ಸಮನ್ಸ್ ಬಂದರೆ ತಕ್ಷಣ ವಿಚಾರಣೆಗೆ ಹಾಜರಾಗ್ತೇನೆ – ಡಿ.ಕೆ.ಸುರೇಶ್

Public TV
1 Min Read
dk suresh 1

– ನನಗೆ ಯಾವ ನೋಟಿಸ್ ಬಂದಿಲ್ಲ

ನವದೆಹಲಿ: ಈವರೆಗೆ ಜಾರಿ ನಿರ್ದೇಶನಾಲಯದಿಂದ ಯಾವುದೇ ಸಮನ್ಸ್ ಬಂದಿಲ್ಲ. ನನಗೆ ಸಮನ್ಸ್ ನೀಡಿದರೆ ಬಂದು ಕ್ಷಣವೂ ತಡಮಾಡದೇ ಸಂಬಂಧಪಟ್ಟ ಅಧಿಕಾರಿಗಳ ಬಳಿ ಹಾಜರಾಗುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಈವರೆಗೆ ಯಾವುದೇ ನೋಟಿಸ್ ಬಂದಿಲ್ಲ. ಸಮನ್ಸ್ ಜಾರಿಯಾಗಿರುವ ಬಗ್ಗೆ ಮಾಹಿತಿ ಇಲ್ಲ. ಒಂದು ವೇಳೆ ಸಮನ್ಸ್ ಜಾರಿಯಾದರೆ ಒಂದು ಕ್ಷಣವೂ ತಡ ಮಾಡದೆ ವಿಚಾರಣೆಗೆ ಹಾಜರಾಗುತ್ತೇನೆ. ನನ್ನ ಬಳಿ ಮುಚ್ಚಿಡುವ ವ್ಯವಸ್ಥೆಗಳೇನು ಇಲ್ಲ ಎಂದು ತಿಳಿಸಿದರು.

DKShi DK Suresh

ಸಮನ್ಸ್ ಜಾರಿಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಸುಮಾರು ದಿನಗಳಿಂದಲೂ ವರದಿಯಾಗುತ್ತಿದೆ. ನನಗೆ ಈ ಕುರಿತು ಯಾವ ಮಾಹಿತಿಯೂ ಇಲ್ಲ ಎಂದು ದೆಹಲಿಯಲ್ಲಿ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದರು.

ಡಿ.ಕೆ.ಶಿವಕುಮಾರ್ ಅವರನ್ನು ಈಗತಾನೆ ಭೇಟಿ ಮಾಡಿ ಬಂದಿದ್ದೇನೆ. ಅವರೂ ಆರೋಗ್ಯವಾಗಿದ್ದಾರೆ. ಎಲ್ಲ ಎದುರಿಸಲು ಮನಸಿಕವಾಗಿ ಸಿದ್ಧವಾಗಿದ್ದಾರೆ. ಇವು ಕಷ್ಟದ ದಿನಗಳು ಎಂದು ತಿಳಿದುಕೊಂಡು ಇದರಿಂದ ಆದಷ್ಟು ಬೇಗ ಹೊರ ಬರುವ ಪ್ರಯತ್ನವನ್ನು ಮಾಡುತ್ತೇವೆ. ಅ. 9ರವರೆಗೆ ನ್ಯಾಯಾಲಯಕ್ಕೆ ರಜೆ ಇದೆ. ಹೀಗಾಗಿ 14ನೇ ತಾರೀಖಿಗೆ ವಿಚಾರಣೆಗೆ ತೆಗೆದುಕೊಂಡಿದ್ದಾರೆ. 10ರಂದು ವಿಚಾರಣೆ ನಡೆಸಲು ನ್ಯಾಯಾಧೀಶರು ಸಿದ್ಧರಿದ್ದರು. ಆದರೆ ರಜೆ ಇರುವುದರಿಂದ ವಕೀಲರು ಅಧಿಕಾರಿಗಳು ರಜೆ ಬೇಕು ಎಂದು ಕೇಳಿದರು ಹೀಗಾಗಿ 14ಕ್ಕೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದ್ದಾರೆ ಎಂದು ಮಾಹಿತಿ ನೀಡಿದರು. ಡಿ.ಕೆ.ಸುರೇಶ್ ನಿವಾಸಕ್ಕೆ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ಶಾಸಕ ಹ್ಯಾರಿಸ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

dk shi tihar

ಸಂಸದ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ ಎನ್ನುವ ವಿಚಾರ ಇಡಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *