ಬೆಂಗಳೂರು: ದಯಾಯನಂದ ಸ್ವಾಮೀಜಿಯ ಜೊತೆ ರಾಸಲೀಲೆಯಲ್ಲಿ ತೊಡಗಿರೋದು ಸ್ಯಾಂಡಲ್ ವುಡ್ ನಟಿ ಕಾವ್ಯ ಆಚಾರ್ಯ ಎಂಬ ವದಂತಿ ವೀಡಿಯೋ ರಿಲೀಸ್ ಆದ ಹೊತ್ತಿನಿಂದಲೂ ಹರಿದಾಡ್ತಿತ್ತು.
ಆದರೆ ಈ ಬಗ್ಗೆ ನಟಿ ಕಾವ್ಯಾ ಆಚಾರ್ಯ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ. ನಾನು ಈಗ ತಾನೇ ಈ ಸುದ್ದಿ ಕೇಳಿದೆ. ಆದರೆ ಅದು ನಾನಲ್ಲ. ನಿಮಗೆ ಗೊತ್ತಿದೆ ಯಾರು ಬೇಕಾದರೂ ಹೀಗೆ ಮಾಡ್ತಾರೆ. ಯಾರೋ ಬೇಕಂತಾನೇ ನನ್ನ ಹೆಸರು ಪ್ರಸ್ತಾಪಿಸಿದ್ದಾರೆ. ಈ ರೀತಿ ಮಾಡುವವರು ಇರುತ್ತಾರೆ. ನನಗೆ ಯಾವ ಸ್ವಾಮೀಜಿಯೂ ಗೊತ್ತಿಲ್ಲ. ನನಗೂ ಇದಕ್ಕೂ ಏನು ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
- Advertisement 2
- Advertisement 3
ರಾಜ್ಯದ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ಹುಣಸಮಾರನಹಳ್ಳಿಯ ಜಂಗಮ ಮಠದ ಪೀಠಾಧ್ಯಕ್ಷನಾಗಲು ಮುಂದಾಗಿದ್ದ ದಯಾನಂದ್ ಮಹಿಳೆಯ ಜೊತೆ ರಾಸಲೀಲೆಯಲ್ಲಿ ತೊಡಗಿರೋ ದೃಶ್ಯ ಇಂದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಈ ಸ್ವಾಮೀಜಿಯ ಜೊತೆ ರಾಸಲೀಲೆಯಲ್ಲಿ ತೊಡಗಿರುವುದು ನಟಿ ಕಾವ್ಯಾ ಆಚಾರ್ಯ ಎಂಬ ವದಂತಿ ಹರಡಿತ್ತು.
- Advertisement 4