Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಕ್ಷ ನಿಷ್ಠನಾಗಿ ಅಂದು ಜೈಲುವಾಸ ಆಯ್ಕೆ ಮಾಡಿಕೊಂಡೆ – ಬಿಜೆಪಿ ಆಫರ್‌ ಬಗ್ಗೆ ಡಿಕೆಶಿ ಬಾಂಬ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಕ್ಷ ನಿಷ್ಠನಾಗಿ ಅಂದು ಜೈಲುವಾಸ ಆಯ್ಕೆ ಮಾಡಿಕೊಂಡೆ – ಬಿಜೆಪಿ ಆಫರ್‌ ಬಗ್ಗೆ ಡಿಕೆಶಿ ಬಾಂಬ್‌

Bengaluru City

ಪಕ್ಷ ನಿಷ್ಠನಾಗಿ ಅಂದು ಜೈಲುವಾಸ ಆಯ್ಕೆ ಮಾಡಿಕೊಂಡೆ – ಬಿಜೆಪಿ ಆಫರ್‌ ಬಗ್ಗೆ ಡಿಕೆಶಿ ಬಾಂಬ್‌

Public TV
Last updated: October 16, 2025 9:00 am
Public TV
Share
5 Min Read
DK Shivakumar 2 4
SHARE

– ಶಾಲಾ ಚುನಾವಣೆಯಲ್ಲಿಯೇ ಅನೇಕ ಒತ್ತಡಗಳಿಂದ ನನಗೆ ಬೇರೆ ಸ್ಥಾನ ನೀಡಲಾಗಿತ್ತು
– 400 ಮತಗಳಿಂದ ಗೆಲ್ತೀಯಾ ಅಂದ್ರು, ಬೆಳಗ್ಗೆ ಯಾವ್ದೋ ಹುಡ್ಗಿ ಹೆಸರು ಘೋಷಣೆ ಮಾಡಿದ್ರು

ಬೆಂಗಳೂರು: ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವ ವೇಳೆ ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ಬಿಜೆಪಿ ಆಫರ್‌ ಬಗ್ಗೆ ಹೊಸ ಬಾಂಬ್‌ ಸಿಡಿಸಿದರು.

ನಗರದ ಎಫ್ ಕೆಸಿಸಿಐ ಸಭಾಂಗಣದಲ್ಲಿ ನಡೆದ ಕೆ.ಎಂ.ರಘು ಡೈರೆಕ್ಟರ್ ಅವರು ಬರೆದಿರುವ ಡಿ.ಕೆ. ಶಿವಕುಮಾರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಡಿಸಿಎಂ ಮಾತನಾಡಿದರು. ಇದನ್ನೂ ಓದಿ: ಐನಾಕ್ಸ್‌ವಿಂಡ್‌ ಕಂಪನಿಯಿಂದ ಕುಷ್ಟಗಿಯಲ್ಲಿ 400 ಕೋಟಿ ಹೂಡಿಕೆ: ಎಂಬಿ ಪಾಟೀಲ್‌

DK Shivakumar 8

ಸಮ್ಮಿಶ್ರ ಸರ್ಕಾರದಲ್ಲಿ 10 ಜನ‌ ಶಾಸಕರು ರಾಜಿನಾಮೆ ನೀಡಲು ಹೊರಟಿದ್ದರು. ಕನಕಪುರದಲ್ಲಿದ್ದ ನಾನು ಬೆಂಗಳೂರಿಗೆ ಬಂದು ಐದಾರು ಜನರನ್ನು ವಾಪಸ್ ಕ್ವಾಟ್ರಸ್‌ಗೆ ಕರೆದುಕೊಂಡು ಬಂದೆ.‌ ಆಗ ನನಗೆ ಒಬ್ಬ ಆದಾಯ ತೆರಿಗೆ (Income Tax) ಆಡಿಟರ್ ಫೋನ್ ನಿಂದ ಕರೆ ಬಂದಿತ್ತು. ಬಿಜೆಪಿಯ (BJP) ಯಾರಿಂದ ಬಂತು ಅಂತ ಹೆಸರು ಹೇಳೋದು ಬೇಡ ಈಗ. ನನ್ನ ಜೊತೆ ಡಿಜಿಯೂ ಇದ್ದ‌ರು, ಡಿಕೆ ಸುರೇಶ್‌ ಕೂಡ ಇದ್ದರು. ಅವರು ದೂರವಾಣಿ ಕರೆಯಲ್ಲಿ ಮಾತನಾಡಿದರು. ಕರೆ ಮಾಡಿದವರು ʻನೀವು ಡಿಸಿಎಂ ಆಗುವಿರಾ ಅಥವಾ ಜೈಲಿಗೆ ಹೋಗುವಿರಾ?ʼ ಎಂದು ಕೇಳಿದರು. ಎಲ್ಲಾ ಶಾಸಕರನ್ನ ವಾಪಸ್‌ ಕರೆದುಕೊಂಡು ಬನ್ನಿ ಎಂದು ತಿಳಿಸಿದರು.

