ಪತಿ, ನಟ ಚಂದನ್ ಮೇಲೆ ಆಗಿರುವ ಹಲ್ಲೆಗೆ ನಾನಂತೂ ನ್ಯಾಯ ಕೇಳುತ್ತೇನೆ. ಚಂದನ್ ಬರುತ್ತಾರೋ ಇಲ್ಲವೋ ಅದಕ್ಕಾಗಿ ನಾನು ಕಾಯುವುದಿಲ್ಲ. ನನ್ನ ಪತಿ ಮೇಲಿನ ಹಲ್ಲೆ ಎನ್ನುವುದಕ್ಕಿಂತ, ಒಬ್ಬ ಕಲಾವಿದನ ಮೇಲೆ ಆಗಿರುವ ಹಲ್ಲೆಗೆ ನಾನಂತೂ ನ್ಯಾಯ ಕೇಳುತ್ತೇನೆ ಎಂದು ನಟಿಯೂ ಆಗಿರುವ ಚಂದನ್ ಪತ್ನಿ ಕವಿತಾ ಗೌಡ ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಅವರು, ಈ ವಿಷಯ ನಿನ್ನೆಯಷ್ಟೇ ನನಗೆ ತಿಳಿಯಿತು ಎಂದು ತಿಳಿಸಿದ್ದಾರೆ.
- Advertisement 2
‘ನಾನು ಯಾರಿಗೂ ಹೊಡೆದಿಲ್ಲ. ಚಿಕ್ಕ ಹುಡುಗನ ಮೇಲೆ ಕೈ ಮಾಡುವವನೂ ನಾನಲ್ಲ. ಆ ಹುಡುಗನನ್ನು ಎಡಗೈಯಿಂದ ಜಸ್ಟ್ ತಟ್ಟಿದೆ. ಅದನ್ನೇ ಹೊಡೆದ್ರು ಅಂತ ಹೇಳ್ತಿದ್ದಾರೆ ಎಂದು ಚಂದನ್ ನನಗೆ ಹೇಳಿದರು. 10 ವರ್ಷದಿಂದ ಇರುವ ನಟನನ್ನ ಅವರು ಹಾಗೆ ಟ್ರೀಟ್ ಮಾಡಿದ್ದು ಸರಿ ಅಲ್ಲ. ಮೊದಲು ಅಲ್ಲಿ ಮೂರು ಜನ ಮಾತ್ರ ಇದ್ರಂತೆ. ಆಮೇಲೆ ಎಲ್ಲರನ್ನೂ ಕರೆಸಿ ಗಲಾಟೆ ಮಾಡಿದ್ದಾರೆ. ಇದು ಸರಿಯಾದ ಕ್ರಮವಲ್ಲ’ ಎನ್ನುತ್ತಾರೆ ಕವಿತಾ ಗೌಡ. ಇದನ್ನೂ ಓದಿ:ಡಿವೋರ್ಸ್ ನಂತರ ಮತ್ತೆ ಒಟ್ಟಿಗೆ ನಟಿಸಲಿದ್ದಾರೆ ನಾಗಚೈತನ್ಯ- ಸಮಂತಾ
- Advertisement 3
- Advertisement 4
ನಡೆದಿರೋದು ನಡೆದೋಗಿದೆ. ಆದರೂ, ಯಾರೂ ಅಲ್ಲ ಸಂಯಮ ತಗೆದುಕೊಂಡಿಲ್ಲ. ಕೆಟ್ಟದ್ದಾಗಿಯೇ ಮಾತನಾಡುತ್ತಾ ಕೇಳೋ ಸ್ವಾರಿ ಕೇಳೋ ಅಂತ ಟ್ರೀಟ್ ಮಾಡಿದ್ದಾರೆ. ಆ ವಿಡಿಯೋ ನೋಡಿ ನನಗಂತೂ ಬೇಸರವಾಯಿತು. ಕೆಲವರು ಕನ್ನಡದವರೂ ಅಲ್ಲಿದ್ದರು. ಅವರು ಯಾರೂ ಸಹಾಯಕ್ಕೆ ಬಂದಿಲ್ಲ. ನಾನೂ ತೆಲುಗು ಸೀರಿಯಲ್ ನಲ್ಲಿ ಆಕ್ಟ್ ಮಾಡಿದ್ದೀನಿ. ಆದರೆ, ಇಂತಹ ಘಟನೆಯನ್ನು ಯಾವತ್ತೂ ಕಂಡಿಲ್ಲ ಎನ್ನುವುದು ಕವಿತಾ ಗೌಡ ಮಾತು.