Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ನನ್ನ ಮಗಳಿಗೆ ಬಂದ ಹಣವನ್ನು ಜನ ಸೇವೆಗೆ ಕೊಡ್ತೀನಿ: ಮುಸ್ಕಾನ್‌ ತಂದೆ

Public TV
Last updated: April 6, 2022 7:44 pm
Public TV
Share
2 Min Read
muskan father
SHARE

ಮಂಡ್ಯ: ಅನೇಕರು ಬಂದು ನನ್ನ ಮಗಳಿಗೆ ಹಣ, ಉಡುಗೊರೆ ಕೊಟ್ಟಿದ್ದಾರೆ. ಅದನ್ನು ನಾನು ಜನರ ಸೇವೆಗಾಗಿ ನೀಡುತ್ತೇನೆಂದು ಅಲ್ಲಾಹು ಅಕ್ಬರ್‌ ಎಂದು ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್‌ ತಂದೆ ಮಹಮ್ಮದ್‌ ಹುಸೇನ್‌ ಖಾನ್‌ ತಿಳಿಸಿದ್ದಾರೆ.

ಹಣ, ಉಡುಗೊರೆ ಕೊಡಲು ಬಂದವರಿಗೆ ಬೇಡ ಎಂದಿದ್ದೆವು. ಆದರೂ ಅವರು ನೀಡಿದ್ದಾರೆ. ಆ ಹಣದಲ್ಲಿ ಜನರ ಸೇವೆಗಾಗಿ ಆಂಬುಲೆನ್ಸ್‌ ಕೊಡುತ್ತೇನೆ. ದೇವರು ನಮ್ಮನ್ನು ಚೆನ್ನಾಗಿ ಇಟ್ಟಿದ್ದಾನೆ. ಅವರು ಕೊಟ್ಟ ದುಡ್ಡನ್ನು ಜನಸೇವೆಗೆ ನೀಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಂಡ್ಯದ ಮುಸ್ಕಾನ್ ಖಾನ್‍ನನ್ನು ಹೊಗಳಿದ ಮೋಸ್ಟ್ ವಾಂಟೆಡ್ ಅಲ್ ಖೈದಾ ಉಗ್ರ

muskhan

ಅಲ್‌‌ಖೈದಾ ಉಗ್ರ ಸಂಘಟನೆ ಮುಖ್ಯಸ್ಥನಿಂದ ಮುಸ್ಕಾನ್ ಹೊಗಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರು ಯಾರು ಅನ್ನೋದು ನನಗೆ ಗೊತ್ತಿಲ್ಲ. ಮಾಧ್ಯಮಗಳ ಮುಖಾಂತರ ಈ ವಿಚಾರ ತಿಳಿಯಿತು. ಅರಬ್ಬಿ ಭಾಷೆಯಲ್ಲಿ ಮಗಳನ್ನು ಹೊಗಳಿದ್ದಾರೆ. ಆದರೆ ಅವರ ಬಗ್ಗೆ ನನಗೇನೂ ಗೊತ್ತಿಲ್ಲ. ಇದೆಲ್ಲಾ ತಪ್ಪು, ಗೊಂದಲ ಮಾಡಿ ನಮ್ಮ ನಮ್ಮಲ್ಲಿ ಜಗಳ ತಂದಿಡಲು ಮಾಡ್ತಿದ್ದಾರೆ. ಈ ರೀತಿಯ ಹೊಗಳಿಗೆ ಬೇಕಾಗಿಲ್ಲ. ಅವರ ಬಗ್ಗೆ ಏನು ಗೊತ್ತಿಲ್ಲದೇ ಇದ್ದಾಗ ನಾನೇನು ಹೇಳಲು ಸಾಧ್ಯ? ಹಿಜಾಬ್ ಹಿಂದೆ ಉಗ್ರ ಸಂಘಟನೆಗಳ ಕೈವಾಡ ಇರುವುದರ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ.

ಯಾರ‍್ಯಾರು ಏನೇನು ಮಾಡ್ತಿದ್ದಾರೋ ಗೊತ್ತಿಲ್ಲ‌. ನಾವು ಇಲ್ಲಿ ಬದುಕಿ ಜೀವನ ಮಾಡ್ತಿದ್ದೇವೆ. ಅಣ್ಣ ತಮ್ಮಂದಿರ ಹಾಗೆ ಪ್ರೀತಿ ಹಂಚಿ ಜೀವನ ಮಾಡ್ತಿದ್ದೇವೆ. ಬೇರೆ ದೇಶದವರು ಏನು ಮಾಡ್ತಿದ್ದಾರೋ ಗೊತ್ತಿಲ್ಲ. ನಮ್ಮ ದೇಶದಲ್ಲಿ ನಾವು ನೆಮ್ಮದಿಯಿಂದ ಇದ್ದೇವೆ. ಅವರ ದೇಶಗಳಲ್ಲಿ ಅವರು ನೋಡಿಕೊಳ್ಳಲಿ. ಅವರ ಮಾತುಗಳಿಗೆ ತಲೆಕೆಡಿಸಿಕೊಳ್ಳಲು ಆಗಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಮುಸ್ಕಾನ್‍ಳನ್ನು ಅಲ್‍ಖೈದಾ ಮುಖ್ಯಸ್ಥ ಬೆಂಬಲಿಸಿರುವುದು ಆತಂಕಕಾರಿ: ಮುತಾಲಿಕ್

hijab muskan

ಮಗಳ ಪರೀಕ್ಷೆ ವಿಚಾರವಾಗಿ ಮಾತನಾಡಿ, ಪರೀಕ್ಷೆ ವೇಳೆ ಪ್ರತ್ಯೇಕ ಕೊಠಡಿ ನೀಡುವಂತೆ ಕಾಲೇಜು ಪ್ರಾಂಶುಪಾಲರನ್ನ ಕೇಳಿಕೊಂಡಿದ್ದೆವು. ಹಿಜಬ್ ಬೇಡ ವೇಲು ಹಾಕಿಕೊಂಡು ಪರೀಕ್ಷೆ ಬರೆಯಲು ಅವಕಾಶ ಕೊಡಿ ಎಂದಿದ್ದೆವು. ಕಾಲೇಜು ಆಡಳಿತ ಮಂಡಳಿ ಅದಕ್ಕೆ ಅವಕಾಶ ನೀಡಲಿಲ್ಲ. ನನ್ನ ಮಗಳ ಪ್ರಾಣಕ್ಕೆ ಅಪಾಯ ಇದೆ. ನಾಳೆ ಮಗಳಿಗೆ ತೊಂದರೆ ಆದರೆ ಯಾರು ಜವಾಬ್ದಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಹಿಜಬ್‌ಗೆ ಅನುಮತಿ ಇರುವ ಕಾಲೇಜಿಗೆ ಮಗಳನ್ನು ಸೇರಿಸುತ್ತೇನೆ. ಹಿಜಬ್ ಕಾರಣಕ್ಕಾಗಿಯೇ ನಾನು ಮಗಳ ಕಾಲೇಜನ್ನು ಬದಲಾಯಿಸುತ್ತಿದ್ದೇನೆ. ಹಿಜಬ್ ಅಥವಾ ವೇಲು ಹಾಕಿಕೊಳ್ಳಲು ಅವಕಾಶ ನೀಡಿದರೆ ಮಂಡ್ಯದಲ್ಲೇ ದಾಖಲಿಸುತ್ತೇವೆ. ಇಲ್ಲ ಅಂದ್ರೆ, ಮೈಸೂರಿನಲ್ಲಿ ಹಿಜಬ್ ಅನುಮತಿ ನೀಡುವ ಕಾಲೇಜುಗಳಿವೆ. ಅಲ್ಲಿಯೇ ಸೇರಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮಗೆ ಮಾನವೀಯತೆಯಲ್ಲಿ ನಂಬಿಕೆ ಇದ್ದರೆ, ಬಿಜೆಪಿ ಮನುವಾದದಲ್ಲಿ ನಂಬಿಕೆ ಇಟ್ಟಿದೆ: ಸಿದ್ದರಾಮಯ್ಯ