ಆಗ ನಾನು ನನಗೆ ಇಷ್ಟೆಲ್ಲಾ ಸ್ಥಾನ ನೀಡಿರುವ ಪಕ್ಷವನ್ನ ಬಿಡುವುದಿಲ್ಲ. ಪಕ್ಷನಿಷ್ಠೆಗಾಗಿ ಬೇಕಾದರೆ ಜೈಲಿಗೆ ಹೋಗುತ್ತೇನೆ ಎಂದೆ. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ರಾಜೀವ್ ಗಾಂಧಿ ಅವರು ನನಗೆ ಟಿಕೆಟ್ ನೀಡಿ, ಮಂತ್ರಿ ಮಾಡಿದ್ದರು. ಬಂಗಾರಪ್ಪ ಅವರು ನನಗೆ ಸಹಕಾರ ನೀಡಿದ್ದರು. ಈ ಪಕ್ಷದಿಂದ ಈ ಮಟ್ಟಕ್ಕೆ ಬೆಳೆದಿದ್ದೇನೆ ಎಂದು ಜೈಲು ಆಯ್ಕೆ ಮಾಡಿಕೊಂಡೆ. ಅಂದು ನಾನು ಬೇರೆ ಆಯ್ಕೆ ಮಾಡಿದ್ದರೆ ಏನೇನು ಆಗುತ್ತಾ ಇತ್ತೋ ಗೊತ್ತಿಲ್ಲ ಎಂದರು. ಇದನ್ನೂ ಓದಿ: ಜಾತಿ ಸಮೀಕ್ಷೆಯಲ್ಲಿ ಭಾಗವಹಿಸಲ್ಲ ಎಂದ ಸುಧಾ, ನಾರಾಯಣ ಮೂರ್ತಿ ದಂಪತಿ

ಯಾವುದೋ ಹುಡುಗಿಯ ಹೆಸರು ಘೋಷಣೆ ಮಾಡಲಾಯಿತು
ನಾನು ವಿದ್ಯಾರ್ಥಿ ದೆಸೆಯಿಂದಲೇ ರಾಜಕೀಯ ನಾಯಕನಾಗಬೇಕು ಎನ್ನುವ ಅಭಿಲಾಷೆ ಹೊಂದಿದ್ದವನು. ಮೌಂಟ್ ಕಾರ್ಮೆಲ್ ಶಾಲಾ ಚುನಾವಣೆಯಲ್ಲಿ ಗೆದ್ದಿದ್ದ ನನಗೆ ಅಂದೇ ಅನೇಕ ಒತ್ತಡಗಳಿಂದ ಪ್ರತ್ಯೇಕ ಸ್ಥಾನ ನೀಡಲಾಯಿತು. ಚುನಾವಣೆಯ ಕೌಂಟಿಂಗ್ ಪ್ರತಿನಿಧಿಯಾಗಿದ್ದ ನನ್ನ ಸಹಪಾಠಿ ಮಾಧವ ನಾಯಕ್ ನೀನು 400 ಮತಗಳಿಂದ ಗೆಲ್ಲುತ್ತೀಯಾ ಎಂದಿದ್ದನು. ಆದರೆ ಬೆಳಗ್ಗೆ ಫಲಿತಾಂಶ ಘೋಷಣೆ ಮಾಡುವಾಗ ಬೇರೆ ಯಾವುದೋ ಹುಡುಗಿಯ ಹೆಸರನ್ನು ಘೋಷಣೆ ಮಾಡಲಾಯಿತು. ನನಗೆ ಪ್ರತ್ಯೇಕವಾಗಿ ಕ್ರೀಡಾ ಕಾರ್ಯದರ್ಶಿ ಹುದ್ದೆ ನೀಡಲಾಯಿತು ಎಂದರು.

ರಾಜಕಾರಣದಲ್ಲಿಯೂ ಸುಮಾರು ಶೇ.80‌ ರಷ್ಟು ಜನ ದುಡಿಯುತ್ತಲೇ ಇದ್ದಾರೆ. ಶೇ.20 ರಷ್ಟು ಜನರಿಗೆ ಮಾತ್ರ ಸಣ್ಣಪುಟ್ಟ ಸ್ಥಾನಮಾನ ಸಿಕ್ಕಿದೆ. ನನಗೂ 63 ವರ್ಷವಾಯಿತು.‌ ನಾವುಗಳೇ ಇನ್ನೆಷ್ಟು ದಿನ ರಾಜಕಾರಣ ಮಾಡಲು ಸಾಧ್ಯ.? ಹೊಸಬರು ಬರಬೇಕು. ಐದು ಪಾಲಿಕೆಗಳು ಮಾಡಿದ‌ ಕಾರಣಕ್ಕೆ ಬೆಂಗಳೂರಿನಲ್ಲಿ ಹೊಸದಾಗಿ 500ಕ್ಕೂ ಹೆಚ್ಚು ನಾಯಕರು ಬೆಳಕಿಗೆ ಬರಲಿದ್ದಾರೆ ಎಂದರು.

ನಾನು ಜಾತ್ಯತೀತ ತತ್ವದಲ್ಲಿ ಬೆಳೆದವನು
ಜಾತ್ಯಾತೀತ ತತ್ವದಲ್ಲಿ ಬೆಳೆದವನು ನಾನು. ಸದನದಲ್ಲಿ ಆರ್‌ಎಸ್‌ಎಸ್‌ ಬಗ್ಗೆ ತಿಳಿದಿದೆ ಎಂದು ಹೇಳಿದೆ ಅಷ್ಟೇ ‌ಅದನ್ನೇ ದೊಡ್ಡದಾಗಿ ಬಿಂಬಿಸಲಾಯಿತು. ಕಾರ್ಯಕರ್ತರಿಗೆ, ನನ್ನ ನಂಬಿಕೊಂಡವರಿಗೆ ನೋವಾಗಬಾರದು ಎಂದು ನಾನು ಏನೂ ಮಾತನಾಡಲಿಲ್ಲ. ನಾನು ಪುಸ್ತಕ ಓದುವವನಲ್ಲ. ಶಾಲಾ, ಕಾಲೇಜುಗಳಲ್ಲಿ ಓದಲಿಲ್ಲ. ಅಂದಿನಿಂದಲೂ ರಾಜಕಾರಣ ಮಾಡಿಕೊಂಡು ಬೆಳೆದವನು ನಾನು. ಅಂತಿಮ ಪದವಿ ಓದುವಾಗ ಟಿಕೆಟ್ ದೊರೆಯಿತು. ಇದನ್ನು ಯಾರೂ ಸಹ ಊಹಿಸಲೂ ಸಾಧ್ಯವಿಲ್ಲ. ಅಂದಿನಿಂದ 8 ಬಾರಿ ಶಾಸಕನಾಗಿ ಇಂದು ಉಪಮುಖ್ಯಮಂತ್ರಿಯಾಗಿದ್ದೇನೆ ಎಂದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕೇಸ್ – ಕರೆ ಮಾಡಿದವನ ಮೂಲ ಪತ್ತೆ, ಅರೆಸ್ಟ್‌ಗೆ ಮುಂದಾದ ಪೊಲೀಸರು

ನಾನು ರಾಜೀವ್ ಗಾಂಧಿ ಮಾತಿನ ಮೇಲೆ ನಂಬಿಕೆ ಇಟ್ಟವನು
ಈ ಪುಸ್ತಕ ರಾಜಕೀಯದಲ್ಲಿ ಬೆಳೆಯಬೇಕು ಎನ್ನುವವರಿಗೆ ಒಂದಷ್ಟು ಮಾರ್ಗದರ್ಶನ ‌ನೀಡಬಹುದು. ಏಕೆಂದರೆ ನಾನು ರಾಜೀವ್ ಗಾಂಧಿ ಅವರ ಮಾತಿನ ಮೇಲೆ ನಂಬಿಕೆ ಇಟ್ಟವನು. ಹಿಂಬಾಲಕರನ್ನ ಸೃಷ್ಟಿಸಬೇಡಿ ನಾಯಕರನ್ನು ಸೃಷ್ಟಿಸಿ ಎನ್ನುವ ಮಾತನ್ನು ಹೆಚ್ಚು ನಂಬುವವನು. ನಾನು ಇಷ್ಟು ‌ಎತ್ತರಕ್ಕೆ ಬೆಳೆಯಲು ನನ್ನ ಕ್ಷೇತ್ರದ ಜನತೆ ಹಾಗೂ ಪಕ್ಷದ ಕಾರ್ಯಕರ್ತರು ಕಾರಣ.‌ ತಿಹಾರ್ ಜೈಲಿಗೆ ನನ್ನ ಮೇಲೆ ಷಡ್ಯಂತ್ರ ‌ಮಾಡಿ ಕಳುಹಿಸಿದಾಗಲೂ ಈ ಜನ ನನ್ನ ಜೊತೆ ನಿಂತಿದ್ದಾರೆ‌. ಲಕ್ಷಾಂತರ ಜನರು, ತಾಯಂದಿರು ಹರಕೆ ಕಟ್ಟಿಕೊಂಡು ನನ್ನ ಪರವಾಗಿ ಪ್ರಾರ್ಥನೆ ಮಾಡಿದ್ದರು. ಎಲ್ಲರ ಹರಕೆ,‌ ಹಾರೈಕೆಯಿಂದ ನಾನು ನಿಮ್ಮ ಮುಂದೆ ನಿಂತಿದ್ದೇನೆ ಎಂದರು.

ಟೀಕೆಗಳನ್ನು ಮುಕ್ತವಾಗಿ ಸ್ವೀಕರಿಸುವೆ
ಟೀಕೆಗಳನ್ನು ಮುಕ್ತವಾಗಿ ನಾನು ಸ್ವೀಕಾರ ಮಾಡುತ್ತೇನೆ. ಸ್ನೇಹಿತರು ಟೀಕೆ ಮಾಡುತ್ತಾರೆ. ವೈರಿಗಳು ನನ್ನ ಬಗ್ಗೆ ಇಲ್ಲ ಸಲ್ಲದ ಸಂಗತಿಗಳನ್ನು ಕಟ್ಟಿ ಮಾತನಾಡುತ್ತಾರೆ. ಆಪಾದನೆಗಳನ್ನು ‌ಮಾಡುತ್ತಾರೆ. ಆದರೂ ನಾನು ಸಂತೋಷದಿಂದ ಕೇಳಿಸಿಕೊಳ್ಳುತ್ತೇನೆ ಎಂದರು.

“ದೇವೆಗೌಡರು, ಕುಮಾರಸ್ವಾಮಿ ವಿರುದ್ಧ ರಾಜಕೀಯ ‌ಮಾಡಿದ್ದೇನೆ. ಜಾತ್ಯಾತೀತತೇ ಉಳಿಯಬೇಕು ಎನ್ನುವ ಕಾರಣಕ್ಕೆ, ಹೈಕಮಾಂಡ್ ಹೇಳಿದಕ್ಕೆ ಅವರ ಕೈ ಹಿಡಿದು ಮೇಲಕ್ಕೆತ್ತಿ ಮುಖ್ಯಮಂತ್ರಿ ಮಾಡಿದ್ದೇವೆ. ನನ್ನ ಮನಸ್ಸು ಒಪ್ಪಿತೋ ಇಲ್ಲವೋ ಬೇರೆ ವಿಚಾರ‌. ಆದರೆ ಪಕ್ಷದ ಮಾತಿಗೆ ನಿಷ್ಠನಾಗಿ ನಡೆದುಕೊಂಡೆ. ನಾನು ಜೈಲಿಗೆ ಹೋದ ತಕ್ಷಣ ನಾವೇನಾದರೂ ದುಡ್ಡು ಹೊಡೆಯಲು ಹೇಳಿದ್ದೆವೇಯೇ ಎನ್ನುವ ಮಾತನ್ನೂ ಇದೇ ಕಿವಿಯಲ್ಲಿ ಕೇಳಿದ್ದೇನೆ ಎಂದರು.

ಪುಸ್ತಕದಲ್ಲಿ 99%ರಷ್ಟು ಸತ್ಯ ಸಂಗತಿಗಳು ಕಾಣುತ್ತಿವೆ
“ಪುಸ್ತಕದ ಲೇಖಕ ರಘು ನನಗೆ ಪರಿಚಿತನಲ್ಲ, ಪುಸ್ತಕ ಬರೆಯುತ್ತೇನೆ ಎಂದು ಅನುಮತಿ ಪಡೆದಿಲ್ಲ, ನನ್ನ ಬಳಿ ಹತ್ತು ನಿಮಿಷ ಮಾತನಾಡಿಲ್ಲ. ಆದರೆ ತನ್ನದೇ ಆದ ಮಾದರಿಯಲ್ಲಿ ಸಂಶೋಧನೆ ಮಾಡಿದ್ದಾರೆ. ನನ್ನ ಭಾಷಣಗಳು ಸೇರಿದಂತೆ ಇತರೇ ಮಾತುಗಳನ್ನು ಕೇಳಿ ಮಾಹಿತಿ ಸಂಗ್ರಹ ಮಾಡಿದ್ದಾರೆ‌. ಇದರಲ್ಲಿ ಶೇ.99 ರಷ್ಟು ಸತ್ಯ ಸಂಗತಿಗಳು ‌ಕಾಣುತ್ತಿವೆ” ಎಂದರು.

“ಮೈಸೂರಿನ ರಮ್ಯ ಎಂಬ ಪಿಹೆಚ್‌ಡಿ ವಿದ್ಯಾರ್ಥಿನಿ ನನ್ನ ಬಗ್ಗೆ ಕಳೆದ 6-7 ವರ್ಷಗಳಿಂದ ಸಂಶೋಧನೆ ನಡೆಸಿ ಡಾಕ್ಟರೇಟ್ ಪಡೆದಿದ್ದಾರೆ. ಆಕೆ ಸಹ ನನ್ನ ಬಗ್ಗೆ ಬರೆದಿರುವ ಪುಸ್ತಕ ಬಿಡುಗಡೆಗೆ ಬಂದಿಲ್ಲ. ಈಗ ನನ್ನ ಬಗ್ಗೆ ಅತ್ಯುತ್ತಮವಾಗಿ ಸಂಶೋಧನೆ ನಡೆಸಿ ರಘು ಅವರು ಪುಸ್ತಕ ಬರೆದಿದ್ದಾರೆ. ನನ್ನ ಬಗ್ಗೆ ತಿಳಿದುಕೊಳ್ಳಲು, ನನ್ನ ಹೆಜ್ಜೆಗಳನ್ನು ಅರಿಯಲು ಈ ಪುಸ್ತಕ ನೆರವಾಗುತ್ತದೆ.‌ ನನ್ನ ಶ್ರಮ, ಫಲವನ್ನು ಈ ಪುಸ್ತಕದ ‌ಮೂಲಕ ತಿಳಿದುಕೊಳ್ಳಬಹುದು ಎಂದರು.

ಸಮಾರಂಭದ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಡಿಸಿಎಂ ಅವರು ಜಾತಿಗಣತಿಗೆ ಮಾಹಿತಿ ನೀಡುವುದಿಲ್ಲ ಎನ್ನುವ ಸುಧಾಮೂರ್ತಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ʻಯಾರನ್ನೂ ಮಾಹಿತಿ ನೀಡಿ ಎಂದು ಬಲವಂತ ಮಾಡಲು ಆಗುವುದಿಲ್ಲ. ಇದು ಅವರ ಇಚ್ಚೆʼ ಎಂದರು.

TAGGED:BJP offercongressDK Shivakumarelectionಕಾಂಗ್ರೆಸ್ಚುನಾವಣೆಡಿಕೆ ಶಿವಕುಮಾರ್ಬಿಜೆಪಿ ಆಫರ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
3 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
4 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
4 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
4 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
4 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?