– MP ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಕುರಿತು ಇಂಗಿತ ವ್ಯಕ್ತಪಡಿಸಿದ MLC
– ನಾನು ಹಿಡಿಯುವ ಪಕ್ಷದ ಧ್ವಜ ಬೇರೆಯಾಗಬಹುದು, ನನ್ನ ಅಂಜೆಂಡಾ ಬದಲಾಗಿಲ್ಲ
ಬೆಳಗಾವಿ: ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ (H Vishwanath) 2024ರ ಲೋಕಸಭಾ ಚುನಾವಣೆಗೆ (Lok Sabha Elections) ಕಾಂಗ್ರೆಸ್ ಪಕ್ಷದಿಂದ ಮೈಸೂರಿನಿಂದ ಸ್ಪರ್ಧೆ ಮಾಡುವ ಕುರಿತು ಇಂಗಿತ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಬೆಳಗಾವಿಯಲ್ಲಿಂದು (Belagavi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ನಲ್ಲೇ (Congress) ಸಂಸದನಾಗಿದ್ದವನು. ಕಾಂಗ್ರೆಸ್ ಕಾರ್ಯಕರ್ತನಾಗಿ ಮೇಲೆ ಬಂದವನು. ಹಲವು ಕಾರಣಗಳಿಂದ ನಾನು ಹೊರ ಬಂದಿದ್ದೇನೆ. 40 ವರ್ಷ ಕಾಂಗ್ರೆಸ್ ನಲ್ಲೇ ಇದ್ದವನು ಎಂದಿದ್ದಾರೆ. ಇದನ್ನೂ ಓದಿ: ಉಡುಪಿ ಮಾದರಿ ಮತ್ತೊಂದು ಕೇಸ್; ಹಾಸ್ಟೆಲ್ ಹುಡ್ಗೀರ ಬೆತ್ತಲೆ ವೀಡಿಯೋ ಸೆರೆ ಹಿಡಿದು ಸೀನಿಯರ್ಗೆ ಕಳಿಸ್ತಿದ್ದ ವಿದ್ಯಾರ್ಥಿನಿ
ನಾನೀಗ ಯಾವ ಪಕ್ಷದ ಸದಸ್ಯನೂ ಅಲ್ಲ, ಸ್ವತಂತ್ರವಾಗಿದ್ದೇನೆ. ಕಾಂಗ್ರೆಸ್ ಬಿಟ್ಟು ಜೆಡಿಎಸ್ (JDS) ಸೇರಿ ರಾಜ್ಯಾಧ್ಯಕ್ಷ ಆದೆ. ಜೆಡಿಎಸ್ ಕಚೇರಿಯಲ್ಲೇ ನಾನು ಕಾಂಗ್ರೆಸ್ ನನ್ನ ತಾಯಿ ಅಂತಾ ಹೇಳಿದ್ದೇನೆ. ನಾನು ಹಿಡಿದುಕೊಳ್ಳುವ ಪಕ್ಷದ ಧ್ವಜ ಬೇರೆ ಬೇರೆಯಾಗಬಹುದು. ಆದ್ರೇ ನನ್ನ ಅಂಜೆಂಡಾ ಬದಲಾಗಿಲ್ಲ. ಎನ್ನುವ ಮೂಲಕ ಮೈಸೂರಿನಿಂದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಕುರಿತು ಇಂಗಿತ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Asian Championship Trophy Hockey final: ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ; ಮಲೇಷ್ಯಾ ವಿರುದ್ಧ 4-3 ಅಂತರದ ರೋಚಕ ಜಯ
ಪಕ್ಷ ರಾಜಕಾರಣ ಸತ್ತು ಹೋಗಿದೆ ವ್ಯಕ್ತಿ ರಾಜಕಾರಣ ಮೇಲೆದ್ದಿದೆ. ಪಕ್ಷ ರಾಜಕಾರಣ ಬಲವಾಗಿದ್ದಾಗ ಕಾಂಗ್ರೆಸ್, ಇಂದಿರಾಗಾಂಧಿ ಹೆಸರಲ್ಲಿ ಯಾರು ನಿಂತರೂ ಗೆದ್ದು ಬರುತ್ತಿದ್ದರು. ಆದ್ರೆ ಪಕ್ಷ ರಾಜಕಾರಣ ಹೋಗಿ ವ್ಯಕ್ತಿ ರಾಜಕಾರಣ ಬಂದಿದೆ. ಪಕ್ಷ ರಾಜಕಾರಣ ಸತ್ತು ಹೋದ ಬಳಿಕ ಆಂತರಿಕ ಪ್ರಜಾಪ್ರಭುತ್ವ ಸತ್ತು ಹೋಗಿದೆ. ಲೋಕಸಭಾ ಚುನಾವಣೆ ಸ್ಪರ್ಧೆ ಕುರಿತು ನಾನು ಇನ್ನೂ ಮಾತಾಡಿಲ್ಲ. ಮತ್ತೊಂದು ಸಲ ನನಗೆ ಅವಕಾಶ ಕೊಡಿ ಅಂತಾ ಕೇಳಬೇಕು ಅಂದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
Web Stories