ನನ್ನ ಮಗಳಿಗೆ ಜೀವ ಭಯ ಇದೆ. ಮಗಳ ಜವಾಬ್ದಾರಿ ತೆಗೆದುಕೊಳ್ತೀರಾ ಅಂತ ಕಾಲೇಜಿನವರನ್ನ ಕೇಳಿದೆ. ಅವರು ಆಗಲ್ಲ ಅಂದ್ರು. ಅದಕ್ಕಾಗಿ ಬೇರೆ ಕಾಲೇಜಿಗೆ ದಾಖಲಿಸುತ್ತೇನೆ. ಸಮವಸ್ತ್ರಕ್ಕೆ ನಾವೇ ಶುಲ್ಕ ಕಟ್ಟೋದು. ಕಾಲೇಜಿನವರು ನಮ್ಮ ಕರೆಸಿ ಸಮವಸ್ತ್ರ ನೀಡುತ್ತಿದ್ದೇವೆ ಎಂದು ಹೇಳಿದ್ದಾರಾ? ಈ ಘಟನೆ ಬಳಿಕ ಅಲ್ಲಿನ ಸ್ಥಿತಿ ಅರ್ಥ ಆಗಿದೆ‌. ಯಾರ ಹೊಗಳಿಕೆ, ಉಡುಗೊರೆ ನಮಗೆ ಬೇಡ. ನಾವು ಎಲ್ಲರ ಜೊತೆ ಅಣ್ಣ, ತಮ್ಮಂದಿರ ಹಾಗೇ ಇದ್ದೇವೆ. ಕರ್ನಾಟಕದ ಜನ ಯಾರ ಮಾತನ್ನು ನಂಬಬೇಡಿ. ಉಗ್ರ ಸಂಘಟನೆ ಮುಖ್ಯಸ್ಥನ ಹೊಗಳಿಗೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

TAGGED:Hijabmandyamuskanmuskan fatherಮಂಡ್ಯಮುಸ್ಕಾನ್ಮುಸ್ಕಾನ್‌ ತಂದೆಹಿಜಬ್
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
4 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
1 day ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
1 day ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

HD Kumaraswamy 1
Bengaluru City

ಅಲ್ಲಿ ಹೆಣಗಳು ಬಿದ್ದಿವೆ, ಇವರು ಕಪ್‌ಗೆ ಮುತ್ತು ಕೊಟ್ಟುಕೊಂಡು ನಿಂತಿದ್ದಾರೆ: ಸಿಎಂ, ಡಿಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ

Public TV
By Public TV
7 minutes ago
bjp leaders visits hospitals
Bengaluru City

ಕಾಲ್ತುಳಿತ ಪ್ರಕರಣ; ಆಸ್ಪತ್ರೆಗಳಿಗೆ ಬಿಜೆಪಿ ನಾಯಕರು ಭೇಟಿ – ನ್ಯಾಯಾಂಗ ತನಿಖೆಗೆ ಆಗ್ರಹ

Public TV
By Public TV
33 minutes ago
bengaluru stambede rcb
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ, 11 ಮಂದಿ ಸಾವು – ಮೃತರು ಯಾರು? ಇಲ್ಲಿದೆ ವಿವರ

Public TV
By Public TV
40 minutes ago
droupadi murmu rahul gandhi
Latest

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ – ರಾಷ್ಟ್ರಪತಿ, ರಾಹುಲ್‌ ಗಾಂಧಿ ಸೇರಿ ಗಣ್ಯರ ಸಂತಾಪ

Public TV
By Public TV
2 hours ago
Vijaya Mallya 1
Bengaluru City

ಆರ್‌ಸಿಬಿ ಅಭಿಮಾನಿಗಳ ಸಾವಿಗೆ ಸಂತಾಪ ಸೂಚಿಸಿದ ವಿಜಯ್‌ ಮಲ್ಯ

Public TV
By Public TV
2 hours ago
siddaramaiah
Bengaluru City

ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಸಿಎಂ ಘೋಷಣೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?