ಬೆಂಗಳೂರು: ಕಲಬುರಗಿಯ (Kalaburagi) ಚಿಂಚೋಳಿ ತಾಲೂಕಿನ ಶಿರೊಳ್ಳಿಯಲ್ಲಿ ನನ್ನ ಹೆಸರು ಹೇಳಿ ಆತ್ಮಹತ್ಯೆ ಮಾಡಿಕೊಂಡ ಶಿವಕುಮಾರ್ (Shivakumar) ಯಾರು ಅಂತ ನನಗೆ ಗೊತ್ತೆ ಇಲ್ಲಾ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ (Sharana Prakash Patil) ಹೇಳಿದ್ದಾರೆ.
ಬೆಂಗಳೂರಿನಲ್ಲಿ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡವರು ಯಾರು ಅಂತಲೇ ನನಗೆ ಗೊತ್ತಿಲ್ಲ. ನನಗೆ ಅದರ ಮಾಹಿತಿಯೂ ಇಲ್ಲ. ಮಾಧ್ಯಮಗಳಲ್ಲಿ ಬಂದ ನಂತರ ಅವರ ಊರಿಗೆ ಕರೆ ಮಾಡಿ ವಿಚಾರಿಸಿದೆ ಎಂದರು. ಇದನ್ನೂ ಓದಿ: ಸಚಿವರಿಂದ ನನಗೆ ಕಿರುಕುಳ – ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು
ಅಲ್ಲಿನವರು ನಿಮ್ಮ ಬಗ್ಗೆ ಎಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ. ಆ ರೀತಿಯ ಕೆಲಸ ಯಾವತ್ತೂ ನಾನು ರಾಜಕೀಯ ಜೀವನದುದ್ದಕ್ಕೂ ಮಾಡಿಲ್ಲ. ಐ ಡೋಂಟ್ ನೋ, ಹೂ ಈಸ್ ಹಿ…? ನಾನು ನೋಡೆ ಇಲ್ಲಾ ಅವರನ್ನು. ಅವರಿಗೆ ಏನು ತೊಂದರೆ ಆಯ್ತು ಅಂತಾನೂ ಗೊತ್ತಿಲ್ಲ. ಅವರು ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೆ ಅನ್ನೋದನ್ನು ಪರಿಶೀಲನೆ ಮಾಡಲಿ. ನನಗಂತೂ ಅವರು ಯಾರು ಅಂತಲೇ ಗೊತ್ತಿಲ್ಲ ಎಂದಿದ್ದಾರೆ.
Web Stories