಆರು ತಿಂಗಳ ಹಿಂದೆಯೇ ಶಾಸಕಾಂಗ ಸಭೆಯಲ್ಲಿ ಏನು ಹೇಳಬೇಕು ಅದನ್ನು ಆಗಲೇ ಹೇಳಿದ್ದಾರೆ. ಇನ್ನೂ ಹಲವರು ಇದರ ಬಗ್ಗೆ ಮಾತನಾಡುವವರಿದ್ದಾರೆ ಎನ್ನುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ನಲ್ಲಿ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ ಸಿಎಂ ಅನುದಾನ ಅಂತ ಬಜೆಟ್ನಲ್ಲಿ ಇಲ್ಲ, ರಾಜು ಕಾಗೆಯನ್ನ ಕರೆದು ಮಾತಾಡ್ತೀನಿ: ಸಿದ್ದರಾಮಯ್ಯ
ಎಂವೈ ಪಾಟೀಲ್ ಏನೋ ಉಲ್ಟಾ ಹೊಡಿದ್ದಿದ್ದಾರೆ ಅಂತೇ, ತಮ್ಮ ಕ್ಷೇತ್ರದದಲ್ಲಿ ಏನು ಆಗಿಲ್ಲವೆಂದು ಹೇಳಿದ್ದಾರಂತೆ. ಆದರೆ, ಅವರ ಕ್ಷೇತ್ರದ ಜನರು ನನಗೆ ಕರೆ ಮಾಡಿದ್ದಾರೆ ಎಂದು ದೂರವಾಣಿ ಕರೆ ಮಾಡಿದವರ ಲಿಸ್ಟ್ ಓದಿದರು. ಇದೇ ವೇಳೆ ಬಿ.ಆರ್.ಪಾಟೀಲ್ ಪಕ್ಕದಲ್ಲಿದ್ದ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್ ಸಹ ಅಸಮಧಾನ ವ್ಯಕ್ತಪಡಿಸಿ, ನನಗೂ ಮಾಹಿತಿ ಇಲ್ಲದೆ, ನನ್ನ ಕ್ಷೇತ್ರದಲ್ಲೂ ಕೆಆರ್ಐಡಿಎಲ್ ಕೈಗೊಳ್ಳುವ ಕಾಮಗಾರಿ ಉದ್ಘಾಟನೆಯಾಗುತ್ತಿವೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ – ಸಿಎಂ, ಜಮೀರ್ ರಾಜೀನಾಮೆಗೆ ರವಿಕುಮಾರ್ ಆಗ್ರಹ
ಸಿಎಂ ಸಿದ್ದರಾಮಯ್ಯ ನನ್ನ ಆತ್ಮೀಯ ಸ್ನೇಹಿತ. ಹಿಂದೇ ಯಾವ ರೀತಿ ಪ್ರೀತಿಯಿಂದ ಇದ್ದರೋ, ಈಗಲೂ ಅದೇ ರೀತಿಯ ಪ್ರೀತಿಯಿಂದ ಇದ್ದಾರೆ. ನನಗೆ ಕರೆ ಮಾಡಿ, ರಾಯಚೂರು ಬರಲು ಹೇಳಿದರು. ಆದರೆ, ಅಲ್ಲಿ ಆಹ್ವಾನವಿಲ್ಲ ನಾನು ಬರಲ್ಲ ಎಂದು ಹೇಳಿದ್ದೇನೆ. ಅದಕ್ಕೆ, ದೆಹಲಿ ಹೋಗಿ ಬರುತ್ತೇನೆ. ಆಗ ಬಂದು ಭೇಟಿ ಆಗಲು ಹೇಳಿದ್ದಾರೆ. ಜೂನ್ 25ರಂದು ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತದ ವಾಯುಸೀಮೆಯನ್ನು ಅಮೆರಿಕ ಬಳಸಿ ಇರಾನ್ ಮೇಲೆ ದಾಳಿ ಮಾಡಿತ್ತಾ? – ಉತ್ತರ ನೀಡಿದ ಪಿಐಬಿ