ಮಂಡ್ಯ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾನೇ ಎಂದು ಹಾಲಿ ಸಂಸದ ಎಲ್.ಆರ್. ಶಿವರಾಮೇಗೌಡರು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮುಂದಿನ ಅಭ್ಯರ್ಥಿ ನಾನೇ. ಆದರೆ ನಿಖಿಲ್ ಕುಮಾರಸ್ವಾಮಿ ಅವರು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದರೆ ನಾನು ಸ್ಥಾನ ಬಿಟ್ಟು ಕೊಡಲು ಸಿದ್ಧವಾಗಿದ್ದೇನೆ. ಈ ಕುರಿತು ಜೆಡಿಎಸ್ ವರಿಷ್ಠರನ್ನು ಕೇಳಿದ್ದು, ನಾನು ಕೇವಲ ಆರು ತಿಂಗಳು ಮಾತ್ರ ಅಧಿಕಾರ ನಡೆಸಿದ್ದೇನೆ ಎಂದರು.
- Advertisement 2
- Advertisement 3
ಇದೇ ವೇಳೆ ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅವರು ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರಿಸಿ, ನಾವು ಜಿಲ್ಲೆಯಲ್ಲಿ ಅಂಬರೀಶ್ ಅವರನ್ನು ಹೊತ್ತು ಮೆರೆದಾಡಿದ್ದೇವೆ. ಅವರು ವಿಧಿವಶರಾದ ವೇಳೆಯೂ ಸಿಎಂ ಕುಮಾರಸ್ವಾಮಿ ಅವರು ಹೆಗಲ ಮೇಲೆ ಹೊತ್ತುಕೊಂಡು ಬಂದಿದ್ದಾರೆ. ಅದಕ್ಕಿಂತ ಇನ್ನೇನು ಮಾಡಲು ಸಾಧ್ಯ. ಆದರೆ ನಾನು ಸುಮಲತಾ ಅವರ ಸ್ಪರ್ಧೆಯ ಬಗ್ಗೆ ಮಾತನಾಡಲ್ಲ ಎಂದು ಹೇಳಿದರು.
- Advertisement 4
ಈ ಬಾರಿ ಕೇಂದ್ರ ಮೋದಿ ಸರ್ಕಾರದ ಬಜೆಟ್ ವಿಚಾರದಲ್ಲಿ ಭಾರೀ ನಿರೀಕ್ಷೆ ಇತ್ತು. ಆದರೆ ಎಲ್ಲವೂ ಹುಸಿ ಆಗಿದೆ. ಸಮ್ಮಿಶ್ರ ಸರ್ಕಾರದಲ್ಲಿ ಸಾಕಷ್ಟು ರೈತರ ಸಾಲಮನ್ನಾ ಆಗಿದ್ದು, ರೈತರಿಗೆ ಆರು ಸಾವಿರ ಕೊಟ್ಟ ಬಿಜೆಪಿ ರೈತರ ಮೂಗಿಗೆ ತುಪ್ಪ ಸವರಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಸಂಸದರು ತಲೆ ತಗ್ಗಿಸಬೇಕು ಎಂದು ಕಿಡಿಕಾರಿದರು. ಅಲ್ಲದೇ ದೋಸ್ತಿ ಪಕ್ಷವಾದ ಕಾಂಗ್ರೆಸ್ ಮುಖಂಡರು ಬೀದಿಯಲ್ಲಿ ನಿಂತು ಜೆಡಿಎಸ್ ಬಗ್ಗೆ ಮಾತನಾಡುತ್ತಾರೆ. ಅಂತಹ ಮುಖಂಡರ ಹೇಳಿಕೆಗೆ ಪಕ್ಷದ ಹೈಕಮಾಂಡ್ ಬ್ರೇಕ್ ಹಾಕಬೇಕು. ಆ ಮೂಲಕ ಮುಖ್ಯಮಂತ್ರಿಗಳಿಗೆ ಆಡಳಿತ ನಡೆಸಲು ಅವಕಾಶ ಮಾಡಿಕೊಡಬೇಕು. ಆದರೆ ಮಂತ್ರಿ ಸ್ಥಾನ ಪಡೆದವರು ತಮ್ಮ ನಿಷ್ಠೆಯನ್ನು ಎದೆ ಬಗೆದು ತೋರಿಸಬೇಕಾದ ಅವಶ್ಯಕತೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರಿಗೆ ಟಾಂಗ್ ಕೊಟ್ಟರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv