ಕೌರವ ಖ್ಯಾತಿಯ ಬಿ.ಸಿ. ಪಾಟೀಲ್ (BC Patil) ‘ಮದಕರಿ ನಾಯಕ’ನ (Veera Madkari) ಕುರಿತಾದ ಕಾದಂಬರಿ ಓದುತ್ತಿದ್ದೇನೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಈಗಾಗಲೇ ಮದಕರಿ ನಾಯಕನ ಕುರಿತಾಗಿ ಸಿನಿಮಾ ಮಾಡಲು ಇಬ್ಬರು ಸ್ಟಾರ್ ನಟರು ತಯಾರಿ ಮಾಡಿಕೊಂಡಿದ್ದರು. ಅದರಲ್ಲೂ ಸುದೀಪ್ (Sudeep) ಹೆಸರು ಹೆಚ್ಚು ಓಡಾಡಿತು.
ಮದಕರಿ ನಾಯಕನ ಸಿನಿಮಾ ಕುರಿತಂತೆ ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಹಲವಾರು ಭಾರಿ ಚರ್ಚೆ ನಡೆದಿವೆ. ನಟರ ಫ್ಯಾನ್ಸ್ ವಾರ್ ಗೂ ಅದು ಕಾರಣವಾಗಿತ್ತು. ತಮ್ಮದೇ ಆದ ರೀತಿಯಲ್ಲಿ ಅಭಿಮಾನಿಗಳು ಪೋಸ್ಟರ್ ಮಾಡಿಯೂ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇಷ್ಟೆಲ್ಲ ನಡುವೆಯೂ ಬಿ.ಸಿ. ಪಾಟೀಲ್ ಮತ್ತೊಂದು ಅಚ್ಚರಿಯ ಸುದ್ದಿಯನ್ನು ನೀಡಿದ್ದಾರೆ. ಇದನ್ನೂ ಓದಿ:ದಾಂಪತ್ಯಕ್ಕೆ ಅಂತ್ಯ ಹಾಡಿದ ನಟಿ, ಡಿವೋರ್ಸ್ ಬಗ್ಗೆ ಬಿಗ್ ಬಾಸ್ ಚೈತ್ರಾ ಅಪ್ಡೇಟ್
ತಾವೇ ನಟಿಸಲು ಆ ಕಾದಂಬರಿ ಓದುತ್ತಿದ್ದಾರೋ ಅಥವಾ ನಿರ್ಮಾಣಕ್ಕೆ ಏನಾದರೂ ಪ್ಲ್ಯಾನ್ ಮಾಡಿದ್ದರೋ ಗೊತ್ತಿಲ್ಲ. ಆ ಕುರಿತು ಅವರು ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಆದರೆ, ಕಾದಂಬರಿ ಓದುತ್ತಿರುವ ಕುರಿತು ಅವರು ಮಾತನಾಡಿದ್ದಾರೆ. ಮುಂದೆ ನೋಡೋಣ ಎನ್ನುವ ಕುತೂಹಲವನ್ನೂ ಉಳಿಸಿಕೊಂಡಿದ್ದಾರೆ.
ಗರಡಿ ಸೇರಿದಂತೆ ಹಲವು ಸಿನಿಮಾಗಳನ್ನು ಪಾಟೀಲರು ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ಗರಡಿಯಲ್ಲಿ ಅವರು ಪ್ರಮುಖ ಪಾತ್ರವನ್ನೂ ಮಾಡಿದ್ದಾರೆ. ಶಶಾಂಕ್ ಜೊತೆ ಕೈ ಜೋಡಿಸಿ ನಿರ್ಮಾಣ ಮಾಡಿರುವ ಕೌಸಲ್ಯ ಸುಪ್ರಜಾ ರಾಮ ಸಿನಿಮಾ ಈ ವಾರ ರಿಲೀಸ್ ಆಗಲಿದೆ.
Web Stories