ಓಪನ್ ಚಾಲೆಂಜ್ ಗೀಪನ್ ಚಾಲೆಂಜ್ ಇವೆಲ್ಲಾ ನಂಗೆ ಗೊತ್ತಿಲ್ಲ- ನಿಖಿಲ್

Public TV
1 Min Read
NIKHIL1

ಮೈಸೂರು: ನಾನು ಯಾವ ಓಪನ್ ಚಾಲೆಂಜ್ ಕೂಡ ಕೊಟ್ಟಿಲ್ಲ. ಓಪನ್ ಚಾಲೆಂಜ್ ಗಿಪನ್ ಚಾಲೆಂಜ್ ನಂಗೆ ಗೊತ್ತಿಲ್ಲ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಕೆಆರ್ ನಗರದ ಬ್ಯಾಡರಹಳ್ಳಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಅಭಿವೃದ್ಧಿ ಕುರಿತ ನಿಖಿಲ್ ಚಾಲೆಂಜ್ ಸ್ವೀಕರಿಸಿದ್ದೇನೆ ಎಂದು ಸುಮಲತಾ ಅಂಬರೀಶ್ ಹೇಳಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಂಗೆ ಅದರ ಬಗ್ಗೆ ಗೊತ್ತಿಲ್ಲ. ನಾನು ಲೈವ್ ಆಗಿ ಗ್ರಾಮಗಳಿಗೆ ಭೇಟಿ ಕೊಟ್ಟು ಅಲ್ಲಿನ ತಂದೆ-ತಾಯಂದಿರು ಏನು ಸಮಸ್ಯೆಗಳ ಬಗ್ಗೆ ಮಾತಾಡುತ್ತಾ ಇದ್ದಾರೆಯೋ ಅವರಿಗೆ ನಾನು ಉತ್ತರಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

vlcsnap 2019 04 10 13h11m23s150

ಇಲ್ಲಿ ಬೇರೆಯವರಿಗೆ ಉತ್ತರ ನೀಡುವ ಅಗತ್ಯವಿಲ್ಲ. ಹೀಗಾಗಿ ಏ.18ರ ವರೆಗೆ ಸಮಯ ವ್ಯರ್ಥ ಮಾಡದೇ ದಯವಿಟ್ಟು ಪ್ರಚಾರ ಮಾಡೋದಕ್ಕೆ ಹೇಳಿ. ಈ ಮೂಲಕ ಜನರ ಪ್ರೀತಿ, ವಿಶ್ವಾಸ ಸಂಪಾದನೆ ಮಾಡಲು ಹೇಳಿ. ಆಮೇಲೆ ಮಾತನಾಡೋಣ ಎಂದು ನಿಖಿಲ್ ಸಲಹೆ ನೀಡಿದ್ದಾರೆ.

ಚಾಲೆಂಜ್ ಏನು? 
ಅಂಬರೀಶ್ ಮತ್ತು ನನ್ನ ಬಗ್ಗೆ ಮಾತನಾಡುವುದನ್ನು ಬಿಟ್ಟು ಅಭಿವೃದ್ಧಿ ಬಗ್ಗೆ ಮಾತನಾಡಿ. ಎಲ್ಲಿ ಬೇಕಾದರೂ, ಯಾವ ವೇದಿಕೆಯಲ್ಲಾದರೂ ಚರ್ಚೆ ಮಾಡಿ. ನಿಖಿಲ್ ಜೊತೆ ಬಹಿರಂಗ ಚರ್ಚೆಗೆ ಸಿದ್ಧಳಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಸವಾಲನ್ನು ಸುಮಲತಾ ಸ್ವೀಕರಿಸಿದ್ದರು.

ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು, ಸುಮ್ಮನೆ ಒಬ್ಬೊಬ್ಬರ ಕಾಲೆಳೆದುಕೊಂಡು ಮಾತನಾಡುವುದನ್ನು ಬಿಟ್ಟು ಅಭಿವೃದ್ಧಿ ಬಗ್ಗೆ ಮಾತನಾಡೋಣ, ಬಹಿರಂಗ ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ದರು. ಇದಕ್ಕೆ Any time, any where..I am ready ಎನ್ನುವ ಮೂಲಕ ನಿಖಿಲ್ ಸವಾಲು ಸ್ವೀಕರಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *